AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಕ್ರಿಕೆಟಿಗ ಸರ್ಫರಾಜ್ ಖಾನ್

Sarfaraz Khan: ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಪೃಥ್ವಿಶಂಕರ
|

Updated on: Aug 07, 2023 | 1:08 PM

Share
ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

1 / 7
ಈ ವಿಚಾರವನ್ನು ಸ್ವತಃ ಸರ್ಫರಾಜ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪತ್ನಿಯೊಂದಿಗಿರುವ ಫೋಟೋವನ್ನು ಹಂಚಿಕೊಳ್ಳುವುದರೊಂದಿಗೆ ಖಚಿತಪಡಿಸಿದ್ದಾರೆ. ಮದುವೆಯಲ್ಲಿ ಸರ್ಫರಾಜ್ ಕಪ್ಪು ಶೆರ್ವಾನಿ ಧರಿಸಿ ಮಿಂಚಿರುವ ಹಲವು ವೀಡಿಯೊ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ವಿಚಾರವನ್ನು ಸ್ವತಃ ಸರ್ಫರಾಜ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪತ್ನಿಯೊಂದಿಗಿರುವ ಫೋಟೋವನ್ನು ಹಂಚಿಕೊಳ್ಳುವುದರೊಂದಿಗೆ ಖಚಿತಪಡಿಸಿದ್ದಾರೆ. ಮದುವೆಯಲ್ಲಿ ಸರ್ಫರಾಜ್ ಕಪ್ಪು ಶೆರ್ವಾನಿ ಧರಿಸಿ ಮಿಂಚಿರುವ ಹಲವು ವೀಡಿಯೊ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

2 / 7
ಸ್ಥಳೀಯ ಮಾಧ್ಯಮವೊಂದರೊಂದಿಗೆ ತಮ್ಮ ವಿವಾಹದ ಬಗ್ಗೆ ಮಾತನಾಡಿರುವ ಸರ್ಫರಾಜ್, ತನ್ನ ಮದುವೆಯನ್ನು ಕಾಶ್ಮೀರದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಹಾಗಾಗಿ ಭಾನುವಾರದಂದು ಮದುವೆ ಕಾರ್ಯಕ್ರಮ ನಡೆದಿದ್ದಾರೆ ಎಂದಿದ್ದಾರೆ.

ಸ್ಥಳೀಯ ಮಾಧ್ಯಮವೊಂದರೊಂದಿಗೆ ತಮ್ಮ ವಿವಾಹದ ಬಗ್ಗೆ ಮಾತನಾಡಿರುವ ಸರ್ಫರಾಜ್, ತನ್ನ ಮದುವೆಯನ್ನು ಕಾಶ್ಮೀರದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಹಾಗಾಗಿ ಭಾನುವಾರದಂದು ಮದುವೆ ಕಾರ್ಯಕ್ರಮ ನಡೆದಿದ್ದಾರೆ ಎಂದಿದ್ದಾರೆ.

3 / 7
ವೈವಾಹಿಕ ಜೀನಕ್ಕೆ ಕಾಲಿರಿಸಿದ ಸರ್ಫರಾಜ್ ಅವರಿಗೆ ಕ್ರಿಸ್ ಗೇಲ್, ಸೂರ್ಯಕುಮಾರ್ ಯಾದವ್, ರುತುರಾಜ್ ಗಾಯಕ್ವಾಡ್, ಖಲೀಲ್ ಅಹ್ಮದ್, ಉಮ್ರಾನ್ ಮಲಿಕ್, ಸಿಕಂದರ್ ರಜಾ, ಮನ್ದೀಪ್ ಸಿಂಗ್ ಮತ್ತು ಭಾರತದ ಮಾಜಿ ಆಫ್ ಸ್ಪಿನ್ನರ್ ರಮೇಶ್ ಪೊವಾರ್ ಮದುವೆಯ ಶುಭಾಶಯ ಕೋರಿದ್ದಾರೆ.

ವೈವಾಹಿಕ ಜೀನಕ್ಕೆ ಕಾಲಿರಿಸಿದ ಸರ್ಫರಾಜ್ ಅವರಿಗೆ ಕ್ರಿಸ್ ಗೇಲ್, ಸೂರ್ಯಕುಮಾರ್ ಯಾದವ್, ರುತುರಾಜ್ ಗಾಯಕ್ವಾಡ್, ಖಲೀಲ್ ಅಹ್ಮದ್, ಉಮ್ರಾನ್ ಮಲಿಕ್, ಸಿಕಂದರ್ ರಜಾ, ಮನ್ದೀಪ್ ಸಿಂಗ್ ಮತ್ತು ಭಾರತದ ಮಾಜಿ ಆಫ್ ಸ್ಪಿನ್ನರ್ ರಮೇಶ್ ಪೊವಾರ್ ಮದುವೆಯ ಶುಭಾಶಯ ಕೋರಿದ್ದಾರೆ.

4 / 7
ಇನ್ನು ಕಳೆದ 12 ತಿಂಗಳುಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಕಾಯುತ್ತಿರುವ ಸರ್ಫರಾಜ್, ದೇಶೀ ಕ್ರಿಕೆಟ್​ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಆದರೆ ಇತ್ತೀಚಿಗೆ ಮುಗಿದ ದುಲೀಪ್ ಟ್ರೋಫಿಯಲ್ಲಿ ಸರ್ಫರಾಜ್ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಕೇವಲ 54 ರನ್‌ ಗಳಿಸಲಷ್ಟೇ ಶಕ್ತರಾದರು.

ಇನ್ನು ಕಳೆದ 12 ತಿಂಗಳುಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಕಾಯುತ್ತಿರುವ ಸರ್ಫರಾಜ್, ದೇಶೀ ಕ್ರಿಕೆಟ್​ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಆದರೆ ಇತ್ತೀಚಿಗೆ ಮುಗಿದ ದುಲೀಪ್ ಟ್ರೋಫಿಯಲ್ಲಿ ಸರ್ಫರಾಜ್ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಕೇವಲ 54 ರನ್‌ ಗಳಿಸಲಷ್ಟೇ ಶಕ್ತರಾದರು.

5 / 7
ಆದರೆ ಈ ಪಂದ್ಯಾವಳಿಯನ್ನು ಹೊರತುಪಡಿಸಿದರೆ, ದೇಶೀ ಲೀಗ್​ನಲ್ಲಿ ಅಬ್ಬರಿಸಿರು ಸರ್ಫರಾಜ್, ಆಡಿರುವ 39 ಪಂದ್ಯಗಳ 58 ಇನ್ನಿಂಗ್ಸ್‌ಗಳಲ್ಲಿ 3559 ರನ್‌ಗಳೊಂದಿಗೆ 74.1 ರ ಸರಾಸರಿಯನ್ನು ಹೊಂದಿದ್ದಾರೆ.

ಆದರೆ ಈ ಪಂದ್ಯಾವಳಿಯನ್ನು ಹೊರತುಪಡಿಸಿದರೆ, ದೇಶೀ ಲೀಗ್​ನಲ್ಲಿ ಅಬ್ಬರಿಸಿರು ಸರ್ಫರಾಜ್, ಆಡಿರುವ 39 ಪಂದ್ಯಗಳ 58 ಇನ್ನಿಂಗ್ಸ್‌ಗಳಲ್ಲಿ 3559 ರನ್‌ಗಳೊಂದಿಗೆ 74.1 ರ ಸರಾಸರಿಯನ್ನು ಹೊಂದಿದ್ದಾರೆ.

6 / 7
ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಸರ್ಫರಾಜ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಆಯ್ಕೆಯಾಗಲಿಲ್ಲ. ಆ ಬಳಿಕ ನಡೆದ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸರ್ಫರಾಜ್, ಸೀಮಿತ ಓವರ್​ಗಳ ಮಾದರಿಯಲ್ಲಿ ಇನ್ನು ಕೊಂಚ ಪಳಗಬೇಕಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಸರ್ಫರಾಜ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಆಯ್ಕೆಯಾಗಲಿಲ್ಲ. ಆ ಬಳಿಕ ನಡೆದ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸರ್ಫರಾಜ್, ಸೀಮಿತ ಓವರ್​ಗಳ ಮಾದರಿಯಲ್ಲಿ ಇನ್ನು ಕೊಂಚ ಪಳಗಬೇಕಿದೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್