AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ರಾಂತಿ, ವಿಶ್ರಾಂತಿ, ವಿಶ್ರಾಂತಿ… ಉಫ್! ವಿಂಡೀಸ್ ಬಳಿಕ ಮತ್ತೊಂದು ಸರಣಿಗೆ ರೋಹಿತ್, ಕೊಹ್ಲಿ, ಬುಮ್ರಾ ಅಲಭ್ಯ

ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಈ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇದೀಗ ಮತ್ತೊಮ್ಮೆ ಹಿರಿಯ ಆಟಗಾರರಿಗೆ ಇನ್ನೊಂದು ಪ್ರವಾಸದಿಂದ ವಿಶ್ರಾಂತಿ ನೀಡುವ ಸುದ್ದಿಯೊಂದು ಹೊರಬಿದ್ದಿದೆ.

ವಿಶ್ರಾಂತಿ, ವಿಶ್ರಾಂತಿ, ವಿಶ್ರಾಂತಿ... ಉಫ್! ವಿಂಡೀಸ್ ಬಳಿಕ ಮತ್ತೊಂದು ಸರಣಿಗೆ ರೋಹಿತ್, ಕೊಹ್ಲಿ, ಬುಮ್ರಾ ಅಲಭ್ಯ
ವಿರಾಟ್-ರೋಹಿತ್
TV9 Web
| Edited By: |

Updated on:Jul 09, 2022 | 3:35 PM

Share

ಭಾರತದ ಅನೇಕ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ (Rohit Sharma , Virat Kohli, Jasprit Bumrah) ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ನಿರತರಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಈ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇದೀಗ ಮತ್ತೊಮ್ಮೆ ಹಿರಿಯ ಆಟಗಾರರಿಗೆ ಇನ್ನೊಂದು ಪ್ರವಾಸದಿಂದ ವಿಶ್ರಾಂತಿ ನೀಡುವ ಸುದ್ದಿಯೊಂದು ಹೊರಬಿದ್ದಿದೆ. ANI ವರದಿಯ ಪ್ರಕಾರ, ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯ ನಂತರ, ಟೀಮ್ ಇಂಡಿಯಾ 3 ಪಂದ್ಯಗಳ ODI ಸರಣಿಗಾಗಿ ಆಗಸ್ಟ್‌ನಲ್ಲಿ ಜಿಂಬಾಬ್ವೆಗೆ ಪ್ರವಾಸ ಮಾಡಲಿದೆ. ಈ ಸರಣಿಯಿಂದಲೂ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬಹುದು ಎಂಬ ಮಾಹಿತಿ ಹೊರಬಿದ್ದಿದೆ.

ಜಿಂಬಾಬ್ವೆ ವಿರುದ್ಧ 3 ಏಕದಿನ ಸರಣಿ

ಇದನ್ನೂ ಓದಿ
Image
ವಿಶ್ವ ಕ್ರಿಕೆಟ್‌ನಲ್ಲಿ ಈತನಿಗಿಂತ ಉತ್ತಮ ಸ್ಪಿನ್ನರ್ ಇಲ್ಲ: ಮಾಜಿ ಆರ್​ಸಿಬಿ ಸ್ಪಿನ್ನರ್​ಗೆ ಹೊಗಳಿಕೆಯ ಮಹಾಪೂರ
Image
IND vs ENG, 2nd T20: ರೋಹಿತ್ ಜೊತೆ ಪಂತ್ ಓಪನರ್! ಕಿಶನ್​ಗೆ ಕೋಕ್? 2ನೇ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ

ಜಿಂಬಾಬ್ವೆ ಮಂಡಳಿಯ ಮೂಲವೊಂದು ಎಎನ್‌ಐಗೆ ಟೀಂ ಇಂಡಿಯಾ ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ ಎಂದು ತಿಳಿಸಿದೆ. ಮೊದಲ ಪಂದ್ಯ ಆಗಸ್ಟ್ 18 ರಂದು, ಎರಡನೇ ಪಂದ್ಯ ಆಗಸ್ಟ್ 20 ರಂದು ಮತ್ತು ಮೂರನೇ ಪಂದ್ಯ ಆಗಸ್ಟ್ 22 ರಂದು ನಡೆಯಲಿದೆ. ಅದೇ ಸಮಯದಲ್ಲಿ, ಈ ವರ್ಷ ಭಾರತ ತಂಡದ ವೇಳಾಪಟ್ಟಿ ತುಂಬಾ ಕಾರ್ಯನಿರತವಾಗಿದೆ ಎಂದು ಬಿಸಿಸಿಐ ಮೂಲ ತಿಳಿಸಿದೆ. ಅದಕ್ಕಾಗಿಯೇ 2 ತಂಡಗಳು ಒಮ್ಮೆಗೆ ಪ್ರವಾಸ ಮಾಡುತ್ತವೆ. ಬಿ ತಂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ವಿವಿಎಸ್ ಲಕ್ಷ್ಮಣ್ ಆ ತಂಡದ ಕೋಚ್ ಆಗಿರುತ್ತಾರೆ ಎಂಬ ಮಾಹಿತಿ ಕೇಳಿಬರುತ್ತಿದೆ. ಸದ್ಯಕ್ಕೆ ಭಾರತ ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್​ಗಳ ಸರಣಿ ಆಡುತ್ತಿದೆ.

ವೆಸ್ಟ್ ಇಂಡೀಸ್ ವಿರುದ್ಧವೂ ಅನುಭವಿಗಳಿಗೆ ವಿಶ್ರಾಂತಿ

ಇದಾದ ಬಳಿಕ ಶಿಖರ್ ಧವನ್ ನಾಯಕತ್ವದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ರವೀಂದ್ರ ಜಡೇಜಾ ಅವರನ್ನು ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ. ಇದಾದ ಬಳಿಕ ಭಾರತ, ಕೆರಿಬಿಯನ್ ತಂಡದೊಂದಿಗೆ 5 ಟಿ20 ಪಂದ್ಯಗಳ ಸರಣಿಯನ್ನು ಸಹ ಆಡಬೇಕಿದೆ. ಈ ಸರಣಿಯಿಂದ ಕೊಹ್ಲಿ, ರೋಹಿತ್ ಮತ್ತು ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಸದ್ಯಕ್ಕೆ ಕೊಹ್ಲಿ ಕೂಡ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿಯೂ ಅವರಿಗೆ ವಿಶ್ರಾಂತಿ ನೀಡಲಾಯಿತು. ಅದರ ನಂತರ ಅವರು ಇಂಗ್ಲೆಂಡ್ ವಿರುದ್ಧದ ಎಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಕೇವಲ 31 ರನ್ ಗಳಿಸಲಷ್ಟೇ ಶಕ್ತರಾದರು.

ಸದ್ಯಕ್ಕೆ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟಿ20 ಸರಣಿಯ ಬಗ್ಗೆ ಮಾತನಾಡುವುದಾದರೆ, ಮೊದಲ ಪಂದ್ಯದಲ್ಲೂ ಕೊಹ್ಲಿ, ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಯುವ ಪಡೆಯೊಂದಿಗೆ ಆಡಿದ ಭಾರತ ಈ ಪಂದ್ಯವನ್ನು 50 ರನ್‌ಗಳ ಅಂತರದಿಂದ ಗೆದ್ದುಕೊಂಡಿತು. ಆದರೆ 2ನೇ ಟಿ20 ಪಂದ್ಯದಲ್ಲಿ ಹಿರಿಯ ಕ್ರಿಕೆಟಿಗರು ಕಣಕ್ಕಿಳಿಯುವ ನಿರೀಕ್ಷೆ ಇದೆ.

Published On - 3:31 pm, Sat, 9 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?