AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶೀಯ ಆಟಗಾರರಿಗೆ ಗುಡ್ ನ್ಯೂಸ್ ನೀಡಿದ ಜಯ್ ಶಾ

Jay Shah: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶೀಘ್ರದಲ್ಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಐಸಿಸಿ ಚುನಾವಣೆಯಲ್ಲಿ ಜಯ್ ಶಾ ಸ್ಪರ್ಧಿಸಲಿದ್ದು, ಈ ಮೂಲಕ ವಿಶ್ವ ಕ್ರಿಕೆಟ್​​ನ ಮುಖ್ಯಸ್ಥರಾಗುವ ಹಂಬಲದಲ್ಲಿದ್ದಾರೆ. ಆದರೆ ಇದಕ್ಕೂ ಮುನ್ನ ಜಯ್ ಶಾ ದೇಶೀಯ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ ತಂದಿರುವುದು ವಿಶೇಷ.

ದೇಶೀಯ ಆಟಗಾರರಿಗೆ ಗುಡ್ ನ್ಯೂಸ್ ನೀಡಿದ ಜಯ್ ಶಾ
Jay Shah
ಝಾಹಿರ್ ಯೂಸುಫ್
|

Updated on: Aug 27, 2024 | 1:31 PM

Share

ದೇಶೀಯ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳ ಜೊತೆ ಬಹುಮಾನ ಮೊತ್ತ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ. ಈ ಮೂಲಕ ದೇಶೀಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರನ್ನು ಪ್ರೋತ್ಸಾಹಿಸಲು ಬಿಸಿಸಿಐ ಮುಂದಾಗಿದೆ.

ಈ ಅನುಕ್ರಮವು ಎಲ್ಲಾ ಮಹಿಳಾ ಮತ್ತು ಜೂನಿಯರ್ ಕ್ರಿಕೆಟ್ ಪಂದ್ಯಾವಳಿಗಳಿಗೂ ಅನ್ವಯವಾಗಲಿದೆ. ಹಾಗೆಯೇ ವಿಜಯ್ ಹಝಾರೆ ಮತ್ತು ಸೈಯದ್ ಮುಷ್ತಾಕ್ ಅಲಿ ಪಂದ್ಯಾವಳಿಗಳಲ್ಲೂ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿಗಳೊಂದಿಗೆ ಬಹುಮಾನ ಮೊತ್ತವಾಗಿ ಹಣವನ್ನು ನೀಡಲಿದ್ದೇವೆ ಎಂದು ಜಯ್ ಶಾ ಎಕ್ಸ್​ ಮೂಲಕ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಜಯ್ ಶಾ, ದೇಶೀಯ ಸರ್ಕ್ಯೂಟ್‌ನಲ್ಲಿ ಅತ್ಯುತ್ತಮ ಪ್ರದರ್ಶನಗಳನ್ನು ಗುರುತಿಸುವ ಮತ್ತು ಬಹುಮಾನ ನೀಡುವ ಗುರಿಯನ್ನು ಹೊಂದಿದ್ದೇವೆ. ಇಂತಹ ಕಾರ್ಯಕ್ಕೆ ಬೆಂಬಲ ವ್ಯಕ್ತಪಡಿಸಿರುವ ಅಪೆಕ್ಸ್ ಕೌನ್ಸಿಲ್‌ಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಬಿಸಿಸಿಐನ ಈ ನಡೆಯು ದೇಶೀಯ ಟೂರ್ನಿಗಳನ್ನು ಆಡುವ ಆಟಗಾರರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ನೆರವಾಗುತ್ತದೆ. ಅಲ್ಲದೆ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗಳೊಂದಿಗೆ ಮಿಂಚಲು ಆಟಗಾರರಿಗೆ ಉತ್ತೇಜನ ಸಿಕ್ಕಂತಾಗಲಿದೆ. ಇದರಿಂದ ಆಟಗಾರರ ಪ್ರದರ್ಶನ ಇನ್ನಷ್ಟು ಸುಧಾರಿಸಲು ಸ್ಫೂರ್ತಿ ನೀಡಲಿದೆ.

ಬಿಸಿಸಿಐ ಮಹತ್ವದ ಹೆಜ್ಜೆ:

ಬಿಸಿಸಿಐ ಕಳೆದ 3-4 ವರ್ಷಗಳಿಂದ ದೇಶೀಯ ಕ್ರಿಕೆಟ್​ ಆಡುವ ಆಟಗಾರರ ವೇತನವನ್ನು ಹೆಚ್ಚಿಸಿದೆ. ಅಲ್ಲದೆ ಎರಡು ವರ್ಷಗಳ ಹಿಂದೆ, ಮಂಡಳಿಯು ಎಲ್ಲಾ ಮೂರು ಮಾದರಿಗಳ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮಹಿಳಾ ಆಟಗಾರರ ಪಂದ್ಯದ ಶುಲ್ಕವನ್ನು ಪುರುಷ ಆಟಗಾರರಿಗೆ ಸಮನಾಗಿರುತ್ತದೆ ಎಂದು ಘೋಷಿಸಿತ್ತು. ಇದಕ್ಕೂ ಮೊದಲು ರಣಜಿ ಟ್ರೋಫಿ ಆಡುವ ಆಟಗಾರರ ಪಂದ್ಯ ಶುಲ್ಕವನ್ನು ಮಂಡಳಿಯು ದ್ವಿಗುಣಗೊಳಿಸಿತ್ತು.

ಇದನ್ನೂ ಓದಿ: IPL 2025: ಕುತೂಹಲ ಮೂಡಿಸಿದ ಕೆಎಲ್ ರಾಹುಲ್ ನಡೆ..!

ಇದೀಗ ದೇಶೀಯ ಟೂರ್ನಿಯಲ್ಲಿ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ನೀಡಲು ಮುಂದಾಗಿದೆ. ಈ ಮೂಲಕ ಬಿಸಿಸಿಐ ತನ್ನ ಆದಾಯದ ಒಂದು ಪಾಲನ್ನು ದೇಶೀಯ ಕ್ರಿಕೆಟಿಗರ ಉತ್ತೇಜನಕ್ಕೆ ಬಳಸಲು ನಿರ್ಧರಿಸಿದೆ. ಈ ಮೂಲಕ ಯುವ ಆಟಗಾರರಿಗೆ ಆರ್ಥಿಕ ನೆರವು ನೀಡಲು ಮುಂದಾಗಿರುವುದು ವಿಶೇಷ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?