AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌಂಡರಿ ಹೊಡೆದ ಬಳಿಕ ಕಾಣಿಸಿಕೊಂಡ ಎದೆ ನೋವು; ಮೈದಾನದಲ್ಲೇ ಉಸಿರು ಚೆಲ್ಲಿದ ಪ್ರತಿಭಾವಂತ ಕ್ರಿಕೆಟಿಗ

Cricketer Imran Patel: ಪಂದ್ಯ ನಡೆಯುವಾಗಲೇ ಹೃದಯಾಘಾತವಾಗಿ ಪ್ರತಿಭಾವಂತ ಕ್ರಿಕೆಟಿಗನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ ಜಿಲ್ಲೆಯಲ್ಲಿ ನಡೆದಿದೆ. ಇಮ್ರಾನ್ ಸಿಕಂದರ್ ಪಟೇಲ್ ಮೈದಾನದಲ್ಲಿಯೇ ಸಾವನ್ನಪ್ಪಿರುವ ದುರ್ದೈವಿ ಕ್ರಿಕೆಟಿಗ ಎಂದು ತಿಳಿದುಬಂದಿದೆ.

ಬೌಂಡರಿ ಹೊಡೆದ ಬಳಿಕ ಕಾಣಿಸಿಕೊಂಡ ಎದೆ ನೋವು; ಮೈದಾನದಲ್ಲೇ ಉಸಿರು ಚೆಲ್ಲಿದ ಪ್ರತಿಭಾವಂತ ಕ್ರಿಕೆಟಿಗ
ಇಮ್ರಾನ್ ಸಿಕಂದರ್ ಪಟೇಲ್
ಪೃಥ್ವಿಶಂಕರ
|

Updated on:Nov 29, 2024 | 6:36 PM

Share

ಪಂದ್ಯ ನಡೆಯುವಾಗಲೇ ಹೃದಯ ಸ್ತಂಭನವಾಗಿ (Cardiac Arrest) ಪ್ರತಿಭಾವಂತ ಕ್ರಿಕೆಟಿಗನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ ಜಿಲ್ಲೆಯಲ್ಲಿ ನಡೆದಿದೆ. ಇಮ್ರಾನ್ ಸಿಕಂದರ್ ಪಟೇಲ್ ಮೈದಾನದಲ್ಲಿಯೇ ಸಾವನ್ನಪ್ಪಿರುವ ದುರ್ದೈವಿ ಕ್ರಿಕೆಟಿಗ ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಗರವಾಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಲಕ್ಕಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಹಾಗೂ ಯಂಗ್ ಇಲೆವೆನ್ ನಡುವಿನ ಪಂದ್ಯದಲ್ಲಿ 35 ವರ್ಷದ ಇಮ್ರಾನ್ ಲಕ್ಕಿ ಬಿಲ್ಡರ್ಸ್ ತಂಡದವನ್ನು ಪ್ರತಿನಿಧಿಸುವುದರ ಜೊತೆಗೆ ತಂಡದ ನಾಯಕತ್ವವನ್ನು ನಿರ್ವಹಿಸುತ್ತಿದ್ದರು.

ಹೃದಯ ಸ್ತಂಭನಕ್ಕೆ ಬಲಿ

ಈ ಪಂದ್ಯದಲ್ಲಿ ಲಕ್ಕಿ ಬಿಲ್ಡರ್ಸ್ ಪರ ಆಡುತ್ತಿದ್ದ ಇಮ್ರಾನ್ ಪಟೇಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಪಂದ್ಯದ ಆರನೇ ಓವರ್‌ನಲ್ಲಿ ಅವರು ಸತತ ಎರಡು ಬೌಂಡರಿಗಳನ್ನು ಹೊಡೆದರು. ಆದರೆ ಇದಾದ ನಂತರ ಇಮ್ರಾನ್​ಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಇಮ್ರಾನ್, 7ನೇ ಓವರ್​ ಆರಂಭಕ್ಕೂ ಮುನ್ನ ಈ ಬಗ್ಗೆ ಅಂಪೈರ್ ಬಳಿ ಹೇಳಿಕೊಂಡಿದ್ದಾರೆ. ಅವರ ಗಂಭೀರ ಸ್ಥಿತಿಯನ್ನು ಕಂಡು ಮೈದಾನದಲ್ಲಿದ್ದ ಅಂಪೈರ್‌ಗಳು ಕೂಡಲೇ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ.

ಇದಾದ ಬಳಿಕ ಇಮ್ರಾನ್ ಮೈದಾನದಿಂದ ಹೊರಗೆ ಹೋಗಲು ಆರಂಭಿಸಿದರಾದರೂ ಬೌಂಡರಿ ತಲುಪಿದ ಕೂಡಲೇ ಏಕಾಏಕಿ ಕೆಳಗೆ ಕುಸಿದು ಬಿದ್ದಿದ್ದಾರೆ. ಇದನ್ನು ಕಂಡು ಎಲ್ಲಾ ಆಟಗಾರರು ಹಾಗೂ ಪಂದ್ಯದ ಅಧಿಕಾರಿಗಳು ಆತಂಕಗೊಂಡು, ಆದಷ್ಟು ಬೇಗ ಇಮ್ರಾನ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ತಲುಪಿದ ನಂತರ ವೈದ್ಯರು ಇಮ್ರಾನ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಇಮ್ರಾನ್​ಗೆ ಮೂವರು 3 ಹೆಣ್ಣು ಮಕ್ಕಳು

35 ವರ್ಷದ ಇಮ್ರಾನ್​ಗೆ ಮೂವರು ಹೆಣ್ಣು ಮಕ್ಕಳಿದ್ದು, ಅವರ ಮರಣದ ನಂತರ ಇಡೀ ಕುಟುಂಬಕ್ಕೆ ದಿಕ್ಕು ತೋಚದಂತ್ತಾಗಿದೆ. ಪತ್ನಿ, ತಾಯಿ ಸೇರಿದಂತೆ ಇಡೀ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. ಇಮ್ರಾನ್ ಸಾವಿನಿಂದ ಸ್ಥಳೀಯ ಆಟಗಾರರು ಸಹ ಆಘಾತಕ್ಕೊಳಗಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Fri, 29 November 24

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ