AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿಯನ್ಸ್ ಹೆದರಿಕೊಳ್ತಾರೆ’! ಪಾಕ್ ನಾಯಕನನ್ನು ಹೊಗಳುವ ಭರದಲ್ಲಿ ಭಾರತೀಯರನ್ನು ಕೆಣಕಿದ ಪಾಕ್ ಕ್ರಿಕೆಟ್ ಫ್ಯಾನ್ಸ್

Asia Cup 2022: ಆಗಸ್ಟ್ 28 ರಂದು ಬಹುನಿರೀಕ್ಷಿತ ಏಷ್ಯಾಕಪ್ 2022 ಆರಂಭವಾಗಲಿದ್ದು, ಈ ಕ್ರೀಡಾಕೂಟದಲ್ಲಿ ಒಂದು ವರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗಲು ವೇದಿಕೆ ಸಿದ್ಧವಾಗಿದೆ.

‘ಇಂಡಿಯನ್ಸ್ ಹೆದರಿಕೊಳ್ತಾರೆ'! ಪಾಕ್ ನಾಯಕನನ್ನು ಹೊಗಳುವ ಭರದಲ್ಲಿ ಭಾರತೀಯರನ್ನು ಕೆಣಕಿದ ಪಾಕ್ ಕ್ರಿಕೆಟ್ ಫ್ಯಾನ್ಸ್
TV9 Web
| Edited By: |

Updated on:Aug 13, 2022 | 9:26 PM

Share

ಆಗಸ್ಟ್ 28 ರಂದು ಬಹುನಿರೀಕ್ಷಿತ ಏಷ್ಯಾಕಪ್ 2022 (Asia Cup 2022) ಆರಂಭವಾಗಲಿದ್ದು, ಈ ಕ್ರೀಡಾಕೂಟದಲ್ಲಿ ಒಂದು ವರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗಲು ವೇದಿಕೆ ಸಿದ್ಧವಾಗಿದೆ. ICC T20 ವಿಶ್ವಕಪ್‌ನಲ್ಲಿ (ICC T20 World Cup 2022) ಸೋಲಿನ ನಂತರ ಮೆನ್ ಇನ್ ಬ್ಲೂ ಮೆನ್ ಇನ್ ಗ್ರೀನ್ ತಂಡವನ್ನು ಎದುರಿಸುವುದು ಇದೇ ಮೊದಲು. ಉಭಯ ತಂಡಗಳಿಗೂ ಏಷ್ಯಾಕಪ್ ಗೆಲ್ಲುವುದು ಬಹಳ ಮುಖ್ಯವಾಗಿದ್ದು, ಎರಡೂ ತಂಡಗಳು ಸಹ ಗೆಲುವಿಗಾಗಿ ಶತಾಯಗತಾಯ ಹೋರಾಡಲಿವೆ. ಇದಕ್ಕಾಗಿ ಟೀಂ ಇಂಡಿಯಾ ಮಾಜಿ ನಾಯಕ ಕೊಹ್ಲಿ ಈಗಾಗಲೇ ಸಮರಾಭ್ಯಾಸ ಶುರು ಮಾಡಿದ್ದು, ಈಗ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಕೂಡ ತಾಲೀಮು ಆರಂಭಿಸಿದ್ದಾರೆ. ಏಷ್ಯಾಕಪ್​ಗಾಗಿ ಅಭ್ಯಾಸ ಆರಂಭಿಸಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಫೋಟೋವನ್ನು ಪಾಕ್ ನಾಯಕ ಬಾಬರ್ ಆಜಮ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ತಕ್ಷಣ, ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಬಾಬರ್ ಅವರನ್ನು ಹೊಗಳಲು ಪ್ರಾರಂಭಿಸಿದ್ದಾರೆ. ಆದರೆ ಕೆಲವು ಅಂದ ಅಭಿಮಾನಿಗಳು ಭಾರತವನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅಂತಹ ಕೆಲವು ಟ್ವೀಟ್‌ಗಳು ಇಲ್ಲಿವೆ.

ಏಷ್ಯಾ ಕಪ್​ಗೆ ಉಭಯ ತಂಡಗಳು ಹೀಗಿವೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷ್ದೀಪ್ ಸಿಂಗ್, ಅವೇಶ್ ಖಾನ್.

ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ದೀಪಕ್ ಚಹಾರ್.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಖಾದಿರ್.

Published On - 9:26 pm, Sat, 13 August 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್