AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾ ವಿರುದ್ಧ ಹೀಗಿರಲಿದೆ ಭಾರತದ ಪ್ಲೇಯಿಂಗ್ 11

Australia vs India, 2nd ODI: ಭಾರತದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​​ನಲ್ಲಿ ಆಸ್ಟ್ರೇಲಿಯಾ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದರು. ಇದೀಗ ಸರಣಿ ಆಸೆಯನ್ನು ಜೀವಂತವಿರಿಸಿ ದ್ವಿತೀಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

IND vs AUS: ಆಸ್ಟ್ರೇಲಿಯಾ ವಿರುದ್ಧ ಹೀಗಿರಲಿದೆ ಭಾರತದ ಪ್ಲೇಯಿಂಗ್ 11
Team India
ಝಾಹಿರ್ ಯೂಸುಫ್
|

Updated on: Oct 22, 2025 | 2:23 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಏಕದಿನ ಪಂದ್ಯ ನಾಳೆ (ಅ.19) ನಡೆಯಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡ 7 ವಿಕೆಟ್​ಗಳ ಜಯ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ಟೀಮ್ ಇಂಡಿಯಾ ದ್ವಿತೀಯ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ ಅಸ್ತ್ರವನ್ನು ಪ್ರಯೋಗಿಸುವ ಸಾಧ್ಯತೆಯಿದೆ.

ಅದರಂತೆ ದ್ವಿತೀಯ ಏಕದಿನ ಪಂದ್ಯದಲ್ಲಿ ಹರ್ಷಿತ್ ರಾಣಾ ಬದಲಿಗೆ ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸಬಹುದು. ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕುಲ್ದೀಪ್ ಯಾದವ್ ಉತ್ತಮ ಸ್ಪಿನ್ ಮೋಡಿ ಮಾಡಿದ್ದರು. ಅಲ್ಲದೆ ಕಳೆದ ವೆಸ್ಟ್ ಇಂಡೀಸ್ ಸರಣಿಯಲ್ಲೂ ಉತ್ತಮ ಬೌಲಿಂಗ್ ಸಂಘಟಿಸಿದ್ದರು. ಇದಾಗ್ಯೂ ಅವರನ್ನು ಮೊದಲ ಪಂದ್ಯದಲ್ಲಿ ಕಣಕ್ಕಿಳಿಸಿರಲಿಲ್ಲ.

ಬದಲಾಗಿ ಹರ್ಷಿತ್ ರಾಣಾ ಅವರನ್ನು ಮೂರನೇ ವೇಗಿಯಾಗಿ ಆಡಿಸಲಾಗಿತ್ತು. ಆದರೆ ಹರ್ಷಿತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಅಡಿಲೇಡ್ ಪಂದ್ಯದಲ್ಲಿ ಹರ್ಷಿತ್ ಬದಲಿಗೆ ಕುಲ್ದೀಪ್ ಯಾದವ್​​ಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.

ಇನ್ನುಳಿದಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಇನಿಂಗ್ಸ್ ಆರಂಭಿಸುವುದು ಖಚಿತ. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟರ್ ಬೀಸಲಿದ್ದಾರೆ.

ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯಬಹುದು. ಹಾಗೆಯೇ ಬೌಲರ್​ಗಳಾಗಿ ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  • ರೋಹಿತ್ ಶರ್ಮಾ
  • ಶುಭಮನ್ ಗಿಲ್ (ನಾಯಕ)
  • ವಿರಾಟ್ ಕೊಹ್ಲಿ
  • ಶ್ರೇಯಸ್ ಅಯ್ಯರ್ಕೆ
  • ಎಲ್ ರಾಹುಲ್ (ವಿಕೆಟ್ ಕೀಪರ್)
  • ಅಕ್ಷರ್ ಪಟೇಲ್
  • ವಾಷಿಂಗ್ಟನ್ ಸುಂದರ್
  • ನಿತೀಶ್ ಕುಮಾರ್ ರೆಡ್ಡಿ
  • ಮೊಹಮ್ಮದ್ ಸಿರಾಜ್
  • ಅರ್ಷ್‌ದೀಪ್ ಸಿಂಗ್
  • ಕುಲ್ದೀಪ್ ಯಾದವ್.

ಇದನ್ನೂ ಓದಿ: ಈ ಒಂದು ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಅವಕಾಶ

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ