AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನದಂದೇ ಐರ್ಲೆಂಡ್​ಗೆ ತೆರಳಿದ ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತ ತಂಡ

Team India jet off to Dublin for IND vs IRE T20s: ಐರ್ಲೆಂಡ್ ವಿರುದ್ಧ ಭಾರತ ಒಟ್ಟು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದೀಗ ಈ ಸರಣಿಗಾಗಿ ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಐರ್ಲೆಂಡ್ ನಾಡಿಗೆ ಪ್ರಯಾಣ ಬೆಳೆಸಿದೆ. ಬಿಸಿಸಿಐ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಮಾನದ ಮೂಲಕ ಪ್ರಯಾಣಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದೆ.

ಸ್ವಾತಂತ್ರ್ಯ ದಿನದಂದೇ ಐರ್ಲೆಂಡ್​ಗೆ ತೆರಳಿದ ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತ ತಂಡ
Team India Players
Vinay Bhat
|

Updated on: Aug 15, 2023 | 11:30 AM

Share

ಭಾರತ ಕ್ರಿಕೆಟ್ ತಂಡದ ವೆಸ್ಟ್ ಇಂಡೀಸ್ ಪ್ರವಾಸ ಮುಕ್ತಾಯಗೊಂಡಿದೆ. ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದ್ದ ಟೀಮ್ ಇಂಡಿಯಾ ಟಿ20 ಸರಣಿಯಲ್ಲಿ ಎಡವಿತು. ಭಾರತದ ಯುವ ಪಡೆ ಟಿ20 ಸರಣಿ ಸೋಲಿನಿಂದ ಕೆಲ ವಿಷಯಗಳನ್ನು ಕಲಿತು ಕೆರಿಬಿಯನ್ ಪ್ರವಾಸವನ್ನು ಪೂರ್ಣಗೊಳಿಸಿದೆ. ಇದೀಗ ಮತ್ತೊಂದು ಸರಣಿಗೆ ಭಾರತ ಕ್ರಿಕೆಟ್ ತಂಡ ಸಜ್ಜಾಗಿದೆ. ಆಗಸ್ಟ್ 18 ರಿಂದ ಭಾರತ ಹಾಗೂ ಐರ್ಲೆಂಡ್ (India vs Ireland) ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದೀಗ ಈ ಸರಣಿಗಾಗಿ ಟೀಮ್ ಇಂಡಿಯಾ ಸ್ವಾತಂತ್ರ್ಯ ದಿನದಂದೇ ಐರ್ಲೆಂಡ್ ನಾಡಿಗೆ ತೆರಳಿದೆ.

ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತ ತಂಡ ಐರಿಷ್ ನಾಡಿಗೆ ಪ್ರಯಾಣ ಬೆಳೆಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಮಾನದ ಮೂಲಕ ಭಾರತೀಯ ಆಟಗಾರರು ಪ್ರಯಾಣಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಬುಮ್ರಾ, ಪ್ರಸಿದ್ಧ್ ಕೃಷ್ಣ, ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್ ಸೇರಿದಂತೆ ಕೆಲ ಆಟಗಾರರಿದ್ದಾರೆ.

ಇದನ್ನೂ ಓದಿ
Image
Independence Day 2023: 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಟೀಮ್ ಇಂಡಿಯಾ ಆಟಗಾರರು
Image
ಮುಂಬೈನಲ್ಲಿ ಜಿಮ್​ಗೆ ಬಂದ ವಿರಾಟ್ ಕೊಹ್ಲಿ: ಏಷ್ಯಾಕಪ್​ಗೆ ತಯಾರಿ ಆರಂಭ
Image
ಸಿಎಸ್​ಕೆ ಆಟಗಾರನಿಂದ ಮ್ಯಾಚ್ ಫಿಕ್ಸಿಂಗ್ ಆರೋಪ: ವಿದೇಶ ಪ್ರವಾಸಕ್ಕೆ ನಿಷೇಧ
Image
ಟೀಮ್ ಇಂಡಿಯಾ ಸೇರಲು ರಾಹುಲ್-ಅಯ್ಯರ್ ಹರಸಾಹಸ: ಇಂದು ನಿರ್ಧಾರವಾಗುತ್ತಾ ಇವರ ಭವಿಷ್ಯ?

ಐರ್ಲೆಂಡ್​ಗೆ ತೆರಳಿದ ಟೀಮ್ ಇಂಡಿಯಾ ಆಟಗಾರರ ಫೋಟೋ:

ಈಗಾಗಲೇ ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಕೂಡ ಪ್ರಕಟವಾಗಿದೆ. ವೇಗಿ ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ ಆಗಿ ನಾಯಕನ ಜವಾಬ್ದಾರಿ ಹೊತ್ತಿದ್ದಾರೆ. ಇದು ಕೆಲವೇ ದಿನಗಳ ಪಂದ್ಯಾವಳಿ ಆಗಿರುವ ಕಾರಣ ಭಾರತದ ಯುವ ಆಟಗಾರರ ಜೊತೆ ಕೋಚಿಂಗ್ ಸಿಬ್ಬಂದಿಗಳು ತೆರಳಿಲ್ಲ. ಈ ಪ್ರವಾಸದಿಂದ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಕೆಲ ಸಿಬ್ಬಂದಿಗಳಿಗೆ ವಿಶ್ರಾಂತಿ ನೀಡಲಾಗಿದೆ.

ಇಂಗ್ಲೆಂಡ್ ತಂಡಕ್ಕೆ ‘ಬೆನ್​’ಬಲ: ನಿವೃತ್ತಿ ಹಿಂಪಡೆದ ಸ್ಟೋಕ್ಸ್​..!

ಐರ್ಲೆಂಡ್ ವಿರುದ್ಧ ಭಾರತ ಒಟ್ಟು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದು ಆಗಸ್ಟ್ 18 ರಿಂದ ಪ್ರಾರಂಭವಾಲಿದೆ. 2ನೇ ಪಂದ್ಯವು ಆಗಸ್ಟ್ 20 ರಂದು ಜರುಗಲಿದೆ. ಅಂತೆಯೆ ಅಂತಿಮ 3ನೇ ಟಿ20 ಪಂದ್ಯ ಆಗಸ್ಟ್ 22 ರಂದು ಆಯೋಜಿಸಲಾಗಿದೆ. ಈ ಎಲ್ಲಾ ಪಂದ್ಯಗಳು ಡಬ್ಲಿನ್​ನ ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ ನಡೆಯಲಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಹೆಚ್ಚು ಯುವ ಆಟಗಾರರನ್ನೇ ಆಯ್ಕೆ ಮಾಡಿದ್ದು, ರುತುರಾಜ್ ಗಾಯಕ್ವಾಡ್​ಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ಪ್ರಸಿದ್ಧ್ ಕೃಷ್ಣ, ಶಿವಂ ದುಬೆ, ರಿಂಕು ಸಿಂಗ್, ಜಿತೇಶ್ ಶರ್ಮಾ ತಂಡದಲ್ಲಿದ್ದಾರೆ. ಈ ಸರಣಿಯಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಭಾರತ ಟಿ20 ತಂಡ: ಜಸ್​ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ತಿಲಕ್ ವರ್ಮಾ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು