Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಸರಣಿ ಸೋಲು, ನಂತರ ಚಾಂಪಿಯನ್; ಭಾರತದ ಗೆಲುವಿನಲ್ಲಿ ಹೀಗೊಂದು ಕಾಕತಾಳೀಯ

Champions Trophy: 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್‌ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದು ಭಾರತದ ಮೂರನೇ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಆಗಿದೆ. ಆಸಕ್ತಿದಾಯಕವಾಗಿ, 2013ರ ಗೆಲುವಿನಂತೆ, ಈ ಗೆಲುವಿನಲ್ಲೂ ಎರಡು ಕುತೂಹಲಕಾರಿ ಹೋಲಿಕೆಗಳಿವೆ. ಈ ಟೂರ್ನಿಗೂ ಮುನ್ನ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಭಾರತ ಯಾವ ತಂಡದ ವಿರುದ್ಧ ಸರಣಿ ಸೋತಿತ್ತೋ, ಅದೇ ತಂಡವನ್ನು ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ಮಣಿಸಿ ಚಾಂಪಿಯನ್ ಆಗಿದೆ.

ಮೊದಲು ಸರಣಿ ಸೋಲು, ನಂತರ ಚಾಂಪಿಯನ್; ಭಾರತದ ಗೆಲುವಿನಲ್ಲಿ ಹೀಗೊಂದು ಕಾಕತಾಳೀಯ
Team India
Follow us
ಪೃಥ್ವಿಶಂಕರ
|

Updated on: Mar 10, 2025 | 4:58 PM

ಚಾಂಪಿಯನ್ಸ್ ಟ್ರೋಫಿ (Champions Trophy 2025) ಗೆಲ್ಲಬೇಕೆಂಬ ಭಾರತದ 12 ವರ್ಷಗಳ ಬಯಕೆ ಕೊನೆಗೂ ಈಡೇರಿದೆ. ಮಾರ್ಚ್ 9, 2025 ರ ಸಂಜೆ, ದುಬೈ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವು, ನ್ಯೂಜಿಲೆಂಡ್ ತಂಡವನ್ನು ಮಣಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಇದು ಟೀಂ ಇಂಡಿಯಾದ (Team India) ಮೂರನೇ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯಾಗಿದೆ. ಇದಕ್ಕೂ ಮುನ್ನ 2013 ರಲ್ಲಿ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಅಚ್ಚರಿಯೆಂದರೆ, ಭಾರತದ 2025 ರ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲೂ ಹಾಗೂ 2013 ರ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲೂ 2 ಪ್ರಮುಖ ಘಟನೆಗಳು ಒಂದೇ ರೀತಿಯಲ್ಲಿ ಸಂಭವಿಸಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಮೊದಲ ಕಾಕತಾಳೀಯ

ಮೊದಲ ಕಾಕತಾಳೀಯವೆಂದರೆ, 2013 ರ ಚಾಂಪಿಯನ್ಸ್ ಟ್ರೋಫಿ ನಡೆಯುವುದಕ್ಕೂ ಮುನ್ನ ಟೀಂ ಇಂಡಿಯಾ, 2012 ರಲ್ಲಿ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು ಸೋತಿತ್ತು. ಈ ಸೋಲಿನೊಂದಿಗೆ 2013 ರ ಚಾಂಪಿಯನ್ಸ್ ಟ್ರೋಫಿಗೆ ಕಾಲಿಟ್ಟಿದ್ದ ಟೀಂ ಇಂಡಿಯಾ, ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಅದೇ ರೀತಿ, 2024 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು ಭಾರತ ಸೋತಿತ್ತು. ಈ ಸೋಲಿನೊಂದಿಗೆ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿದ್ದ ಟೀಂ ಇಂಡಿಯಾ ಇದೀಗ, ಫೈಣಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವುದರೊಂದಿಗೆ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

ಇದನ್ನೂ ಓದಿ
Image
‘ಧನ್ಯವಾದಗಳು’; ನಿವೃತ್ತಿ ವದಂತಿ ಬಗ್ಗೆ 4 ಪದಗಳಲ್ಲಿ ಉತ್ತರಿಸಿದ ಜಡೇಜಾ
Image
ಒಂದು ಪಂದ್ಯವನ್ನು ಗೆಲ್ಲದೆ ಕೋಟಿ ಮೊತ್ತ ಪಡೆದ ಪಾಕಿಸ್ತಾನ
Image
60 ಕೋಟಿ ರೂಗಳಲ್ಲಿ ಯಾವ ತಂಡಕ್ಕೆ ಎಷ್ಟು ಹಣ ಸಿಗ್ತು? ಇಲ್ಲಿದೆ ವಿವರ
Image
ಕಿವೀಸ್ ಮಣಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ

ಇದನ್ನೂ ಓದಿ: Ravindra Jadeja: 4 ಪದಗಳ ಉತ್ತರ; ನಿವೃತ್ತಿ ವದಂತಿಯ ಬಗ್ಗೆ ಮೌನ ಮುರಿದ ರವೀಂದ್ರ ಜಡೇಜಾ

ಎರಡನೇ ಕಾಕತಾಳೀಯ

ಇದಲ್ಲದೆ, ಚಾಂಪಿಯನ್ಸ್ ಟ್ರೋಫಿ ಗೆಲುವಿನ ಎರಡನೇ ಕಾಕತಾಳೀಯ ತಂಡದ ಮಾಜಿ ನಾಯಕ ಹಾಗೂ ಹಾಲಿ ನಾಯಕರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ಸಂಬಂಧಿಸಿದ್ದಾಗಿದೆ. ವಾಸ್ತವವಾಗಿ 2024 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ವಿರಾಟ್ ಕೊಹ್ಲಿ 76 ರನ್ ಕಲೆಹಾಕುವ ಮೂಲಕ ಭಾರತ ತಂಡವನ್ನು ಚಾಂಪಿಯನ್ ಮಾಡಿದ್ದರು. ಅದೇ ರೀತಿ, ನಿನ್ನೆ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ರೋಹಿತ್ ಶರ್ಮಾ ಕೂಡ 76 ರನ್ ಬಾರಿಸುವ ಮೂಲಕ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ