AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರಂಭಿಸಲಿದೆ. ಈ ಪಂದ್ಯದ ಬಳಿಕ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ತಂಡಗಳನ್ನು ಎದುರಿಸಲಿದೆ.

IND vs SA: ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
Team India
ಝಾಹಿರ್ ಯೂಸುಫ್
|

Updated on: Feb 21, 2026 | 2:17 PM

Share

T20 World Cup 2026: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 21 ರಂದು ನಡೆಯಲಿರುವ ಸೂಪರ್-8 ರೌಂಡ್​ನ ಮೊದಲ ಮ್ಯಾಚ್​ನಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಢ್ ಮತ್ತು ಶ್ರೀಲಂಕಾ ಕಣಕ್ಕಿಳಿದರೆ, ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಲಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ ಬದಲಿಸಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಟೀಮ್ ಇಂಡಿಯಾ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕಳೆದ ಮೂರು ಮ್ಯಾಚ್​ಗಳಲ್ಲಿ ಸೊನ್ನೆ ಸುತ್ತಿದ್ದಾರೆ.

ಇದಾಗ್ಯೂ ಅಭಿಷೇಕ್ ಶರ್ಮಾ ಅವರನ್ನು ಆಡುವ ಬಳಗದಿಂದ ಕೈ ಬಿಡುವ ಸಾಧ್ಯತೆಯಿಲ್ಲ. ಏಕೆಂದರೆ ತಂಡದಲ್ಲಿರುವ ಮತ್ತೋರ್ವ ಆರಂಭಿಕ ದಾಂಡಿಗ ಸಂಜು ಸ್ಯಾಮ್ಸನ್ ಕೂಡ ಫಾರ್ಮ್​ನಲ್ಲಿಲ್ಲ. ಹೀಗಾಗಿ ಅಭಿಷೇಕ್​ಗೆ ಮತ್ತೊಂದು ಚಾನ್ಸ್​ ನೀಡುವ ಸಾಧ್ಯತೆ ಹೆಚ್ಚು.

ಅಷ್ಟೇ ಅಲ್ಲದೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಬಳಗವೇ ಸೌತ್ ಆಫ್ರಿಕಾ ವಿರುದ್ಧ ಕೂಡ ಆಡುವ ಸಾಧ್ಯತೆಯಿದೆ. ಏಕೆಂದರೆ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯ ನಡೆದಿರುವುದು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ಹೀಗಾಗಿ ಅದೇ ಪ್ಲೇಯಿಂಗ್ ಇಲೆವೆನ್​ ಅನ್ನೇ ಈ ಮ್ಯಾಚ್​ನಲ್ಲೂ ಮುಂದುವರೆಸುವ ಸಾಧ್ಯತೆಯಿದೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಆಡಿದ್ರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಸಿಗಲಿದೆ. ಹಾಗೆಯೇ ಫಿನಿಶರ್ ಪಾತ್ರದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯಲಿದ್ದಾರೆ. ಇನ್ನುಳಿದಂತೆ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಇಶಾನ್ ಕಿಶನ್
  • ಅಭಿಷೇಕ್ ಶರ್ಮಾ
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್
  • ಹಾರ್ದಿಕ್ ಪಾಂಡ್ಯ
  • ಅಕ್ಷರ್ ಪಟೇಲ್
  • ಶಿವಂ ದುಬೆ
  • ರಿಂಕು ಸಿಂಗ್
  • ವರುಣ್ ಚಕ್ರವರ್ತಿ
  • ಅರ್ಷದೀಪ್ ಸಿಂಗ್
  • ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ