IND-W vs SA-W: ಭಾರತ- ಆಫ್ರಿಕಾ ನಡುವೆ ನಿರ್ಣಾಯಕ ಪಂದ್ಯ; ಸರಣಿ ಸೋಲುವ ಆತಂಕದಲ್ಲಿ ಹರ್ಮನ್​ ಪಡೆ

IND-W vs SA-W: ಭಾರತ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮತ್ತು ಏಕೈಕ ಟೆಸ್ಟ್ ಪಂದ್ಯದಲ್ಲಿ ಬಲಿಷ್ಠ ಪ್ರದರ್ಶನ ನೀಡಿತ್ತು. ಇದರೊಂದಿಗೆ ಎರಡೂ ಸರಣಿಗಳನ್ನು ಕ್ಲೀನ್​ಸ್ವೀಪ್ ಮಾಡಿತ್ತು. ಆದರೆ ಮೊದಲ ಟಿ20ಯಲ್ಲಿ ಪ್ರವಾಸಿ ತಂಡದ ಎದುರು ಸೋತಿದ್ದು, ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಸದ್ಯ ಭಾರತ ತಂಡ ಸರಣಿಯಲ್ಲಿ 0-1 ಅಂತರದಲ್ಲಿ ಹಿನ್ನಡೆಯಲ್ಲಿದ್ದು, ಸರಣಿಯಲ್ಲಿ ಸಮಬಲ ಸಾಧಿಸಬೇಕಾದರೆ ಮಂಗಳವಾರ ನಡೆಯಲಿರುವ ಮೂರನೇ ಟಿ20 ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

IND-W vs SA-W: ಭಾರತ- ಆಫ್ರಿಕಾ ನಡುವೆ ನಿರ್ಣಾಯಕ ಪಂದ್ಯ; ಸರಣಿ ಸೋಲುವ ಆತಂಕದಲ್ಲಿ ಹರ್ಮನ್​ ಪಡೆ
ಭಾರತ- ದಕ್ಷಿಣ ಆಫ್ರಿಕಾ
Follow us
|

Updated on: Jul 08, 2024 | 9:47 PM

ಭಾರತ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮತ್ತು ಏಕೈಕ ಟೆಸ್ಟ್ ಪಂದ್ಯದಲ್ಲಿ ಬಲಿಷ್ಠ ಪ್ರದರ್ಶನ ನೀಡಿತ್ತು. ಇದರೊಂದಿಗೆ ಎರಡೂ ಸರಣಿಗಳನ್ನು ಕ್ಲೀನ್​ಸ್ವೀಪ್ ಮಾಡಿತ್ತು. ಆದರೆ ಮೊದಲ ಟಿ20ಯಲ್ಲಿ ಪ್ರವಾಸಿ ತಂಡದ ಎದುರು ಸೋತಿದ್ದು, ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಸದ್ಯ ಭಾರತ ತಂಡ ಸರಣಿಯಲ್ಲಿ 0-1 ಅಂತರದಲ್ಲಿ ಹಿನ್ನಡೆಯಲ್ಲಿದ್ದು, ಸರಣಿಯಲ್ಲಿ ಸಮಬಲ ಸಾಧಿಸಬೇಕಾದರೆ ಮಂಗಳವಾರ ನಡೆಯಲಿರುವ ಮೂರನೇ ಟಿ20 ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಮೊದಲೆರಡು ಪಂದ್ಯಗಳಂತೆ ಮೂರನೇ ಟಿ20 ಪಂದ್ಯಕ್ಕೂ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ ಆತಿಥ್ಯವಹಿಸಲಿದೆ.

ಲಯ ತಪ್ಪಿದ ಬೌಲಿಂಗ್ ವಿಭಾಗ

ಆದಾಗ್ಯೂ, ಭಾರತವು ಸರಣಿಯನ್ನು ಸಮಬಲಗೊಳಿಸಬೇಕಾದರೆ, ತಂಡದ ಬೌಲರ್‌ಗಳು ತಮ್ಮ ಹಳೆಯ ಲಯಕ್ಕೆ ಮರಳಬೇಕಾಗಿದೆ. ಮೊದಲ ಪಂದ್ಯದಲ್ಲಿ ಒಂಬತ್ತು ವಿಕೆಟ್‌ಗೆ 189 ರನ್ ಕಲೆಹಾಕಿದ್ದ ದಕ್ಷಿಣ ಆಫ್ರಿಕಾ ತಂಡ 12 ರನ್‌ಗಳಿಂದ ಪಂದ್ಯವನ್ನು ಗೆದ್ದಿತು. ಎರಡನೇ ಪಂದ್ಯದಲ್ಲಿ ಮಳೆಯಿಂದಾಗಿ ಭಾರತಕ್ಕೆ ಬ್ಯಾಟಿಂಗ್ ಅವಕಾಶ ಸಿಗಲಿಲ್ಲ, ಆದರೆ ಈ ಪಂದ್ಯದಲ್ಲೂ ಬೌಲರ್‌ಗಳು ದುಬಾರಿಯಾಗಿದ್ದು, ಆಫ್ರಿಕಾ ತಂಡ 177 ರನ್ ಕಲೆಹಾಕಿತ್ತು. ಮಂಗಳವಾರವೂ ಶೇ.30ರಿಂದ 40ರಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ ಮೂರನೇ ಟಿ20 ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ. ಎರಡೂ ಪಂದ್ಯಗಳಲ್ಲಿ ತಲಾ ಎರಡು ವಿಕೆಟ್ ಪಡೆದ ಪೂಜಾ ವಸ್ತ್ರಾಕರ್ ಮತ್ತು ಸ್ಪಿನ್ನರ್ ದೀಪ್ತಿ ಶರ್ಮಾ ಹೊರತುಪಡಿಸಿ, ಭಾರತದ ಬಹುತೇಕ ಬೌಲರ್‌ಗಳು ಪ್ರಭಾವ ಬೀರಲು ವಿಫಲರಾಗಿದ್ದಾರೆ.

ಮೊದಲ ಪಂದ್ಯದಲ್ಲಿ ರೇಣುಕಾ ಸಿಂಗ್ ದುಬಾರಿಯಾಗಿದ್ದರಿಂದ ಎರಡನೇ ಪಂದ್ಯದಲ್ಲಿ ಸಜೀವನ್ ಸಜ್ನಾಗೆ ಅವಕಾಶ ಸಿಕ್ಕಿತು. ಆದರೆ ಇದು ಕೂಡ ತಂಡಕ್ಕೆ ಪ್ರಯೋಜನವಾಗಲಿಲ್ಲ. ಭಾನುವಾರ ಶ್ರೇಯಾಂಕಾ ಪಾಟೀಲ್ ಮತ್ತು ರಾಧಾ ಯಾದವ್ ತಲಾ ಒಂದು ವಿಕೆಟ್ ಪಡೆದರು ಆದರೆ ಈ ಇಬ್ಬರೂ ಬೌಲರ್‌ಗಳು ಸಹ ಹೆಚ್ಚು ರನ್ ನೀಡಿ ಕೊಂಚ ದುಬಾರಿಯಾದರು. ಹೀಗಾಗಿ ನಾಳೆಯ ಪಂದ್ಯಕ್ಕೆ ತಂಡ ಹೊಸ ಯೋಜನೆಯೊಂದಿಗೆ ಕಣಕ್ಕಿಳಿಯಬೇಕಿದೆ.

ಬ್ಯಾಟಿಂಗ್‌ ವಿಭಾಗ ಬಲಿಷ್ಠವಾಗಿದೆ

ಬ್ಯಾಟಿಂಗ್‌ ವಿಭಾಗದಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಮೊದಲ ಟಿ20 ಪಂದ್ಯದಲ್ಲಿ ಜೆಮಿಮಾ ರಾಡ್ರಿಗಸ್ (ಔಟಾಗದೆ 53), ಸ್ಮೃತಿ ಮಂಧಾನ (46), ಹರ್ಮನ್‌ಪ್ರೀತ್ (35), ಶೆಫಾಲಿ ವರ್ಮಾ (18) ಮತ್ತು ದಯಾಲನ್ ಹೇಮಲತಾ (14) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೀಗಾಗಿ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದಲ್ಲಿ ಹೆಚ್ಚಿನ ಬದಲಾವಣೆಯ ಅಗತ್ಯವಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ