Jasprit Bumrah: ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ದಂಪತಿಗಳಿಗೆ ಗಂಡು ಮಗು ಜನನ; ಮಗುವಿನ ಹೆಸರೇನು ಗೊತ್ತಾ?

Jasprit Bumrah: ಟೀಂ ಇಂಡಿಯಾದ ವೇಗದ ಜಸ್ಪ್ರೀತ್ ಬುಮ್ರಾ ಮತ್ತು ಅವರ ಪತ್ನಿ ಸಂಜನಾ ಗಣೇಶನ್ ದಂಪತಿಗಳಿಗೆ ಗಂಡು ಮಗು ಜನಿಸಿದೆ. ಸ್ವತಃ ಈ ವಿಚಾರವನ್ನು ಬುಮ್ರಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ವೇಗದ ಬೌಲಿಂಗ್ ವಿಭಾಗವನ್ನು ನಿರ್ವಹಿಸುತ್ತಿದ್ದ ಯಾರ್ಕರ್ ಕಿಂಗ್ ಖ್ಯಾತಿಯ ಬುಮ್ರಾ ನಿನ್ನೆ ಅಂದರೆ ಸೆಪ್ಟಂಬರ್ 3 ರಂದು ಇದ್ದಕ್ಕಿದ್ದಂತೆ ಟೀಂ ಇಂಡಿಯಾವನ್ನು ತೊರೆದು ಮುಂಬೈಗೆ ವಾಪಸ್ಸಾಗಿದ್ದರು.

Jasprit Bumrah: ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ದಂಪತಿಗಳಿಗೆ ಗಂಡು ಮಗು ಜನನ; ಮಗುವಿನ ಹೆಸರೇನು ಗೊತ್ತಾ?
ಜಸ್ಪ್ರೀತ್ ಬುಮ್ರಾ ದಂಪತಿಗಳು
Follow us
|

Updated on:Sep 04, 2023 | 11:15 AM

ಟೀಂ ಇಂಡಿಯಾದ ವೇಗದ ಜಸ್ಪ್ರೀತ್ ಬುಮ್ರಾ (Jasprit Bumrah) ಮತ್ತು ಅವರ ಪತ್ನಿ ಸಂಜನಾ ಗಣೇಶನ್ (Sanjana Ganesan) ದಂಪತಿಗಳಿಗೆ ಗಂಡು ಮಗು ಜನಿಸಿದೆ. ಸ್ವತಃ ಈ ವಿಚಾರವನ್ನು ಬುಮ್ರಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಏಷ್ಯಾಕಪ್​ನಲ್ಲಿ (Asia Cup 2023) ಟೀಂ ಇಂಡಿಯಾದ ವೇಗದ ಬೌಲಿಂಗ್ ವಿಭಾಗವನ್ನು ನಿರ್ವಹಿಸುತ್ತಿದ್ದ ಯಾರ್ಕರ್ ಕಿಂಗ್ ಖ್ಯಾತಿಯ ಬುಮ್ರಾ ನಿನ್ನೆ ಅಂದರೆ ಸೆಪ್ಟಂಬರ್ 3 ರಂದು ಇದ್ದಕ್ಕಿದ್ದಂತೆ ಟೀಂ ಇಂಡಿಯಾವನ್ನು ತೊರೆದು ಮುಂಬೈಗೆ ವಾಪಸ್ಸಾಗಿದ್ದರು. ತಂಡದ ಟ್ರಂಪ್ ಕಾರ್ಡ್​ ಆಗಿರುವ ಬುಮ್ರಾ ಹಠಾತ್ ಆಗಿ ಟೀಂ ಇಂಡಿಯಾವನ್ನು (Team India) ತೊರೆದಿದ್ದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಆ ಬಳಿಕ ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ, ಬುಮ್ರಾ ದಂಪತಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಬುಮ್ರಾ ತಂಡವನ್ನು ಬಿಟ್ಟು ದೇಶಕ್ಕೆ ಮರಳಿದ್ದಾರೆ ಎಂದು ವರದಿಯಾಗಿತ್ತು.

ಮಗುವಿನ ಹೆಸರೇನು?

ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿರುವ ಬುಮ್ರಾ ಇಂದು ಮುಂಜಾನೆ ನಮ್ಮ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ. ನಾವೀಗ ಚಂದ್ರನ ಮೇಲೆ ತೇಲುತ್ತಿದ್ದೇವೆ. ಹೊಸ ಸದಸ್ಯರೊಂದಿಗೆ ಬದುಕಿನ ಹೊಸ ಅಧ್ಯಾಯವನ್ನು ಆರಂಭಿಸಲು ಕಾತುರರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇನ್ನು ಇದೇ ಪೋಸ್ಟ್​ನಲ್ಲಿ ತಮ್ಮ ಮಗನ ಹೆಸರನ್ನು ಬಹಿರಂಗಗೊಳಿಸಿರುವ ಬುಮ್ರಾ, ಮಗುವಿಗೆ ‘ಅಂಗದ್ ಜಸ್ಪ್ರೀತ್ ಬುಮ್ರಾ’ ಎಂದು ಹೆಸರಿಟ್ಟಿರುವುದಾಗಿ ಬರೆದುಕೊಂಡಿದ್ದಾರೆ.

ತಂಡಕ್ಕೆ ರೀ ಎಂಟ್ರಿ ಯಾವಾಗ?

ಏತನ್ಮಧ್ಯೆ, ಮೊದಲ ಮಗುವಿನ ಸಂತಸದಲ್ಲಿರುವ ಬುಮ್ರಾ ಬದಲಿಗೆ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾದಲ್ಲಿ ಯಾರು ಸ್ಥಾನ ಪಡೆಯಲ್ಲಿದ್ದಾರೆ ಎಂದು ಕಾದುನೋಡಬೇಕಿದೆ. ನೇಪಾಳ ವಿರುದ್ಧದ ಈ ಪಂದ್ಯಕ್ಕೆ ಮೊಹಮ್ಮದ್ ಶಮಿ ತಂಡಕ್ಕೆ ಮರಳುವ ಸಾಧ್ಯತೆಯಿದೆ. ಆದರೆ ಪ್ರಸಿದ್ಧ್ ಕೃಷ್ಣ ಕೂಡ ಈ ಸ್ಥಾನಕ್ಕೆ ಪೈಪೋಟಿ ನೀಡುತ್ತಿದ್ದಾರೆ. ಇನ್ನು ಬುಮ್ರಾ ಮತ್ತೆ ಯಾವಾಗ ತಂಡ ಕೂಡಿಕೊಳ್ಳಲಿದ್ದಾರೆ ಎಂಬುದನ್ನು ನೋಡುವುದಾದರೆ, ಸೆಪ್ಟೆಂಬರ್ 10 ರ ಭಾನುವಾರದಂದು ಪಾಕಿಸ್ತಾನ ವಿರುದ್ಧ ನಡೆಯಲ್ಲಿರುವ ಸೂಪರ್ ಫೋರ್ ಪಂದ್ಯಕ್ಕೂ ಮುನ್ನ ಬುಮ್ರಾ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 am, Mon, 4 September 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ