AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಸಾಂಘಿಕ ಹೋರಾಟ; ವಿಂಡೀಸ್ ವಿರುದ್ಧ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

IND vs WI: ಭಾರತ ಮಹಿಳಾ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ 2-1 ಅಂತರದಿಂದ ಜಯಗಳಿಸಿದೆ. ಮೂರನೇ ಮತ್ತು ನಿರ್ಣಾಯಕ ಪಂದ್ಯದಲ್ಲಿ ಭಾರತ ವನಿತಾ ಪಡೆ 60 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತು. ಸ್ಮೃತಿ ಮಂಧಾನ ಅವರ 77 ರನ್‌ ಮತ್ತು ರಿಚಾ ಘೋಷ್ ಅವರ 54 ರನ್‌ಗಳ ಇನ್ನಿಂಗ್ಸ್ ಭಾರತದ ಗೆಲುವಿಗೆ ಪ್ರಮುಖ ಕಾರಣವಾಯಿತು.

IND vs WI: ಸಾಂಘಿಕ ಹೋರಾಟ; ವಿಂಡೀಸ್ ವಿರುದ್ಧ ಟಿ20 ಸರಣಿ ಗೆದ್ದ ಟೀಂ ಇಂಡಿಯಾ
ಭಾರತ ವನಿತಾ ಪಡೆ
ಪೃಥ್ವಿಶಂಕರ
|

Updated on:Dec 19, 2024 | 10:51 PM

Share

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ ಇದೀಗ ಮತ್ತೆ ತನ್ನ ಗೆಲುವಿನ ಹಾದಿಗೆ ಮರಳಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 60 ರನ್‌ಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದು, ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಬರೋಬ್ಬರಿ 217 ರನ್​ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ157 ರನ್‌ಗಳಿಸಲಷ್ಟೇ ಶಕ್ತವಾಗಿ 60 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಂಡಿದ್ದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 9 ವಿಕೆಟ್‌ಗಳಿಂದ ಗೆದ್ದುಬೀಗಿತ್ತು. ಹೀಗಾಗಿ ಇಂದು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗುತ್ತಿತ್ತು. ಅದರಂತೆ ನಿರ್ಣಾಯಕ ಪಂದ್ಯದಲ್ಲಿ ಸಾಂಘಿಕ ಹೋರಾಟ ನೀಡಿದ ಭಾರತ ವನಿತಾ ಪಡೆ ಅಮೋಘ ಗೆಲುವು ದಾಖಲಿಸಿತು.

ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಓವರ್​ನ ಎರಡನೇ ಎಸೆತದಲ್ಲೇ ಆರಂಭಿಕ ಆಟಗಾರ್ತಿ ಉಮಾ ಛೆಟ್ರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಆದರೆ ಇಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಸ್ಮೃತಿ ಮಂಧಾನ ಹಾಗೂ ಜೆಮಿಮಾ ರಾಡ್ರಿಗಸ್ 2ನೇ ವಿಕೆಟ್​ಗೆ 98 ರನ್​ಗಳ ಕಾಣಿಕೆ ನೀಡಿದರು.

ಸ್ಮೃತಿ ಹ್ಯಾಟ್ರಿಕ್ ಅರ್ಧಶತಕ

ಈ ಇಬ್ಬರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಮೊದಲ 10 ಓವರ್​ಗಳಲ್ಲೇ ತಂಡ 99 ರನ್​ ಕಲೆಹಾಕಿತು. ಆರಂಭದಿಂದಲೂ ಹೊಡಿಬಡಿ ಆಟಕ್ಕೆ ಮುಂದಾದ ಸ್ಮೃತಿ ಕೇವಲ 27 ಎಸೆತಗಳಲ್ಲಿ ತಮ್ಮ 30ನೇ ಅರ್ಧಶತಕ ಪೂರೈಸಿದರು. ಅಲ್ಲದೆ ಇದು ಈ ಸರಣಿಯಲ್ಲಿ ಸ್ಮೃತಿ ಅವರ ಮೂರನೇ ಅರ್ಧಶತಕ ಕೂಡ ಆಗಿತ್ತು. ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 47 ಎಸೆತಗಳನ್ನು ಎದುರಿಸಿದ ಸ್ಮೃತಿ 13 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 77 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಜೆಮಿಮಾ ಕೂಡ 39 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು.

ರಿಚಾ ಸಿಡಿಲಬ್ಬರದ ಬ್ಯಾಟಿಂಗ್

ಈ ಇಬ್ಬರ ವಿಕೆಟ್ ಪತನದ ಬಳಿಕ ಜೊತೆಯಾದ ರಾಘ್ವಿ ಹಾಗೂ ರಿಚಾ ಘೋಷ್ ಮೈದಾನದಲ್ಲಿ ಬೌಂಡರಿಗಳ ಮಳೆಗರೆದರು. ಒಂದೆಡೆ ರಿಚಾ ವಿಂಡೀಸ್ ಬೌಲರ್​ಗಳ ಬೆವರಳಿಸಿದರೆ, ಇನ್ನೊಂದೆಡೆ ರಾಘ್ವಿ, ರಿಚಾಗೆ ಉತ್ತಮ ಸಾಥ್ ನೀಡಿದರು. ಕೊನೆಯವರೆಗೂ ಅಜೇಯರಾಗಿ ಉಳಿದ ರಾಘ್ವಿ 22 ಎಸೆತಗಳಲ್ಲಿ 31 ರನ್​ಗಳ ಕಾಣಿಕೆ ನೀಡಿದರೆ, ರಿಚಾ ಘೋಷ್ 21 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್ ಸಹಿತ 54 ರನ್ ಬಾರಿಸಿ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

ವಿಂಡೀಸ್​ಗೆ 60 ರನ್​ಗಳ ಸೋಲು

ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಬಹುಬೇಗನೇ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆದರೆ ನಾಯಕಿ ಹೇಲಿ ಮ್ಯಾಥ್ಯೂಸ್ ಮತ್ತು ಅನುಭವಿ ಬ್ಯಾಟ್ಸ್‌ಮನ್ ಡಿಯಾಂಡ್ರಾ ಡಾಟಿನ್ ಉತ್ತಮ ಜೊತೆಯಾಟವನ್ನು ರಚಿಸುವ ಮೂಲಕ ತಂಡದ ಭರವಸೆಯನ್ನು ಜೀವಂತವಾಗಿರಿಸಿದರು. ಇಬ್ಬರ ನಡುವೆ 37 ರನ್‌ಗಳ ತ್ವರಿತ ಜೊತೆಯಾಟವಿತ್ತು. ಆದರೆ ಎಡಗೈ ಸ್ಪಿನ್ನರ್ ರಾಧಾ ಯಾದವ್ ಮ್ಯಾಥ್ಯೂಸ್ ಅವರನ್ನು ಔಟ್ ಮಾಡುವ ಮೂಲಕ ಈ ಜೊತೆಯಾಟವನ್ನು ಮುರಿದರು. ಇದಾದ ಬಳಿಕ ಯುವ ವೇಗಿ ಟೈಟಾಸ್ ಸಾಧು ಡಾಟಿನ್ ಅವರನ್ನು ಔಟ್ ಮಾಡುವ ಮೂಲಕ ವೆಸ್ಟ್ ಇಂಡೀಸ್ ತಂಡದ ಭರವಸೆಗೆ ಪೆಟ್ಟು ನೀಡಿದರು. ಶಿನೆಲ್ ಹೆನ್ರಿ ಕೇವಲ 16 ಎಸೆತಗಳಲ್ಲಿ 43 ರನ್ ಗಳಿಸಿ ಟೀಂ ಇಂಡಿಯಾಗೆ ಕೊಂಚ ಭಯ ಹುಟ್ಟಿಸಿದರೂ ರೇಣುಕಾ ಸಿಂಗ್ ಅವರನ್ನು ಔಟ್ ಮಾಡುವ ಮೂಲಕ ಬಿಗ್ ರಿಲೀಫ್ ನೀಡಿದರು. ಇದಾದ ಬಳಿಕ ವಿಂಡೀಸ್ ತಂಡದ ಕೆಳ ಕ್ರಮಾಂಕ ಪೆವಿಲಿಯನ್ ಪರೇಡ್ ನಡಿಸಿದ ಪರಿಣಾಮ ಇಡೀ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಶಕ್ತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 pm, Thu, 19 December 24

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ