AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಏಕದಿನ ವಿಶ್ವಕಪ್ ಪ್ರೊಮೊ ಶೂಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಮಿಂಚಿಂಗ್

Team India: ಟೀಮ್ ಇಂಡಿಯಾ ತನ್ನ 2ನೇ ಅಭ್ಯಾಸ ಪಂದ್ಯವನ್ನು ಮಂಗಳವಾರ ಆಡಲಿದೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತದ ಎದುರಾಳಿ ನೆದರ್​ಲೆಂಡ್ಸ್​. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಚೆನ್ನೈಗೆ ಆಗಮಿಸಲಿದ್ದು, ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲ ವಿಶ್ವಕಪ್ ಪಂದ್ಯವನ್ನು ಆಡಲಿದೆ.

VIDEO: ಏಕದಿನ ವಿಶ್ವಕಪ್ ಪ್ರೊಮೊ ಶೂಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಮಿಂಚಿಂಗ್
Team India
TV9 Web
| Edited By: |

Updated on: Oct 02, 2023 | 10:29 PM

Share

ಏಕದಿನ ವಿಶ್ವಕಪ್​ನ ಪ್ರೊಮೊ ಶೂಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಹುತೇಕ ತಂಡಗಳ ಫೋಟೋ ಶೂಟ್ ಮುಗಿದಿದ್ದು, ಇದೀಗ ಟೂರ್ನಿಯ ಪ್ರೊಮೊ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಈ ವಿಡಿಯೋದಲ್ಲಿ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ರವಿ ಅಶ್ವಿನ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಆಟಗಾರರು ಕಾಣಿಸಿಕೊಂಡಿದ್ದಾರೆ.

ಈ ಚಿತ್ರೀಕರಣದ ವಿಡಿಯೋವನ್ನು ಭಾರತ ಕ್ರಿಕೆಟ್ ತಂಡದ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಭಾರತೀಯ ಆಟಗಾರರು ಫೋಟೋಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

View this post on Instagram

A post shared by ICC (@icc)

ಕಿಂಗ್ ಕೊಹ್ಲಿ ಇಲ್ಲ:

ಈ ಫೋಟೋ ಶೂಟ್​ನಲ್ಲಾಗಲಿ, ಪ್ರೊಮೊ ವಿಡಿಯೋ ಶೂಟ್​ನಲ್ಲಾಗಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿಲ್ಲ. ಅಂದರೆ ವೈಯುಕ್ತಿಕ ಕಾರಣಗಳಿಗಾಗಿ ಕಿಂಗ್ ಕೊಹ್ಲಿ ತಿರುವನಂತಪುರದಿಂದ ಮುಂಬೈಗೆ ಮರಳಿದ್ದಾರೆ. ಹೀಗಾಗಿ ಅವರು ಚಿತ್ರೀಕರಣದಲ್ಲಿ ಭಾಗವಹಿಸಿರಲಿಲ್ಲ.

ಭಾರತದ​​ ಅಭ್ಯಾಸ ಪಂದ್ಯ:

ಟೀಮ್ ಇಂಡಿಯಾ ತನ್ನ 2ನೇ ಅಭ್ಯಾಸ ಪಂದ್ಯವನ್ನು ಮಂಗಳವಾರ ಆಡಲಿದೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತದ ಎದುರಾಳಿ ನೆದರ್​ಲೆಂಡ್ಸ್​. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಚೆನ್ನೈಗೆ ಆಗಮಿಸಲಿದ್ದು, ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲ ವಿಶ್ವಕಪ್ ಪಂದ್ಯವನ್ನು ಆಡಲಿದೆ.

ಇದನ್ನೂ ಓದಿ: ICC World Cup 2023: ಏಕದಿನ ವಿಶ್ವಕಪ್​ನಿಂದ 8 ಆಟಗಾರರು ಔಟ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಆರ್​. ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK