AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW: ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದ ಆಸೀಸ್: ಭಾರತೀಯ ಮಹಿಳೆಯರಿಗೆ ಎರಡನೇ ಸೋಲು

India Women vs Australia Women: ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಿಸುವ ಮೂಲಕ ಮುನ್ನಡೆ ಸಾಧಿಸಿದೆ. ಭಾರತ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

INDW vs AUSW: ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದ ಆಸೀಸ್: ಭಾರತೀಯ ಮಹಿಳೆಯರಿಗೆ ಎರಡನೇ ಸೋಲು
INDW vs AUSW
TV9 Web
| Edited By: |

Updated on: Dec 15, 2022 | 9:09 AM

Share

ಭಾರತ ಪ್ರವಾಸ ಬೆಳೆಸಿರುವ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡ ಟಿ20 ಸರಣಿ ಆಡುತ್ತಿದ್ದು ಬೊಂಬಾಟ್ ಪ್ರದರ್ಶನ ತೋರುತ್ತಿದೆ. ಬುಧವಾರ ಮುಂಬೈನ ಬ್ರಬೌರ್ನ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ 21 ರನ್​ಗಳ ಜಯ ಸಾಧಿಸುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಮುನ್ನಡೆ ಪಡೆದುಕೊಂಡಿದೆ. ಕಾಂಗರೂ ಪಡೆಯ ಬ್ಯಾಟಿಂಗ್-ಬೌಲಿಂಗ್ ಅಬ್ಬರಕ್ಕೆ ತಬ್ಬಿಬ್ಬಾದ ಭಾರತ ಮಹಿಳಾ ತಂಡ ಎರಡನೇ ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಆಸೀಸ್ 9 ವಿಕೆಟ್​ಗಳ ಜಯ ಸಾಧಿಸಿದರೆ, ದ್ವಿತೀಯ ಟಿ20ಯಲ್ಲಿ ನಡೆದ ಸೂಪರ್ ಓವರ್​ನಲ್ಲಿ ಭಾರತ ಗೆಲುವು ಕಂಡಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಿಸುವ ಮೂಲಕ ಮುನ್ನಡೆ ಸಾಧಿಸಿದೆ. ಭಾರತ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

ತೃತೀಯ ಟಿ20 ಯಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಇಳಿದ ಆಸ್ಟ್ರೇಲಿಯಾ ಮೊದಲ ಓವರ್​ನಲ್ಲೇ ರೇಣುಕಾ ಸಿಂಗ್ ಬೌಲಿಂಗ್​ನಲ್ಲಿ ಅಲಿಸ್ಸಾ ಹೀಲೆ (1) ಔಟಾದರು. ನಂತರದ ಓವರ್​ನಲ್ಲಿ ತಹಿಲಾ ಮೆಕ್​ಘ್ರತ್ ಕೂಡ 1 ರನ್​ಗೆ ನಿರ್ಗಮಿಸಿದರು. ನಂತರ ಬೆತ್ ಮೂನೆ ಹಾಗೂ ಎಲಿಸ್ಸಾ ಪೆರಿ ಉತ್ತಮ ಜೊತೆಯಾಟ ಆಡಿ ತಂಡವನ್ನು ಮೇಲೆತ್ತಿದರು. ಈ ಜೋಡಿ 64 ರನ್​ಗಳ ಜೊತೆಯಾಟ ಆಡತು. ಚೆನ್ನಾಗಿಯೆ ಆಡುತ್ತಿದ್ದ ಮೋನಿ 22 ಎಸೆತಗಳಲ್ಲಿ 30 ರನ್ ಗಳಿಸಿ ದೇವಿಕಾ ಬೌಲಿಂಗ್​ನಲ್ಲಿ ಔಟಾದರು. ಆಶ್ಲೆಗ್ ಗಾರ್ಡನ್ 7 ರನ್​ಗೆ ಸುಸ್ತಾದರು.

ಅಪ್ಪನಂತೆಯೇ ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ ಅರ್ಜುನ್ ತೆಂಡೂಲ್ಕರ್..!

ಇದನ್ನೂ ಓದಿ
Image
FIFA World Cup 2022: ಸೆಮೀಸ್​ನಲ್ಲಿ ಮೊರಕ್ಕೊಗೆ ಸೋಲು: ಫಿಫಾ ಫೈನಲ್​ನಲ್ಲಿ ಫ್ರಾನ್ಸ್-ಅರ್ಜೆಂಟೀನಾ ಸೆಣೆಸಾಟ
Image
Kane Williamson: ನ್ಯೂಜಿಲ್ಯಾಂಡ್ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದ ಕೇನ್ ವಿಲಿಯಮ್ಸನ್
Image
ICC Rankings: ಐಸಿಸಿ ರ‍್ಯಾಂಕಿಂಗ್‌ನಲ್ಲಿ ಬರೋಬ್ಬರಿ 117 ಸ್ಥಾನ ಜಿಗಿದ ಇಶಾನ್ ಕಿಶನ್! ಕೊಹ್ಲಿಗೂ ಲಾಭ
Image
ಐಪಿಎಲ್​ ತಂಡವನ್ನೇ ಖರೀದಿಸುವ ಸಾಮರ್ಥ್ಯ ಹೊಂದಿರುವ ಮೆಸ್ಸಿ ಎಷ್ಟು ಸಾವಿರ ಕೋಟಿಯ ಒಡೆಯ ಗೊತ್ತಾ?

ಈ ಸಂದರ್ಭ ಗ್ರಾನ್ಸ್ ಹ್ಯಾರಿಸ್ ಹಾಗೂ ಎಲಿಸ್ಸಾ ಪೆರಿ ಬೊಂಬಾಟ್ ಬ್ಯಾಟಿಂಗ್ ಪ್ರದರ್ಶಿಸಿದರು. ಸ್ಫೋಟಕ ಆಟವಾಡಿದ ಈ ಜೋಡಿ ಭಾರತೀಯ ಬೌಲರ್​ಗಳ ಬೆವರಿಳಿಸಿದರು. ಪೆರಿ 47 ಎಸೆತಗಳಲ್ಲಿ 9 ಫೋರ್, 3 ಸಿಕ್ಸರ್​ನೊಂದಿಗೆ 75 ರನ್ ಚಚ್ಚಿದರೆ, ಹ್ಯಾರಿಸ್ ಕೇವಲ 18 ಎಸೆತಗಳಲ್ಲಿ 4 ಫೋರ್, 3 ಸಿಕ್ಸರ್​ನೊಂದಿಗೆ 41 ರನ್ ಸಿಡಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತು. ಭಾರತ ಪರ ರೇಣುಕಾ ಸಿಂಗ್, ಅಂಜಲಿ, ದೀಪ್ತಿ ಹಾಗೂ ದೇವಿಕಾ ತಲಾ 2 ವಿಕೆಟ್ ಪಡೆದರು.

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಭಾರತ ಮಹಿಳಾ ತಂಡ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆಗೆ ಸ್ಮೃತಿ ಮಂದಾನ (1) ವಿಕೆಟ್ ಕಳೆದುಕೊಂಡಿತು. ಜೆಮಿಯಾ ರೋಡ್ರಿಗಸ್ 16 ರನ್​ಗೆ ಔಟಾದರು. ಈ ಸಂದರ್ಭ ತಂಡವನ್ನು ಮೇಲೆತ್ತಿದ ಶಫಾಲಿ ವರ್ಮಾ ಹಾಗೂ ನಾಯಕಿ ಹರ್ಮನ್​ಪ್ರೀತ್ ಕೌರ್ ಅತ್ಯುತ್ತಮ ಜೊತೆಯಾಟ ಆಡಿದರು. ಗೆಲುವಿಗೆ ಹೋರಾಟ ನಡೆಸಿದ ಈ ಜೋಡಿ ತಂಡದ ಮೊತ್ತವನ್ನು 100 ರ ಗಡಿ ದಾಟಿಸಿದರು. ಶಫಾಲಿ 41 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಕೌರ್ 27 ಎಸೆತಗಳಲ್ಲಿ 37 ರನ್​ಗಳ ಕೊಡುಗೆ ನೀಡಿದರು. ಆದರೆ, ನಂತರ ಬಂದ ಬ್ಯಾಟರ್​ಗಳ ಪೈಕಿ ದೀಪ್ತಿ ಶರ್ಮಾ (ಅಜೇಯ 25) ಬಿಟ್ಟರೆ ಮತ್ಯಾರೂ ಹೋರಾಟ ನಡೆಸಲಿಲ್ಲ.

20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ ಮಹಿಳಾ ತಂಡ 151 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಆಸ್ಟ್ರೇಲಿಯಾ ಪರ ಡಾರ್ಸಿ ಬ್ರೌನ್ ಮತ್ತು ಗಾರ್ಡನರ್ ತಲಾ 2 ವಿಕೆಟ್ ಪಡೆದರೆ ಮೆಗನ್ ಸ್ಕಟ್ ಹಾಗೂ ನಿಕೋಲ ಕರೆ ತಲಾ 1 ವಿಕೆಟ್ ಪಡೆದರು. ಎಲಿಸ್ಸಾ ಪೆರಿ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-2 ರ ಹಿನ್ನಡೆಯಲ್ಲಿದೆ. ನಾಲ್ಕನೇ ಟಿ20 ಪಂದ್ಯ ಡಿಸೆಂಬರ್ 17 ರಂದು ಬ್ರಬೌರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ