AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Army: ಭಾರತದ ಜೆರ್ಸಿ ತೊಡುವಂತಿಲ್ಲ: ಪಾಕ್, ಲಂಕಾ ಜೆರ್ಸಿ ಧರಿಸಿ ಬಂದ್ರೆ ಮಾತ್ರ ಫೈನಲ್ ಪಂದ್ಯಕ್ಕೆ ಪ್ರವೇಶ

Asia Cup Final: ಈ ಬಗ್ಗೆ ಟೀಮ್ ಇಂಡಿಯಾದ ಅಧಿಕೃತ ಅಭಿಮಾನಿ ಬಳಗ ಭಾರತ್ ಆರ್ಮಿ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಭಾರತದ ಜೆರ್ಸಿ ತೊಟ್ಟು ಪಾಕಿಸ್ತಾನ-ಶ್ರೀಲಂಕಾ ಫೈನಲ್ ಪಂದ್ಯ ನೋಡಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದ್ದಾರೆ.

Bharat Army: ಭಾರತದ ಜೆರ್ಸಿ ತೊಡುವಂತಿಲ್ಲ: ಪಾಕ್, ಲಂಕಾ ಜೆರ್ಸಿ ಧರಿಸಿ ಬಂದ್ರೆ ಮಾತ್ರ ಫೈನಲ್ ಪಂದ್ಯಕ್ಕೆ ಪ್ರವೇಶ
Asia Cup Final 2022
TV9 Web
| Updated By: Vinay Bhat|

Updated on:Sep 12, 2022 | 10:29 AM

Share

ಭಾನುವಾರ ಶ್ರೀಲಂಕಾ ಹಾಗೂ ಪಾಕಿಸ್ತಾನ (Sri Lanka vs Pakistan) ನಡುವೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಏಷ್ಯಾಕಪ್ 2022 ಫೈನಲ್ (Asia Cup 2022 Final) ಪಂದ್ಯ ನಡೆದಿದ್ದು, ಇದರಲ್ಲಿ ಲಂಕಾನ್ನರು 23 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಈ ರೋಚಕ ಕಾದಾಟ ವೀಕ್ಷಿಸಲು ದುಬೈ ಕ್ರೀಡಾಂಗಣಕ್ಕೆ (Dubai Stadium) ಅನೇಕ ಅಭಿಮಾನಿಗಳು ಬಂದಿದ್ದರು. ಆದರೆ, ಭಾರತದ ಜೆರ್ಸಿ ತೊಟ್ಟು ಬಂದಿದ್ದ ಫ್ಯಾನ್ಸ್​ಗೆ ಮಾತ್ರ ಭಾರೀ ನಿರಾಸೆಯಾಗಿದೆ. ಫೈನಲ್ ಪಂದ್ಯ ವೀಕ್ಷಿಸಲು ಭಾರತದ ಜೆರ್ಸಿ ಧರಿಸಿ ಬಂದಿದ್ದ ಫ್ಯಾನ್ಸ್​ಗೆ ಶ್ರೀಲಂಕಾ ಅಥವಾ ಪಾಕಿಸ್ತಾನ ಜೆರ್ಸಿ ತೊಡುವಂತೆ ಅಲ್ಲಿನ ಪೊಲೀಸರು ತಾಕೀತು ಮಾಡಿದ್ದಾರೆ.

ಈ ಬಗ್ಗೆ ಟೀಮ್ ಇಂಡಿಯಾದ ಅಧಿಕೃತ ಅಭಿಮಾನಿ ಬಳಗ ಭಾರತ್ ಆರ್ಮಿ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಭಾರತದ ಜೆರ್ಸಿ ತೊಟ್ಟು ಪಾಕಿಸ್ತಾನಶ್ರೀಲಂಕಾ ಫೈನಲ್ ಪಂದ್ಯ ನೋಡಲು ನಮಗೆ ಅವಕಾಶ ನೀಡುತ್ತಿಲ್ಲ. ಒಳ ಪ್ರವೇಶಿಸಬೇಕಾದರೆ ಶ್ರೀಲಂಕಾ ಜೆರ್ಸಿ ಅಥವಾ ಪಾಕಿಸ್ತಾನ ಜೆರ್ಸಿ ತೊಡಬೇಕೆಂದು ಆಗ್ರಹಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ದುಬೈ ಕ್ರೀಡಾಂಗಣದ ಹೊರಗಡೆ ನಡೆದ ಈ ಘಟನೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ
Image
SL vs PAK: ಮರುಕಳಿಸಿದ ಇತಿಹಾಸ: ಅದೇರೀತಿ ಕ್ಯಾಚ್ ಬಿಟ್ಟು ಏಷ್ಯಾಕಪ್ ಫೈನಲ್​ನಲ್ಲಿ ಸೋತ ಪಾಕಿಸ್ತಾನ
Image
SL vs PAK: ಬಲವಂತವಾಗಿ ಅಂಪೈರ್ ಬಳಿ ಔಟ್ ನೀಡಲು ಹೇಳಿದ ಪಾಕಿಸ್ತಾನ ಕ್ರಿಕೆಟಿಗ: ವಿಡಿಯೋ ವೈರಲ್
Image
Asia Cup 2022 Final: ಆರ್ಥಿಕ ಬಿಕ್ಕಟ್ಟು, ರಾಜಕೀಯ ಅರಾಜಕತೆ ನಡುವೆಯೂ ಏಷ್ಯಾ ಗೆದ್ದ ಶ್ರೀಲಂಕಾ..!
Image
Asia Cup 2022 Final: ರಾಜಪಕ್ಸೆ ಅಬ್ಬರದ ಅರ್ಧಶತಕ; ಪಾಕಿಸ್ತಾನಕ್ಕೆ 171 ರನ್ ಗುರಿ ನೀಡಿದ ಲಂಕಾ..!

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಬ್ಯಾಟಿಂಗ್​ಗೆ ಇಳಿದ ಶ್ರೀಲಂಕಾ ಪವರ್ ಪ್ಲೇನಲ್ಲೇ ಮೂರು ವಿಕೆಟ್ ಕಳೆದುಕೊಂಡಿತು. ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಕುಸಲ್ ಮೆಂಡಿಸ್ (0) ಔಟಾದರೆ, ಪಥುಮ್ ನಿಸ್ಸಂಕಾ (8) ಹಾಗೂ ಗುಣತಿಲಕ (1) ಅವರನ್ನು ಹ್ಯಾರಿಸ್ ರೌಫ್ ಪೆವಿಲಿಯನ್​ಗೆ ಅಟ್ಟಿದರು.

ನಂತರ ರಾಜಪಕ್ಷ ಕೇವಲ 45 ಎಸೆತಗಳಲ್ಲಿ 6 ಫೋರ್, 3 ಸಿಕ್ಸರ್ ಬಾರಿಸಿ ಅಜೇಯ 71 ರನ್ ಚಚ್ಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಹಸರಂಗ 21 ಎಸೆತಗಳಲ್ಲಿ 36 ರನ್ ಬಾರಿಸಿದರು. ಶ್ರೀಲಂಕಾ ತಂಡ ನಿಗದಿತ 20 ಓವರ್​​​ಗಳಲ್ಲಿ 6 ವಿಕೆಟ್ ​ನಷ್ಟಕ್ಕೆ 170 ರನ್​​​ ಸೇರಿಸಿತು. ಪಾಕ್​ ಪರ ಹ್ಯಾರಿಸ್ ರೌಫ್​ 3 ವಿಕೆಟ್​, ನಸೀಂ, ಶಬ್ದಾದ್ ಖಾನ್​ ಹಾಗೂ ಅಹ್ಮದ್ ತಲಾ 1 ವಿಕೆಟ್ ಪಡೆದರು.

171 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡ ಬೇಗನೆ ನಾಯಕ 2 ವಿಕೆಟ್ ಕಳೆದುಕೊಂಡಿತು. ಈ ವೇಳೆ ಮೊಹಮ್ಮದ್ ರಿಜ್ವಾನ್ (55) ಮತ್ತು ಇಫ್ತಿಕರ್ ಅಹ್ಮದ್ (32) ಕುಸಿದಿದ್ದ ತಂಡಕ್ಕೆ ಆಸರೆಯಾದರು. ಇವರಿಬ್ಬರು 71 ರನ್‌ಗಳ ಜೊತೆಯಾಟ ಆಡಿದರು. ನಂತರ ಬಂದ ಪಾಕ್ ಬ್ಯಾಟರ್​ಗಳೆಲ್ಲ ಬಂದಷ್ಟೆ ವೇಗದಲ್ಲಿ ಪೆವಿಲಿಯನ್ ಸೇರಿಕೊಂಡರು. ಪಾಕಿಸ್ತಾನ 20 ಓವರ್​ನಲ್ಲಿಯೇ 147 ರನ್​ಗೆ ಆಲೌಟ್ ಆಗಿ ಸೋಲುಂಡಿತು.

ಈ ಮೂಲಕ ಶ್ರೀಲಂಕಾ ಕ್ರಿಕೆಟ್ 23 ರನ್​ಗಳ ಗೆಲುವು ಸಾಧಿಸಿತು. ತೀವ್ರ ಆರ್ಥಿಕ ಬಿಕ್ಕಟ್ಟು, ರಾಜಕೀಯ ಪ್ರಕ್ಷುಬ್ದತೆಯ ನಡುವೆಯೂ ಏಷ್ಯಾಕಪ್​​ನಲ್ಲಿ ಬ್ಯಾಟಿಂಗ್ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ತೋರಿದ ಸಿಂಹಳೀಯರು 2014ರ ನಂತರ ಪ್ರತಿಷ್ಟಿತ ಪ್ರಶಸ್ತಿ ಬಾಜಿಕೊಂಡಿತು. ಈ ಮೂಲಕ ಒಟ್ಟು 6ನೇ ಬಾರಿಗೆ ಏಷ್ಯಾಕಪ್​ ಚಾಂಪಿಯನ್ ಆಗಿ ಹೊರಹೊಮ್ಮಿದೆ. 10 ವರ್ಷಗಳ ನಂತರ ಪ್ರಶಸ್ತಿ ಗೆಲ್ಲುವ ಕನಸು ಕಾಣುತ್ತಿದ್ದ ಪಾಕ್​​ ಬಯಕೆ ಈ ಬಾರಿ ಕೂಡ ಈಡೇರಲಿಲ್ಲ.

Published On - 10:27 am, Mon, 12 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?