AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್ ಆಯ್ಕೆಗೆ ಅಚ್ಚರಿ ವ್ಯಕ್ತಪಡಿಸಿದ ಮಾಜಿ ನಾಯಕ..!

India vs Australia ODI Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ 15 ಸದಸ್ಯರುಗಳ ತಂಡದಲ್ಲಿ ಶ್ರೇಯಸ್ ಅಯ್ಯರ್ ಕೂಡ ಕಾಣಿಸಿಕೊಂಡಿದ್ದಾರೆ. ಅದು ಕೂಡ ಉಪನಾಯಕನಾಗಿ ಎಂಬುದು ವಿಶೇಷ.

ಶ್ರೇಯಸ್ ಅಯ್ಯರ್ ಆಯ್ಕೆಗೆ ಅಚ್ಚರಿ ವ್ಯಕ್ತಪಡಿಸಿದ ಮಾಜಿ ನಾಯಕ..!
Shreyas Iyer
ಝಾಹಿರ್ ಯೂಸುಫ್
|

Updated on:Oct 07, 2025 | 9:59 AM

Share

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಂಡರೆ, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಬಗ್ಗೆ ಇದೀಗ ಟೀಮ್ ಇಂಡಿಯಾದ ಮಾಜಿ ನಾಯಕ ದಿಲೀಪ್ ವೆಂಗ್​ಸರ್ಕಾರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಏಕೆಂದರೆ ಇತ್ತೀಚೆಗಷ್ಟೇ ಶ್ರೇಯಸ್ ಅಯ್ಯರ್ ಟೆಸ್ಟ್ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿದ್ದರು. ದೀರ್ಘಾವಧಿಯ ಕ್ರಿಕೆಟ್ ಆಡುವಾಗ ಬೆನ್ನು ನೋವಿನ ಸಮಸ್ಯೆ ಎದುರಾಗುತ್ತಿದ್ದು, ಹೀಗಾಗಿ ಟೆಸ್ಟ್ ಕ್ರಿಕೆಟ್​ನಿಂದ ಕೆಲ ಕಾಲ ಹೊರಗುಳಿಯುತ್ತಿರುವುದಾಗಿ ಅಯ್ಯರ್ ಬಿಸಿಸಿಐಗೆ ತಿಳಿಸಿದ್ದರು.

ಆದರೀಗ ಅದೇ ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕನನ್ನಾಗಿ ಭಾರತ ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅತ್ತ ರೆಡ್ ಬಾಲ್ ಕ್ರಿಕೆಟ್​ಗೆ ಅನ್​ಫಿಟ್ ಆಗಿರುವ ಆಟಗಾರರನ್ನು ವೈಟ್ ಬಾಲ್ ಕ್ರಿಕೆಟ್​ಗೆ ಹೇಗೆ ಆಯ್ಕೆ ಮಾಡಿದ್ದಾರೆ ಎಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ದಿಲೀಪ್ ವೆಂಗ್‌ಸಾಸ್ಕರ್ ಪ್ರತಿಕ್ರಿಯಿಸಿದ್ದಾರೆ.

ಅಯ್ಯರ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಪತ್ರ ಬರೆದು ಆರು ತಿಂಗಳ ಕಾಲ ರೆಡ್-ಬಾಲ್ ಕ್ರಿಕೆಟ್‌ನಿಂದ ಹಿಂದೆ ಸರಿಯಲು ಅನುಮತಿ ಕೋರಿದ್ದಾರೆ. ಅಯ್ಯರ್ ದೀರ್ಘಾವಧಿಯ ಸ್ವರೂಪದಲ್ಲಿ ಆಡುವಾಗ ಬೆನ್ನು ನೋವು ಅನುಭವಿಸುತ್ತಾರೆ. ದೇಶೀಯ ರೆಡ್-ಬಾಲ್ ಕ್ರಿಕೆಟ್‌ನ ಸಮಯವನ್ನು ತಮ್ಮ ಫಿಟ್‌ನೆಸ್ ಅನ್ನು ಸುಧಾರಿಸಲು ಮತ್ತು ದೀರ್ಘಕಾಲದ ಬೆನ್ನು ಸಮಸ್ಯೆಯಿಂದ ಚೇತರಿಸಿಕೊಳ್ಳಲು ಬಳಸಬೇಕೆಂದು ಬಿಸಿಸಿಐ ತಿಳಿಸಿದೆ.

ಇದೀಗ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ.  ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇದು ನನಗೆ ಒಂದು ಸಂದಿಗ್ಧತೆಯಾಗಿದೆ. ಏಕೆಂದರೆ ಅಯ್ಯರ್ ಅವರು ಟೆಸ್ಟ್​ ಕ್ರಿಕೆಟ್‌ ಆಡಲು ಅನ್​ಫಿಟ್ ಎಂದು ಘೋಷಿಸಿದ್ದಾರೆ. ಆದರೆ ಏಕದಿನ ಕ್ರಿಕೆಟ್‌ಗೆ ಫಿಟ್ ಎಂದು ಹೇಳುತ್ತಿದ್ದಾರೆ. ಇಲ್ಲಿ ರೆಡ್ ಬಾಲ್ ಹಾಗೂ ವೈಟ್ ಬಾಲ್​ ಕ್ರಿಕೆಟ್​ ನಡುವಿನ ವ್ಯತ್ಯಾಸ ನನಗೆ ಅರ್ಥವಾಗುತ್ತಿಲ್ಲ.

ನೀವು ಬಿಳಿ ಚೆಂಡಿನ ಕ್ರಿಕೆಟ್‌ಗೆ ಫಿಟ್ ಆಗಿದ್ದರೆ, ನೀವು ಸ್ಪಷ್ಟವಾಗಿ ಕೆಂಪು ಚೆಂಡಿನ ಕ್ರಿಕೆಟ್‌ಗೆ ಫಿಟ್ ಆಗಿದ್ದೀರಿ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಎರಡು ಸ್ವರೂಪಗಳಲ್ಲಿ ಅಂತಹ ಮಹತ್ವದ ಬದಲಾವಣೆಯಿಲ್ಲ. ಟೆಸ್ಟ್ ಕ್ರಿಕೆಟ್​ನಲ್ಲಿ ಓವರ್​ಗಳ ಸಂಖ್ಯೆ ಸ್ವಲ್ಪ ಹೆಚ್ಚಿದೆ. ಇತ್ತ ಏಕದಿನ ಕ್ರಿಕೆಟ್​ನಲ್ಲಿ 50 ಓವರ್​ಗಳನ್ನು ಆಡಲಾಗುತ್ತದೆ. ಇದಾಗ್ಯೂ ಅವರು ಒಂದು ಸ್ವರೂಪಕ್ಕೆ ಓಕೆ ಮತ್ತೊಂದಕ್ಕೆ ನೋ ಅಂದಿರುವುದು ನಿಜಕ್ಕೂ ಅಚ್ಚರಿ ಎಂದು ದಿಲೀಪ್ ವೆಂಗ್​ಸರ್ಕಾರ್ ಹೇಳಿದ್ದಾರೆ.

ಹೀಗೆ ಆಟಗಾರರು ಒಂದನ್ನು ಆಯ್ಕೆ ಮಾಡಿ, ಮತ್ತೊಂದು ನಿರ್ಲಕ್ಷಿಸುತ್ತಿರುವುದು ಸರಿಯಲ್ಲ. ಅದರಲ್ಲೂ ಟೆಸ್ಟ್​ಗೆ ಅನ್​ಫಿಟ್ ಘೋಷಿಸಿರುವ ಆಟಗಾರನಿಗೆ ಇದೀಗ ಏಕದಿನ ತಂಡದ ಉಪನಾಯಕತ್ವವನ್ನು ಸಹ ನೀಡಲಾಗಿದೆ. ಆಯ್ಕೆಗಾರರ ಇಂತಹ ನಡೆಗಳೇ ನನಗೆ ಅಚ್ಚರಿ ಮೂಡಿಸುತ್ತಿದೆ ಎಂದು ದಿಲೀಪ್ ವೆಂಗ್​ಸರ್ಕಾರ್ ಹೇಳಿದ್ದಾರೆ.

Published On - 9:58 am, Tue, 7 October 25

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?