AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ಭರ್ತಿ 15 ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ರವೀಂದ್ರ ಜಡೇಜಾ

Ravindra Jadeja: ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ​ ಕಾಲಿಟ್ಟು 15 ತುಂಬಿದೆ. 2009ರಲ್ಲಿ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಭಾರತ ಏಕದಿನ ಕ್ರಿಕೆಟ್‌ಗೆ ಜಡೇಜಾ ಪಾದಾರ್ಪಣೆ ಮಾಡಿದ್ದರು. ಅಂದಿನಿಂದ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಜಡೇಜಾ ಪ್ರಸ್ತುತ ಭಾರತ ಸ್ಪಿನ್ ಆಲ್‌ರೌಂಡರ್ ವಿಭಾಗದ ಜೀವಾಳವಾಗಿದ್ದಾರೆ.

Ravindra Jadeja: ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ಭರ್ತಿ 15 ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ  ರವೀಂದ್ರ ಜಡೇಜಾ
ರವೀಂದ್ರ ಜಡೇಜಾ
ಪೃಥ್ವಿಶಂಕರ
|

Updated on:Feb 08, 2024 | 7:16 PM

Share

ಪ್ರಸ್ತುತ ಗಾಯಗೊಂಡು ಟೀಂ ಇಂಡಿಯಾದಿಂದ (Team India) ಹೊರಗುಳಿದಿರುವ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾಗೆ (Ravindra Jadeja) ಇಂದು ಅಂದರೆ ಫೆಬ್ರವರಿ 8 ಬಹಳ ವಿಶೇಷವಾದ ದಿನ. ಏಕೆಂದರೆ ಇದೇ ಜಡ್ಡು ಬರೋಬ್ಬರಿ 15 ವರ್ಷಗಳ ಹಿಂದೆ ರಾಷ್ಟ್ರೀಯ ತಂಡದ ಜೆರ್ಸಿ ಧರಿಸಿ ಮೊದಲ ಬಾರಿಗೆ ಆಡುವ ಅವಕಾಶ ಪಡೆದಿದ್ದರು. ಅಂದರೆ ರವೀಂದ್ರ ಜಡೇಜಾ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ (International Cricket)​ ಬದುಕಿಗೆ ಭರ್ತಿ 15. 2009ರಲ್ಲಿ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಭಾರತ ಏಕದಿನ ಕ್ರಿಕೆಟ್‌ಗೆ ಜಡೇಜಾ ಪಾದಾರ್ಪಣೆ ಮಾಡಿದ್ದರು. ಆ ಪಂದ್ಯದಲ್ಲಿ 6 ಓವರ್‌ ಬೌಲ್ ಮಾಡಿದ್ದ ಜಡೇಜಾ ಯಾವುದೇ ವಿಕೆಟ್ ಪಡೆಯಲಿಲ್ಲ. ಆದರೆ ಬ್ಯಾಟಿಂಗ್​ನಲ್ಲಿ ಮ್ಯಾಜಿಕ್ ಮಾಡಿದ್ದ ಜಡೇಜಾ 60 ರನ್‌ಗಳ ಅಜೇಯ ಇನ್ನಿಂಗ್ಸ್‌ ನೀಡಿದರು. ಅಂದಿನಿಂದ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಜಡೇಜಾ ಪ್ರಸ್ತುತ ಭಾರತ ಸ್ಪಿನ್ ಆಲ್‌ರೌಂಡರ್ ವಿಭಾಗದ ಜೀವಾಳವಾಗಿದ್ದಾರೆ.

ಆರಂಭ ಹೇಗಿತ್ತು?

ಅದಾಗ್ಯೂ ಜಡೇಜಾ ಅವರ ವೃತ್ತಿಜೀವನಕ್ಕೆ ಶುಭಾರಂಭ ಸಿಗಲಿಲ್ಲ. ಏಕೆಂದರೆ ಜಡೇಜಾ ಪದಾರ್ಪಣೆ ಮಾಡಿದ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿತ್ತು. ಆ ಪಂದ್ಯವನ್ನು ಶ್ರೀಲಂಕಾ 68 ರನ್‌ಗಳಿಂದ ಗೆದ್ದುಕೊಂಡಿತು. ಆದರೆ ಆ ದಿನ ಜಡೇಜಾಗೆ ಸ್ಮರಣೀಯ ದಿನವಾಗಿತ್ತು. ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾಗೆ ಏಕಾಂಗಿಯಾಗಿ ಅದೇಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷಗಳನ್ನು ಪೂರೈಸಿದ್ದಾರೆ. ಈ ವಿಚಾರವನ್ನು ಸ್ವತಃ ಜಡೇಜಾ ಅವರೇ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

IND vs ENG: ಎನ್​ಸಿಎಗೆ ರವೀಂದ್ರ ಜಡೇಜಾ; ಟೆಸ್ಟ್ ಸರಣಿಯಿಂದ ಔಟ್?

ವಿಶೇಷ ವಿಡಿಯೋ ಹಂಚಿಕೊಂಡ ಜಡ್ಡು

ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಟೀಂ ಇಂಡಿಯಾದಲ್ಲಿ ಆಡಿರುವ ಕೆಲವು ಹಳೆಯ ಚಿತ್ರಗಳ ವೀಡಿಯೊವನ್ನು ಹಂಚಿಕೊಂಡಿರುವ ಜಡೇಜಾ, ’15 ವರ್ಷಗಳ ನನ್ನ ಕನಸನ್ನು ನನಸಾಗಿಸಿದೆ – ಪ್ರತಿ ಕ್ಷಣಕ್ಕೂ ಕೃತಜ್ಞನಾಗಿದ್ದೇನೆ!’ ಎಂದು ಬರೆದುಕೊಂಡಿದ್ದಾರೆ.

2009 ರಲ್ಲಿ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಜಡೇಜಾ ಅದೇ ವರ್ಷ ಅಂದರೆ 2009 ರಂದೇ ಟಿ20 ಸ್ವರೂಪದಲ್ಲೂ ಚೊಚ್ಚಲ ಪಂದ್ಯವನ್ನಾಡಿದ್ದರು. ಒಂದೆರಡು ವರ್ಷಗಳ ನಂತರ, ಜಡೇಜಾ ಇಂಗ್ಲೆಂಡ್ ವಿರುದ್ಧ ನಾಗ್ಪುರದಲ್ಲಿ ನಡೆದ ಟೆಸ್ಟ್ ಪಂದ್ಯದ ಮೂಲಕ ಈ ಸ್ವರೂಪಕ್ಕೂ ಪಾದಾರ್ಪಣೆ ಮಾಡಿದರು. ಅಂದಿನಿಂದ, ಜಡೇಜಾ ಭಾರತ ತಂಡದ ಪ್ರಮುಖ ಸದಸ್ಯರಲ್ಲಿ ಒಬ್ಬರಾಗಿದ್ದಾರೆ.

ಪ್ರಸ್ತುತ ಗಾಯಗೊಂಡಿರುವ ಜಡೇಜಾ

ಸದ್ಯ ರವೀಂದ್ರ ಜಡೇಜಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತದ ಆಲ್ ರೌಂಡರ್ ಜಡೇಜಾ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ಅದಕ್ಕಾಗಿಯೇ ಅವರು ಎರಡನೇ ಟೆಸ್ಟ್‌ನಲ್ಲಿ ಆಡಲಿಲ್ಲ. ಆದರೀಗ ಚೇತರಿಸಿಕೊಂಡಿರುವ ಜಡೇಜಾ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆಗಳಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Thu, 8 February 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ