AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಪಾಕ್ ಪ್ರವಾಸ ಕೈಗೊಳ್ಳದಿರಲು ಟೀಮ್ ಇಂಡಿಯಾ ನಿರ್ಧಾರ..!

India vs Pakistan: ಭಾರತ ಕೊನೆಯದಾಗಿ 2005-06ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ದ್ವಿಪಕ್ಷೀಯ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು.

Asia Cup 2023: ಪಾಕ್ ಪ್ರವಾಸ ಕೈಗೊಳ್ಳದಿರಲು ಟೀಮ್ ಇಂಡಿಯಾ ನಿರ್ಧಾರ..!
India vs Pakistan
TV9 Web
| Updated By: ಝಾಹಿರ್ ಯೂಸುಫ್|

Updated on:Oct 18, 2022 | 3:23 PM

Share

2023ರ ಏಷ್ಯಾಕಪ್‌ಗಾಗಿ (Asia Cup 2023) ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಮುಂಬೈನಲ್ಲಿ ನಡೆದ 91ನೇ ಬಿಸಿಸಿಐ (BCCI) ವಾರ್ಷಿಕ ಸಾಮಾನ್ಯ ಸಭೆಯ (AGM) ಬಳಿಕ ಮಾತನಾಡಿದ ಜಯ್​ ಶಾ, ಮುಂದಿನ ಏಷ್ಯಾಕಪ್​ಗಾಗಿ ಭಾರತ ತಂಡವು  ಪಾಕಿಸ್ತಾನ್ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ತಿಳಿಸಿದರು. 2023ರ ಏಷ್ಯಾ ಕಪ್  ಟೂರ್ನಿಯನ್ನು ಪಾಕಿಸ್ತಾನವು ಆಯೋಜಿಸಲಿದೆ. ಆದರೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಟೀಮ್ ಇಂಡಿಯಾವನ್ನು ಕಳುಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಅಷ್ಟೇ ಅಲ್ಲದೆ ಏಷ್ಯಾಕಪ್ 2023 ಅನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಮನವಿ ಮಾಡಲಾಗಿದೆ.

ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಯೋಜಿಸಿದರೆ ಭಾರತ ತಂಡವು ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ. ಬದಲಾಗಿ ಪಾಕ್ ಕ್ರಿಕೆಟ್ ಮಂಡಳಿ ಬೇರೆ ದೇಶದಲ್ಲಿ ಟೂರ್ನಿಯನ್ನು ಆಯೋಜಿಸಿದರೆ ಮಾತ್ರ ಟೀಮ್ ಇಂಡಿಯಾ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಪಿಸಿಬಿ ಇನ್ನೂ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದಾಗ್ಯೂ ಈ ಸಂಬಂಧ ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ.

ಭಾರತ ಕೊನೆಯದಾಗಿ 2005-06ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ದ್ವಿಪಕ್ಷೀಯ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. ಇನ್ನು ಪಾಕಿಸ್ತಾನ್ ತಂಡವು 2012-13ರಲ್ಲಿ ಕೊನೆಯ ಬಾರಿ ಭಾರತದಲ್ಲಿ ಸರಣಿ ಆಡಿತ್ತು. ಇದಾದ ಬಳಿಕ ಉಭಯ ದೇಶಗಳು ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಆಡಿಲ್ಲ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಇದಾಗ್ಯೂ ಏಷ್ಯಾಕಪ್ ಹಾಗೂ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿತ್ತು. ಆದರೆ ಮುಂದಿನ ವರ್ಷ ಪಾಕಿಸ್ತಾನದಲ್ಲಿ ಏಷ್ಯಾಕಪ್​ ನಡೆಯಲಿದ್ದು, ಆದರೆ ಅದಕ್ಕೂ ಮುನ್ನ ಭಾರತ ತಂಡವು ಟೂರ್ನಿಯಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದೆ.

ಹೀಗಾಗಿ ಪಾಕ್ ಕ್ರಿಕೆಟ್ ಬೋರ್ಡ್ ಟೂರ್ನಿಯನ್ನು ಯುಎಇ ನಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿ ಏಷ್ಯಾಕಪ್​ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ರಾಜಕೀಯ ಅರಾಜಕತೆಯ ಕಾರಣ ಟೂರ್ನಿಯನ್ನು ಯುಎಇ ಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಭಾರತ-ಪಾಕಿಸ್ತಾನ್ ನಡುವೆ ಯಾವುದೇ ರಾಜತಾಂತ್ರಿಕ ಸಂಬಂಧಗಳು ಸುಧಾರಣೆಯಾಗಿಲ್ಲ. ಅಷ್ಟೇ ಅಲ್ಲದೆ ಆಟಗಾರರ ಭದ್ರತೆಯ ಹಿತಾದೃಷ್ಟಿಯಿಂದ ಟೀಮ್ ಇಂಡಿಯಾ ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದೆ.

ಇತ್ತ ಏಷ್ಯಾದ ಬಲಿಷ್ಠ ತಂಡವಾಗಿರುವ ಟೀಮ್ ಇಂಡಿಯಾ ಹೊರಗುಳಿದರೆ ವೀಕ್ಷಕರ ಕೊರತೆ ಎದುರಿಸಲಿದೆ. ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜಿಸಲು ಮುಂದಾಗಲಿದೆಯಾ ಕಾದು ನೋಡಬೇಕಿದೆ.

Published On - 2:41 pm, Tue, 18 October 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ