Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ

India vs England 2nd Test Predicted Playing XI: ಶಾರ್ದುಲ್ ಠಾಕೂರ್ ಗೆ ಮಂಡಿರಜ್ಜು ಗಾಯವಾಗಿದ್ದು, ಈ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ನಾಳೆ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಸ್ಷಪ್ಟತೆಯಿಲ್ಲ.

India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ
India vs England
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 11, 2021 | 3:06 PM

ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತದ (Team India) ಗೆಲುವು ನಿಶ್ಚಿತವಾಗಿತ್ತು. ಆದರೆ ಅದೃಷ್ಟ ವರುಣನ ರೂಪದಲ್ಲಿ ಬಂದಿದ್ದರಿಂದ ಆತಿಥೇಯ ಇಂಗ್ಲೆಂಡ್ ತಂಡ ಸೋಲಿನಿಂದ ಪಾರಾಯಿತು. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ (England) 183 ರನ್​ಗಳಿಸಿದರೆ, 2ನೇ ಇನಿಂಗ್ಸ್​ನಲ್ಲಿ 303 ರನ್​ಗಳಿಗೆ ಆಲೌಟ್​ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ಮೊದಲ ಇನಿಂಗ್ಸ್​ನ್ನು 278 ರನ್​ಗಳೊಂದಿಗೆ ಅಂತ್ಯಗೊಳಿಸಿತ್ತು. ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾ (Team India) 2ನೇ ಇನಿಂಗ್ಸ್​ನಲ್ಲಿ 209 ರನ್​ಗಳಿಸಬೇಕಿತ್ತು. ಇದಾಗಿ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ ಒಂದು ವಿಕೆಟ್ ನಷ್ಟದೊಂದಿಗೆ 52 ರನ್​ಗಳಿಸಿತ್ತು. ಅದರಂತೆ ಗೆಲ್ಲಲು ಅಂತಿಮ ದಿನದಾಟದಲ್ಲಿ 157 ರನ್​ಗಳನ್ನು ಕಲೆಹಾಕಬೇಕಿತ್ತು. ಆದರೆ 5ನೇ ದಿನದಾಟ ಮಳೆಗೆ ಅಹುತಿಯಾದ ಕಾರಣ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ಇದಾಗ್ಯೂ ಮೊದಲ ಟೆಸ್ಟ್​ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿರುವುದು ವಿಶೇಷ. ಹೀಗಾಗಿಯೇ 2ನೇ ಟೆಸ್ಟ್​ನಲ್ಲಿ ತಂಡದಲ್ಲಿ ಬದಲಾವಣೆ ಕಾಣಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಮೂಡಿದೆ.

ಏಕೆಂದರೆ ಮೊದಲ ಟೆಸ್ಟ್​ನಲ್ಲಿ ಭಾರತ ನಾಲ್ವರು ವೇಗದ ಬೌಲರುಗಳೊಂದಿಗೆ ಕಣಕ್ಕಿಳಿದಿತ್ತು. ಅದರಲ್ಲೂ ಅನುಭವಿ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಡಲಾಗಿತ್ತು. ಇದೀಗ ಲಾರ್ಡ್ಸ್​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್​ನಲ್ಲಿ ಅನುಭವಕ್ಕೆ ಮಣೆಹಾಕುವ ಸಾಧ್ಯತೆಯಿದೆ. ಇದರಿಂದ ತಂಡದಿಂದ ಯಾರು ಹೊರಬೀಳಲಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಶಾರ್ದುಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್ ಕಣಕ್ಕಿಳಿದಿದ್ದರು. ಈ ಇಬ್ಬರು ಉತ್ತಮ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದರು. ಇನ್ನೊಂದೆಡೆ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ 2ನೇ ಪಂದ್ಯದಲ್ಲೂ ಸ್ಥಾನ ಪಡೆಯುವುದು ಖಚಿತ.

ಶಾರ್ದುಲ್ ಮತ್ತು ಸಿರಾಜ್ ಬದಲಿಗೆ ಅಶ್ವಿನ್ ಮತ್ತು ಇಶಾಂತ್! ಶಾರ್ದುಲ್ ಠಾಕೂರ್ ಗೆ ಮಂಡಿರಜ್ಜು ಗಾಯವಾಗಿದ್ದು, ಈ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ನಾಳೆ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಸ್ಷಪ್ಟತೆಯಿಲ್ಲ. ಶಾರ್ದುಲ್ ತಂಡದಿಂದ ಹೊರಗುಳಿದರೆ, ಅವರ ಸ್ಥಾನದಲ್ಲಿ ಅಶ್ವಿನ್ ಕಣಕ್ಕಿಳಿಯಬಹುದು. ಇದಲ್ಲದೇ, ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ಅವರು ಆಯ್ಕೆಗಾಗಿ ಲಭ್ಯರಿದ್ದು, ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕರೆ, ಮೊಹಮ್ಮದ್ ಸಿರಾಜ್ ಸ್ಥಾನ ಕಳೆದುಕೊಳ್ಳಬಹುದು. ಏಕೆಂದರೆ ಇಶಾಂತ್ ಶರ್ಮಾ 2014 ರಲ್ಲಿ ಲಾರ್ಡ್ಸ್‌ನಲ್ಲಿ ಮೈದಾನದಲ್ಲಿ ಭರ್ಜರಿ ಬೌಲಿಂಗ್ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಹೀಗಾಗಿ ಈ ಮೈದಾನದಲ್ಲಿ ಮತ್ತೊಮ್ಮೆ ಅನುಭವಿ ವೇಗಿ ಇಶಾಂತ್​ರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ? ಈ ಇಬ್ಬರು ಬೌಲರುಗಳ ಬದಲಾವಣೆ ಹೊರತಾಗಿ, ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಕ್ರಮಾಂಕದದಲ್ಲಿ ಬದಲಾವಣೆ ಮಾಡಬಹುದು. 2ನೇ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಲಭ್ಯರಿದ್ದು, ಹೀಗಾಗಿ ಮಯಾಂಕ್‌ಗೆ ಅವಕಾಶ ನೀಡಿದರೆ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. ಇದರ ಹೊರತಾಗಿ ಬ್ಯಾಟಿಂಗ್​​ ವಿಭಾಗದಲ್ಲಿ ಟೀಮ್ ಇಂಡಿಯಾ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಎನ್ನಬಹುದು.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ

ಇದನ್ನೂ ಓದಿ: Jasprit Bumrah: ಜಹೀರ್ ಖಾನ್ ದಾಖಲೆ ಸರಿಗಟ್ಟಿದ ಜಸ್​ಪ್ರೀತ್ ಬುಮ್ರಾ

ಇದನ್ನೂ ಓದಿ: IPL 2021: ಐಪಿಎಲ್​ನ ಪ್ರಮುಖ ನಿಯಮ ಬದಲಿಸಿದ ಬಿಸಿಸಿಐ

ಇದನ್ನೂ ಓದಿ: IPL 2021: ಐಪಿಎಲ್ ಹೊಸ ಅಪ್ಡೇಡ್: ಆಟಗಾರರಿಗೆ ಬಿಗ್ ರಿಲೀಫ್

(India’s Predicted Playing XI For 2nd Test vs England)

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್