INDW vs SAW: ಭಾರತಕ್ಕೆ ಭರ್ಜರಿ ಜಯ: ಸರಣಿ ಸಮಬಲ

India Women vs South Africa: ಭಾರತ ಮತ್ತು ಸೌತ್ ಆಫ್ರಿಕಾ ಮಹಿಳಾ ತಂಡಗಳ ಸರಣಿಯು ಅಂತ್ಯವಾಗಿದೆ. ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದ್ದ ಟೀಮ್ ಇಂಡಿಯಾ, ಏಕೈಕ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

INDW vs SAW: ಭಾರತಕ್ಕೆ ಭರ್ಜರಿ ಜಯ: ಸರಣಿ ಸಮಬಲ
Team India
Follow us
|

Updated on: Jul 10, 2024 | 8:41 AM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯು 1-1 ಅಂತರದ ಸಮಬಲದೊಂದಿಗೆ ಅಂತ್ಯಗೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ (Team India) ನಾಯಕ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು.

ನಾಯಕಿಯ ನಿರ್ಧಾರವನ್ನು ಸಮರ್ಥಿಸುವಂತೆ ಕರಾರುವಾಕ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಸೌತ್ ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು. ನಾಲ್ಕನೇ ಓವರ್​ನಲ್ಲಿ ಲಾರಾ (9) ವಿಕೆಟ್ ಕಬಳಿಸುವ ಮೂಲಕ ಶ್ರೇಯಾಂಕಾ ಪಾಟೀಲ್ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಪೂಜಾ ವಸ್ತ್ರಾಕರ್ ಮರಿಝನ್ನೆ ಕಪ್​ (10) ಗೆ ಪೆವಿಲಿಯನ್ ಹಾದಿ ತೋರಿಸಿದರು. ಮತ್ತೊಂದೆಡೆ ದೀಪ್ತಿ ಶರ್ಮಾ ಬ್ರಿಟ್ಸ್ (20) ವಿಕೆಟ್ ಕಬಳಿಸಿದರು. ಇನ್ನು ಅನ್ನೆಕೆ (17) ಯನ್ನು ಎಲ್​ಬಿ ಬಲೆಗೆ ಬೀಳಿಸುವಲ್ಲಿ ಪೂಜಾ ವಸ್ತ್ರಾಕರ್ ಯಶಸ್ವಿಯಾದರು.

ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 65 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಸಂಕಷ್ಟದಿಂದ ಪಾರಾಗುವ ಮುನ್ನವೇ 17.1 ಓವರ್​ಗಳಲ್ಲಿ 84 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾದರು.

ಭಾರತದ ಪರ ಪೂಜಾ ವಸ್ತ್ರಾಕರ್ 3.1 ಓವರ್​ಗಳಲ್ಲಿ 13 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ರಾಧಾ ಯಾದವ್ 3 ಓವರ್​ಗಳಲ್ಲಿ 6 ರನ್ ನೀಡಿ 3 ವಿಕೆಟ್ ಉರುಳಿಸಿ ಮಿಂಚಿದರು.

ಇನ್ನು 85 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಸ್ಪೋಟಕ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ 40 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 54 ರನ್ ಸಿಡಿಸಿದರು.

ಮತ್ತೊಂದೆಡೆ ಶಫಾಲಿ ವರ್ಮಾ ಅಜೇಯ 27 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 10.5 ಓವರ್​ಗಳಲ್ಲಿ 88 ರನ್ ಬಾರಿಸಿ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಸರಣಿ ಸಮಬಲ:

ಈ ಗೆಲುವಿನೊಂದಿಗೆ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಮೊದಲ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 12 ರನ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಹೀಗಾಗಿ ಮೂರನೇ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿತ್ತು. ಅದರಂತೆ ಅಂತಿಮ ಪಂದ್ಯದಲ್ಲಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಭಾರತ ತಂಡವು ಸರಣಿಯನ್ನು 1-1 ಅಂತರದಿಂದ ಅಂತ್ಯಗೊಳಿಸಿದೆ.

ಭಾರತ ಪ್ಲೇಯಿಂಗ್ 11: ಶಫಾಲಿ ವರ್ಮಾ , ಸ್ಮೃತಿ ಮಂಧಾನ , ಜೆಮಿಮಾ ರೊಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ದೀಪ್ತಿ ಶರ್ಮಾ , ಉಮಾ ಚೆಟ್ರಿ (ವಿಕೆಟ್ ಕೀಪರ್) , ಎಸ್ ಸಜನಾ , ಪೂಜಾ ವಸ್ತ್ರಾಕರ್ , ಶ್ರೇಯಾಂಕಾ ಪಾಟೀಲ್ , ಅರುಂಧತಿ ರೆಡ್ಡಿ , ರಾಧಾ ಯಾದವ್.

ಇದನ್ನೂ ಓದಿ: ಮಳೆ ಬಂದರೂ ನೋ ಟೆನ್ಶನ್… ಆಸ್ಟ್ರೇಲಿಯಾದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಲಾರಾ ವೊಲ್ವಾರ್ಡ್ಟ್ (ನಾಯಕಿ), ತಜ್ಮಿನ್ ಬ್ರಿಟ್ಸ್, ಡೆಲ್ಮಿ ಟಕರ್, ಸುನೆ ಲೂಸ್, ಮರಿಝನ್ನೆ ಕಪ್, ನಾಡಿನ್ ಡಿ ಕ್ಲರ್ಕ್, ಎಲಿಜ್-ಮಾರಿ ಮಾರ್ಕ್ಸ್, ಸಿನಾಲೊ ಜಾಫ್ತಾ (ವಿಕೆಟ್ ಕೀಪರ್), ಅಯಾಬೊಂಗಾ ಖಾಕಾ, ನಾನ್ಕುಲುಲೆಕೊ ಮ್ಲಾಬಾ, ಅನ್ನೆಕೆ ಬಾಷ್,

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ