AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia cup 2022: ಪಾಕ್ ವಿರುದ್ಧ ಅಫ್ಘನ್​ಗೆ ರೋಚಕ ಸೋಲು; ಅಧಿಕೃತವಾಗಿ ಏಷ್ಯಾಕಪ್​ನಿಂದ ಭಾರತ ಔಟ್..!

Asia cup 2022: ಟೀಂ ಇಂಡಿಯಾ ಟೂರ್ನಿಯ ಫೈನಲ್ ತಲುಪುವ ಅವಕಾಶ ಕಳೆದುಕೊಂಡು ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಪಂದ್ಯದಲ್ಲಿ ಉಳಿಯಲು ಟೀಮ್ ಇಂಡಿಯಾಗೆ ಅಫ್ಘಾನಿಸ್ತಾನದ ಗೆಲುವು ಅಗತ್ಯವಾಗಿತ್ತು ಆದರೆ ಪಾಕಿಸ್ತಾನ ಇದಕ್ಕೆ ಅವಕಾಶ ನೀಡಲಿಲ್ಲ.

Asia cup 2022: ಪಾಕ್ ವಿರುದ್ಧ ಅಫ್ಘನ್​ಗೆ ರೋಚಕ ಸೋಲು; ಅಧಿಕೃತವಾಗಿ ಏಷ್ಯಾಕಪ್​ನಿಂದ ಭಾರತ ಔಟ್..!
TV9 Web
| Edited By: |

Updated on:Sep 07, 2022 | 11:20 PM

Share

ಏಷ್ಯಾಕಪ್‌ನಲ್ಲಿ (Asia Cup 2022) ಭಾರತ ತಂಡದ ಪ್ರಶಸ್ತಿ ನಿರೀಕ್ಷೆ ಕೊನೆಯ ಪಂದ್ಯಕ್ಕೂ ಮುನ್ನವೇ ಕೊನೆಗೊಂಡಿದೆ. ಅತಿ ಹೆಚ್ಚು 7 ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದು ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ (Team India) ಸೂಪರ್ ಫೋರ್ ಹಂತದಲ್ಲಿ ಸತತ ಎರಡು ಸೋಲುಗಳ ಭಾರವನ್ನು ಹೊರಬೇಕಾಗಿದೆ. ಟೀಂ ಇಂಡಿಯಾ ಟೂರ್ನಿಯ ಫೈನಲ್ ತಲುಪುವ ಅವಕಾಶ ಕಳೆದುಕೊಂಡು ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಪಂದ್ಯದಲ್ಲಿ ಉಳಿಯಲು ಟೀಮ್ ಇಂಡಿಯಾಗೆ ಅಫ್ಘಾನಿಸ್ತಾನದ ಗೆಲುವು ಅಗತ್ಯವಾಗಿತ್ತು ಆದರೆ ಪಾಕಿಸ್ತಾನ ಇದಕ್ಕೆ ಅವಕಾಶ ನೀಡಲಿಲ್ಲ.

ಅಫ್ಘಾನಿಸ್ತಾನ ಗೆಲ್ಲಲೇ ಬೇಕಿತ್ತು

ದುಬೈನಲ್ಲಿ ಮೊದಲು ಪಾಕಿಸ್ತಾನ ಮತ್ತು ನಂತರ ಶ್ರೀಲಂಕಾದ ಎದುರು ಸೋಲು ಟೀಮ್ ಇಂಡಿಯಾ ಫೈನಲ್ ತಲುಪುವ ನಿರೀಕ್ಷೆಯನ್ನು ಈಗಾಗಲೇ ಮಸುಕಾಗಿಸಿತ್ತು. ಭಾರತದ ಭರವಸೆಯು ಪಾಕಿಸ್ತಾನದ ಸೋಲಿನ ಮೇಲೆ ನಿಂತಿತ್ತು. ಹೀಗಾಗಿ ಅಫ್ಘಾನಿಸ್ತಾನ ಮೊದಲು ಪಾಕ್ ವಿರುದ್ಧ ಗೆಲ್ಲಬೇಕಾಗಿತ್ತು, ನಂತರ ಟೀಮ್ ಇಂಡಿಯಾ ಗುರುವಾರ ಅಫ್ಘಾನಿಸ್ತಾನವನ್ನು ಸೋಲಿಸಬೇಕಿತ್ತು. ಆಗ ಮಾತ್ರ ಟೀಂ ಇಂಡಿಯಾಕ್ಕೆ ಫೈನಲ್​ಗೇರುವ ಅವಕಾಶವಿರುತ್ತಿತ್ತು. ಇಂದು ಅಫ್ಘಾನಿಸ್ತಾನ ಗೆದ್ದಿದ್ದರೆ ಟೀಂ ಇಂಡಿಯಾಗೆ ಇನ್ನೂ ಒಂದು ಅವಕಾಶ ಸಿಗುತ್ತಿತ್ತು ಆದರೆ ಅದು ಸಾಧ್ಯವಾಗಲಿಲ್ಲ.

ಫೈನಲ್‌ನಲ್ಲಿ ಪಾಕಿಸ್ತಾನ-ಶ್ರೀಲಂಕಾ

ಬುಧವಾರ, ಸೆಪ್ಟೆಂಬರ್ 7 ರಂದು ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನವನ್ನು 1 ವಿಕೆಟ್‌ನಿಂದ ಸೋಲಿಸಿ ಪಂದ್ಯಾವಳಿಯ ಫೈನಲ್‌ನಲ್ಲಿ ಶ್ರೀಲಂಕಾದೊಂದಿಗೆ ಸೆಣಸಲು ಅಧಿಕೃತ ಟಿಕೆಟ್ ಕಾಯ್ದಿರಿಸಿತು. ಸೆಪ್ಟೆಂಬರ್ 11 ಭಾನುವಾರದಂದು ಇಬ್ಬರ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನದ ಬ್ಯಾಟ್ಸ್‌ಮನ್‌ಗಳು ತೀವ್ರ ನಿರಾಸೆ ಮೂಡಿಸಿದ್ದು, ಮೊದಲು ಬ್ಯಾಟ್ ಮಾಡಿದ ತಂಡ 20 ಓವರ್‌ಗಳಲ್ಲಿ 129 ರನ್ ಗಳಿಸಲಷ್ಟೇ ಶಕ್ತವಾಯಿತು. ಅಫ್ಘಾನಿಸ್ತಾನ ಖಂಡಿತವಾಗಿಯೂ ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಬಲವನ್ನು ಪ್ರದರ್ಶಿಸಿ ಪಾಕಿಸ್ತಾನಕ್ಕೆ ಸೋಲಿನ ಆಘಾತ ನೀಡಲು ಜಿದ್ದಾಜಿದ್ದಿನ ಹೋರಾಟ ನೀಡಿತು. ಆದರೆ ಅಂತಿಮವಾಗಿ ಕಡಿಮೆ ಸ್ಕೋರ್ ಅಫ್ಘಾನ್ ತಂಡಕ್ಕೆ ಗೆಲುವು ನೀಡಲಿಲ್ಲ.

ಭಾರತ-ಅಫ್ಘಾನಿಸ್ತಾನ ಔಟ್

ಈ ಮೂಲಕ 2016 ಮತ್ತು 2018ರಲ್ಲಿ ಸತತ ಎರಡು ಬಾರಿ ಟೂರ್ನಿಯ ಪ್ರಶಸ್ತಿ ಗೆದ್ದಿದ್ದ ಭಾರತ ತಂಡದ ಫೈನಲ್ ತಲುಪುವ ಆಸೆ ಕೊನೆಗೊಂಡಿತು. ಭಾರತ ಮಾತ್ರವಲ್ಲ, ಅಫ್ಘಾನಿಸ್ತಾನದ ಪ್ರಯಾಣವೂ ಇಲ್ಲಿಗೆ ಕೊನೆಗೊಂಡಿತು. ಅಫ್ಘಾನಿಸ್ತಾನವು ಪಂದ್ಯಾವಳಿಯಲ್ಲಿ ಅದ್ಭುತ ಆರಂಭವನ್ನು ಮಾಡಿ, ಶ್ರೀಲಂಕಾ ಮತ್ತು ಬಾಂಗ್ಲಾದೇಶವನ್ನು ಸೋಲಿಸಿ ಸೂಪರ್ ಫೋರ್‌ಗೆ ಪ್ರವೇಶಿಸಿತು. ಆದರೆ ಸೂಪರ್ 4 ಸುತ್ತಿನಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ. ಇದೀಗ ಭಾರತ ಮತ್ತು ಅಫ್ಘಾನಿಸ್ತಾನ ತಮ್ಮ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

Published On - 11:03 pm, Wed, 7 September 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ