AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ವಿರುದ್ಧ ಕ್ಲೀನ್‌ಸ್ವೀಪ್ ; ಪಿಪಿಇ ಕಿಟ್‌ ಧರಿಸಿ ಟೀಂ ಇಂಡಿಯಾ ವನಿತೆಯರ ಕ್ಯಾಟ್‌ವಾಕ್..! ವಿಡಿಯೋ ನೋಡಿ

ಜೆಮಿಮಾ ರಾಡ್ರಿಗಸ್ ಜೊತೆಗೆ ಜೂಲನ್ ಗೋಸ್ವಾಮಿ ಮತ್ತು ಹಾರ್ಲಿನ್ ಡಿಯೋಲ್ ಸೇರಿದಂತೆ ಇತರ ಕ್ರಿಕೆಟಿಗರು ಮಾಡೆಲ್‌ಗಳನ್ನು ಅನುಕರಣೆ ಮಾಡುತ್ತಾ ರ‍್ಯಾಂಪ್ ವಾಕ್ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಕ್ಲೀನ್‌ಸ್ವೀಪ್ ; ಪಿಪಿಇ ಕಿಟ್‌ ಧರಿಸಿ ಟೀಂ ಇಂಡಿಯಾ ವನಿತೆಯರ ಕ್ಯಾಟ್‌ವಾಕ್..! ವಿಡಿಯೋ ನೋಡಿ
ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಕ್ಯಾಟ್ ವಾಕ್
TV9 Web
| Edited By: |

Updated on: Sep 28, 2022 | 5:10 PM

Share

ಟೀಂ ಇಂಡಿಯಾ ಮಹಿಳಾ ತಂಡ (Indian womens Cricket team) ಬರೋಬ್ಬರಿ 23 ವರ್ಷಗಳ ಬಳಿಕ ಆಂಗ್ಲರ ನಾಡಿನಲ್ಲಿ ಇತಿಹಾಸ ಸೃಷ್ಟಿಸಿದೆ. ಅವರದ್ದೇ ನೆಲದಲ್ಲಿ ಮೊದಲ ಬಾರಿಗೆ ಇಂಗ್ಲೆಂಡ್ ತಂಡವನ್ನು ಸೋಲಿಸಿ ಏಕದಿನ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಹೀಗಾಗಿ ತಮ್ಮ ವೃತ್ತಿಜೀವನದ ಕೊನೆಯ ಪಂದ್ಯವನ್ನಾಡಿದ ಜೂಲನ್ ಗೋಸ್ವಾಮಿಗೆ (Jhulan Goswami) ಹರ್ಮನ್‌ಪ್ರೀತ್ ಸೇನಾ ಭರ್ಜರಿ ವಿದಾಯ ಹೇಳಿತು. ಏತನ್ಮಧ್ಯೆ, ಇಂಗ್ಲೆಂಡ್ ವಿರುದ್ಧದ ಸರಣಿಯ ನಂತರ ಹರ್ಮನ್ ಸೇನೆಗೆ ಯಾವುದೇ ಪಂದ್ಯಗಳಿಲ್ಲ. ಹೀಗಾಗಿ 2023ರ ಏಕದಿನ ವಿಶ್ವಕಪ್​ವರೆಗೂ ಟೀಂ ಇಂಡಿಯಾಕ್ಕೆ ಫುಲ್ ರೆಸ್ಟ್ ಸಿಗಲಿದೆ. ಏತನ್ಮಧ್ಯೆ, ಇಂಗ್ಲೆಂಡ್ ವಿರುದ್ಧದ ಸರಣಿಯ ನಂತರ ತವರಿಗೆ ಮರಳಿದ ಟೀಂ ಇಂಡಿಯಾದ ಮಹಿಳಾ ಕ್ರಿಕೆಟಿಗರು ಲಂಡನ್ ವಿಮಾನ ನಿಲ್ದಾಣದಲ್ಲಿ ಪಿಪಿಇ ಕಿಟ್‌ ಧರಿಸಿ ಕ್ಯಾಟ್‌ವಾಕ್ ಮಾಡಿ ಸಂಭ್ರಮಿಸಿದ್ದಾರೆ.

ಜೆಮಿಮಾ ರಾಡ್ರಿಗಸ್ ಜೊತೆಗೆ ಜೂಲನ್ ಗೋಸ್ವಾಮಿ ಮತ್ತು ಹಾರ್ಲಿನ್ ಡಿಯೋಲ್ ಸೇರಿದಂತೆ ಇತರ ಕ್ರಿಕೆಟಿಗರು ಮಾಡೆಲ್‌ಗಳನ್ನು ಅನುಕರಣೆ ಮಾಡುತ್ತಾ ರ‍್ಯಾಂಪ್ ವಾಕ್ ಮಾಡಿದ್ದಾರೆ. ಈ ಸುಂದರ ವಿಡಿಯೋವನ್ನು ಟೀಂ ಇಂಡಿಯಾ ಮಹಿಳಾ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈಗ ಈ ವಿಡಿಯೋ ಎಲ್ಲೆಡೆ ಸಾಕಷ್ಟು ವೈರಲ್ ಆಗುತ್ತಿದೆ.

ಅದ್ಧೂರಿ ಸ್ವಾಗತ

ಇದೇ ವೇಳೆ ತಾಯ್ನಾಡಿಗೆ ಆಗಮಿಸಿದ ಟೀಂ ಇಂಡಿಯಾದ ಮಹಿಳಾ ಕ್ರಿಕೆಟಿಗರಿಗೆ ಅದ್ಧೂರಿ ಸ್ವಾಗತ ಕೂಡ ದೊರೆಯಿತು. ಕ್ರಿಕೆಟ್‌ಗೆ ವಿದಾಯ ಹೇಳಿದ ಜೂಲನ್ ಗೋಸ್ವಾಮಿ ಮತ್ತು ಆಲ್‌ರೌಂಡರ್ ದೀಪ್ತಿ ಶರ್ಮಾ ಅವರನ್ನು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಏತನ್ಮಧ್ಯೆ, ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ, ದೀಪ್ತಿಶರ್ಮಾ ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್ ಚಾರ್ಲಿ ಡೀನ್ ಅವರನ್ನು ಮಂಕಡಿಂಗ್ ಮಾಡಿದ್ದು, ಪಂದ್ಯದ ನಂತರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಪಂದ್ಯ ಸೋತ ನಂತರ ಚಾರ್ಲಿ ಡೀನ್ ಕಣ್ಣೀರಿಟ್ಟಿದ್ದು ಗೊತ್ತೇ ಇದೆ. ಇದರ ಪರಿಣಾಮವಾಗಿ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳು ದೀಪ್ತಿ ಶರ್ಮಾ ಅವರ ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿ ಆಡುತ್ತಿದ್ದಾರೆ ಎಂದು ಟೀಕಿಸಿದರು. ಆದರೆ ಹಲವು ಕ್ರಿಕೆಟಿಗರು ಹಾಗೂ ಸೆಲೆಬ್ರಿಟಿಗಳು ಟೀಂ ಇಂಡಿಯಾ ಆಟಗಾರ್ತಿಗೆ ಬೆಂಬಲ ಸೂಚಿಸಿ ದೀಪ್ತಿ ನಿಯಮಾನುಸಾರ ಮಂಕಡಿಂಗ್ ಮಾಡಿದ್ದಾರೆ ಎಂದು ಹೇಳಿದ್ದರು.

ಸಾಕಷ್ಟು ಬಾರಿ ಎಚ್ಚರಿಕೆಯನ್ನು ನೀಡಿದ್ದೆವು

ಟೀಕೆಗಳಿಗೆ ಭಾರತಕ್ಕೆ ಮರಳಿದ ನಂತರ ಮಾತನಾಡಿ ದೀಪ್ತಿ ಶರ್ಮಾ ಉತ್ತರಿಸಿದ್ದು, “ಇದು ನಮ್ಮ ಯೋಜನೆಯಾಗಿತ್ತು ಏಕೆಂದರೆ ಅವರು ಇದನ್ನು ನಿರಂತರವಾಗಿ ಮಾಡುತ್ತಿದ್ದರು (ಇಂಗ್ಲೆಂಡ್ ಬ್ಯಾಟರ್ ಚಾರ್ಲಿ ಡೀನ್). ಹೀಗಾಗಿ ನಾವು ಅವರಿಗೆ ಸಾಕಷ್ಟು ಬಾರಿ ಎಚ್ಚರಿಕೆಯನ್ನು ನೀಡಿದ್ದೆವು. ಆದರೆ ಇದನ್ನು ಇಂಗ್ಲೆಂಡ್ ಬ್ಯಾಟರ್​ ಗಂಭೀರವಾಗಿ ಪರಿಗಣಿಸಲಿಲ್ಲ. ಅದಕ್ಕಾಗಿಯೇ ನಾವು ಐಸಿಸಿ ನಿಯಮಗಳ ಪ್ರಕಾರ ಈ ರನೌಟ್​ ಮಾಡಿದ್ದೇವೆ ಎಂದಿದ್ದಾರೆ.

ಎಂಸಿಸಿ ಹೇಳಿದ್ದೇನು?

ಈ ವಿವಾದದ ನಂತರ, ಕ್ರಿಕೆಟ್‌ನ ನಿಯಮಗಳ ರಚನೆಯ ಸಂಸ್ಥೆಯಾದ ಎಂಸಿಸಿ, ಬೌಲರ್‌ನ ಕೈಯಿಂದ ಚೆಂಡು ಬಿಡುಗಡೆಯಾಗುವವರೆಗೂ ನಾನ್‌ಸ್ಟ್ರೈಕರ್‌ನ ತುದಿಯಲ್ಲಿ ನಿಂತಿರುವ ಬ್ಯಾಟ್ಸ್‌ಮನ್‌ ಕ್ರೀಸ್‌ನಿಂದ ಹೊರಹೋಗುವಂತಿಲ್ಲ. ಒಂದು ವೇಳೆ ನಾನ್‌ಸ್ಟ್ರೈಕರ್‌ ತುದಿಯಲ್ಲಿ ನಿಂತಿರುವ ಬ್ಯಾಟರ್ ಈ ತಪ್ಪನ್ನು ಮಾಡಿದ್ದರೆ, ಬೌಲರ್​ ಅವರನ್ನು ರನೌಟ್​ ಮಾಡುವುದು ಕ್ರಿಕೆಟ್​ ನಿಯಮಗಳ ಪ್ರಕಾರ ಸರಿಯಾದ ಕ್ರಮವಾಗಿದೆ ಎಂದು ಎಂಸಿಸಿ ಹೇಳಿದೆ.

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!