ಟೀಮ್ ಇಂಡಿಯಾದಲ್ಲಿ ನೋ ಚಾನ್ಸ್​: ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಮಾಜಿ ಕ್ರಿಕೆಟಿಗನ ಮಗ

Manan Sharma: 2010 ರ ಅಂಡರ್ 19 ವಿಶ್ವಕಪ್‌ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಈ ವೇಳೆ ತಂಡದಲ್ಲಿದ್ದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಇದೀಗ ಟೀಮ್ ಇಂಡಿಯಾ ಭಾಗವಾಗಿದ್ದಾರೆ.

ಟೀಮ್ ಇಂಡಿಯಾದಲ್ಲಿ ನೋ ಚಾನ್ಸ್​: ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಮಾಜಿ ಕ್ರಿಕೆಟಿಗನ ಮಗ
Manan Sharma
Follow us
| Updated By: ಝಾಹಿರ್ ಯೂಸುಫ್

Updated on: Aug 19, 2021 | 4:54 PM

ಭಾರತೀಯ ಕ್ರಿಕೆಟ್ ಆಟಗಾರರ ನಿವೃತ್ತಿ ಪ್ರಕ್ರಿಯೆ ಮುಂದುವರೆದಿದೆ. ಭಾರತ ತಂಡವನ್ನು ಅಂಡರ್​-19 ವಿಭಾಗದಲ್ಲಿ ಪ್ರತಿನಿಧಿಸಿದ್ದ ಸ್ಮಿತ್ ಪಟೇಲ್ ಈ ಹಿಂದೆ ನಿವೃತ್ತಿ ಘೋಷಿಸಿ ಕೆರಿಬಿಯನ್ ಪ್ರೀಮಿಯರ್​ ಲೀಗ್​ನತ್ತ (CPL 2021) ಮುಖ ಮಾಡಿದ್ದರು. ಕೆಲ ದಿನಗಳ ಹಿಂದೆಷ್ಟೇ ಅಂಡರ್​-19 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ನಾಯಕ ಉನ್ಮುಕ್ತ್ ಚಂದ್ (Unmukth Chand) ಕೂಡ ನಿವೃತ್ತಿ ಘೋಷಿಸಿ ಅಮೆರಿಕನ್ ಲೀಗ್​ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಮನನ್ ಶರ್ಮಾ (Manan Sharma). 2010 ರಲ್ಲಿ ಟೀಮ್ ಇಂಡಿಯಾ (Team india) ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದ ಮನನ್ ಶರ್ಮಾ ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಅಮೆರಿಕ ಪರ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

ದೇಶೀಯ ಕ್ರಿಕೆಟ್​ನಲ್ಲಿ ದೆಹಲಿ ಪರ ಆಡುತ್ತಿದ್ದ 30 ವರ್ಷದ ಮನನ್ ಶರ್ಮಾ ಈ ಹಿಂದೆ ಶಿಖರ್ ಧವನ್, ಗೌತಮ್ ಗಂಭೀರ್, ಇಶಾಂತ್ ಶರ್ಮಾ ಮತ್ತು ರಿಷಬ್ ಪಂತ್ ಅವರಂತಹ ತಾರೆಯರು ಒಳಗೊಂಡ ತಂಡದ ಖಾಯಂ ಸದಸ್ಯರಾಗಿದ್ದರು. ಅಲ್ಲದೆ 2010 ರ ಅಂಡರ್ 19 ವಿಶ್ವಕಪ್‌ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಈ ವೇಳೆ ತಂಡದಲ್ಲಿದ್ದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಇದೀಗ ಟೀಮ್ ಇಂಡಿಯಾ ಭಾಗವಾಗಿದ್ದಾರೆ. ಆದರೆ ಸತತ ಪ್ರಯತ್ನದ ಹೊರತಾಗಿಯೂ ಮನನ್ ಶರ್ಮಾಗೆ ಭಾರತ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ.

ಅತ್ತ 2016ರ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡರೂ ಆಡುವ ಅವಕಾಶ ದೊರೆತಿರಲಿಲ್ಲ. ಇದೀಗ ಅವಕಾಶವನ್ನು ಅರಸಿ ಅಮೆರಿಕ ಕ್ರಿಕೆಟ್​ನತ್ತ ಮುಖ ಮಾಡಲು ಮನನ್ ಶರ್ಮಾ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಭಾರತೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಮಾಜಿ ಕ್ರಿಕೆಟಿಗನ ಮಗ: ಮನನ್ ಶರ್ಮಾ ಅವರು ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಅಜಯ್ ಶರ್ಮಾ ಅವರ ಮಗ ಎಂಬುದು ಅನೇಕರಿಗೆ ಗೊತ್ತಿಲ್ಲ. ಅಜಯ್ ಶರ್ಮಾ 1988 ರಿಂದ 1993 ರವರೆಗೆ ಟೀಮ್ ಇಂಡಿಯಾ ಪರ 31 ಏಕದಿನ ಹಾಗೂ 1 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ತಂದೆಯ ಹಾದಿಯಲ್ಲೇ ಬೆಳೆದು ಬಂದ ಮನನ್ ಶರ್ಮಾ ಅವರು ಅಂಡರ್-19 ತಂಡದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಆ ಬಳಿಕ ಹಿರಿಯ ತಂಡವನ್ನು ಸೇರಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ಎಡವಿದ್ದರು.

ದೇಶೀಯ ಕ್ರಿಕೆಟ್​ನ ಆಲ್​ರೌಂಡರ್​ ಆಗಿ ಗುರುತಿಸಿಕೊಂಡಿದ್ದ ಮನನ್ ಎಡಗೈ ಸ್ಪಿನ್ ಬೌಲರ್ ಮತ್ತು ಬ್ಯಾಟ್ಸ್‌ಮನ್. 35 ಪ್ರಥಮ ದರ್ಜೆ ಪಂದ್ಯಗಳಲ್ಲಿ ಒಂದು ಶತಕ ಮತ್ತು ಎಂಟು ಅರ್ಧ ಶತಕಗಳೊಂದಿಗೆ 1208 ರನ್ ಗಳಿಸಿದ್ದಾರೆ. ಅಲ್ಲದೆ 113 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇನ್ನು 59 ಲಿಸ್ಟ್ ಎ ಪಂದ್ಯಗಳಲ್ಲಿ 560 ರನ್ ಮತ್ತು 78 ವಿಕೆಟ್ ಪಡೆದಿದ್ದಾರೆ. ಹಾಗೆಯೇ 26 ಟಿ20 ಪಂದ್ಯಗಳನ್ನು ಆಡಿರುವ ಮನನ್ 131 ರನ್ ಮತ್ತು 32 ವಿಕೆಟ್ ಕಬಳಿಸಿದ್ದಾರೆ. 2019 ರ ಅಕ್ಟೋಬರ್‌ನಲ್ಲಿ ಕೊನೆಯ ಬಾರಿ ದೆಹಲಿ ಪರ ಆಡಿದ್ದ ಮನನ್​ಗೆ ಆ ಬಳಿಕ ಅವಕಾಶ ದೊರೆತಿರಲಿಲ್ಲ. ಹೀಗಾಗಿ ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ ವಿದೇಶಿ ಲೀಗ್ ಹಾಗೂ ಬೇರೊಂದು ದೇಶದ ಪರ ಆಡುವ ಇರಾದೆಯಲ್ಲಿದ್ದಾರೆ.

ಇದನ್ನೂ ಓದಿ: ICC Test Rankings: ಟೆಸ್ಟ್ ಬೌಲಿಂಗ್​ ರ‍್ಯಾಂಕಿಂಗ್: ಒಂದೇ ಪಂದ್ಯದಿಂದ 18 ಸ್ಥಾನ ಮೇಲೇರಿದ ಸಿರಾಜ್

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿದು ಹರಕಲು ಬಾಯಿ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: T20 World Cup 2021: 7 ಮಂದಿ ಔಟ್: ಟಿ20 ವಿಶ್ವಕಪ್​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

ಇದನ್ನೂ ಓದಿ: T20 World Cup: ಕೊಹ್ಲಿ ಹುಟ್ಟುಹಬ್ಬದಂದು ಟಿ20 ವಿಶ್ವಕಪ್‌ನಲ್ಲಿ ಭಾರತದ ಎದುರಾಳಿ ಯಾರು?

(Indian U19 Cricketer Manan Sharma Announces Retirement)

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್