‘ಇಂಡಿಯನ್ಸ್ ಹೆದರಿಕೊಳ್ತಾರೆ’! ಪಾಕ್ ನಾಯಕನನ್ನು ಹೊಗಳುವ ಭರದಲ್ಲಿ ಭಾರತೀಯರನ್ನು ಕೆಣಕಿದ ಪಾಕ್ ಕ್ರಿಕೆಟ್ ಫ್ಯಾನ್ಸ್

Asia Cup 2022: ಆಗಸ್ಟ್ 28 ರಂದು ಬಹುನಿರೀಕ್ಷಿತ ಏಷ್ಯಾಕಪ್ 2022 ಆರಂಭವಾಗಲಿದ್ದು, ಈ ಕ್ರೀಡಾಕೂಟದಲ್ಲಿ ಒಂದು ವರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗಲು ವೇದಿಕೆ ಸಿದ್ಧವಾಗಿದೆ.

‘ಇಂಡಿಯನ್ಸ್ ಹೆದರಿಕೊಳ್ತಾರೆ'! ಪಾಕ್ ನಾಯಕನನ್ನು ಹೊಗಳುವ ಭರದಲ್ಲಿ ಭಾರತೀಯರನ್ನು ಕೆಣಕಿದ ಪಾಕ್ ಕ್ರಿಕೆಟ್ ಫ್ಯಾನ್ಸ್
Follow us
| Updated By: ಪೃಥ್ವಿಶಂಕರ

Updated on:Aug 13, 2022 | 9:26 PM

ಆಗಸ್ಟ್ 28 ರಂದು ಬಹುನಿರೀಕ್ಷಿತ ಏಷ್ಯಾಕಪ್ 2022 (Asia Cup 2022) ಆರಂಭವಾಗಲಿದ್ದು, ಈ ಕ್ರೀಡಾಕೂಟದಲ್ಲಿ ಒಂದು ವರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗಲು ವೇದಿಕೆ ಸಿದ್ಧವಾಗಿದೆ. ICC T20 ವಿಶ್ವಕಪ್‌ನಲ್ಲಿ (ICC T20 World Cup 2022) ಸೋಲಿನ ನಂತರ ಮೆನ್ ಇನ್ ಬ್ಲೂ ಮೆನ್ ಇನ್ ಗ್ರೀನ್ ತಂಡವನ್ನು ಎದುರಿಸುವುದು ಇದೇ ಮೊದಲು. ಉಭಯ ತಂಡಗಳಿಗೂ ಏಷ್ಯಾಕಪ್ ಗೆಲ್ಲುವುದು ಬಹಳ ಮುಖ್ಯವಾಗಿದ್ದು, ಎರಡೂ ತಂಡಗಳು ಸಹ ಗೆಲುವಿಗಾಗಿ ಶತಾಯಗತಾಯ ಹೋರಾಡಲಿವೆ. ಇದಕ್ಕಾಗಿ ಟೀಂ ಇಂಡಿಯಾ ಮಾಜಿ ನಾಯಕ ಕೊಹ್ಲಿ ಈಗಾಗಲೇ ಸಮರಾಭ್ಯಾಸ ಶುರು ಮಾಡಿದ್ದು, ಈಗ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಕೂಡ ತಾಲೀಮು ಆರಂಭಿಸಿದ್ದಾರೆ. ಏಷ್ಯಾಕಪ್​ಗಾಗಿ ಅಭ್ಯಾಸ ಆರಂಭಿಸಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಫೋಟೋವನ್ನು ಪಾಕ್ ನಾಯಕ ಬಾಬರ್ ಆಜಮ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ತಕ್ಷಣ, ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಬಾಬರ್ ಅವರನ್ನು ಹೊಗಳಲು ಪ್ರಾರಂಭಿಸಿದ್ದಾರೆ. ಆದರೆ ಕೆಲವು ಅಂದ ಅಭಿಮಾನಿಗಳು ಭಾರತವನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅಂತಹ ಕೆಲವು ಟ್ವೀಟ್‌ಗಳು ಇಲ್ಲಿವೆ.

ಏಷ್ಯಾ ಕಪ್​ಗೆ ಉಭಯ ತಂಡಗಳು ಹೀಗಿವೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷ್ದೀಪ್ ಸಿಂಗ್, ಅವೇಶ್ ಖಾನ್.

ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ದೀಪಕ್ ಚಹಾರ್.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಖಾದಿರ್.

Published On - 9:26 pm, Sat, 13 August 22

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?