AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಇನ್ನೂ 15 ಟಿ20 ಪಂದ್ಯಗಳನ್ನಾಡಲಿದೆ ಟೀಮ್ ಇಂಡಿಯಾ

Team India's Schedule 2025: ಭಾರತ ತಂಡವು ಈ ವರ್ಷ ಕನಿಷ್ಠ 15 ಟಿ20 ಪಂದ್ಯಗಳನ್ನಾಡಲಿದೆ. ಆದರೆ ಟೀಮ್ ಇಂಡಿಯಾದ ಮುಂದಿನ ಟಿ20 ಸರಣಿ ನಡೆಯುವುದು ಆಗಸ್ಟ್​ನಲ್ಲಿ. ಇದಾದ ಬಳಿಕ ಏಷ್ಯಾಕಪ್ ಕೂಡ ಆಡಲಿದೆ. ವಿಶೇಷ ಎಂದರೆ ಈ ಬಾರಿ ಏಷ್ಯಾಕಪ್ ನಡೆಯಲಿರುವುದು ಟಿ20 ಸ್ವರೂಪದಲ್ಲಿ. ಹೀಗಾಗಿ ಈ ವರ್ಷ ಟೀಮ್ ಇಂಡಿಯಾ ಕನಿಷ್ಠ 15 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯುವುದು ಖಚಿತ.

ಈ ವರ್ಷ ಇನ್ನೂ 15 ಟಿ20 ಪಂದ್ಯಗಳನ್ನಾಡಲಿದೆ ಟೀಮ್ ಇಂಡಿಯಾ
Team India
ಝಾಹಿರ್ ಯೂಸುಫ್
|

Updated on:Feb 04, 2025 | 7:20 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. 5 ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಇದೀಗ ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲಿದೆ.

ಇದಾದ ಬಳಿಕ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲಿದೆ. ಫೆಬ್ರವರಿ 19 ರಿಂದ ಶುರುವಾಗಲಿರುವ ಈ ಟೂರ್ನಿ ಮುಗಿಯುವುದು ಮಾರ್ಚ್ 9 ಕ್ಕೆ. ಆ ನಂತರ ಟೀಮ್ ಇಂಡಿಯಾ ಆಟಗಾರರು ಐಪಿಎಲ್​ನತ್ತ ಮುಖ ಮಾಡಲಿದ್ದಾರೆ. ಐಪಿಎಲ್​ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ ಆಡಲಿದೆ. ಈ ಸರಣಿಯು ಜುಲೈ 20 ರಿಂದ ಶುರುವಾಗಲಿದೆ.

ಮತ್ತೆ ಟಿ20 ಸರಣಿ ಯಾವಾಗ?

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬೆನ್ನಲ್ಲೇ ಟೀಮ್ ಇಂಡಿಯಾ ಮತ್ತೆ ಟಿ20 ಸರಣಿಗಾಗಿ ಸಜ್ಜಾಗಲಿದೆ. ಆಗಸ್ಟ್​ನಲ್ಲಿ ನಡೆಯಲಿರುವ 3 ಪಂದ್ಯಗಳ ಈ ಸರಣಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ.

ಈ ಸರಣಿ ಬಳಿಕ ಏಷ್ಯಾಕಪ್ ಟಿ20 ಟೂರ್ನಿ ಜರುಗಲಿದೆ. ಈ ಟೂರ್ನಿಗೆ ಈ ಬಾರಿ ಭಾರತ ಆತಿಥ್ಯವಹಿಸಲಿದೆ. ಸೆಪ್ಟೆಂಬರ್​ನಲ್ಲಿ ನಡೆಯಲಿರುವ ಏಷ್ಯಾಕಪ್ ಬಳಿಕ ಟೀಮ್ ಇಂಡಿಯಾ ಮತ್ತೆ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ.

ಅಕ್ಟೋಬರ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇನ್ನು ಡಿಸೆಂಬರ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದ್ದು, ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಅಂದರೆ ಇಲ್ಲಿ ಏಷ್ಯಾಕಪ್ ಟೂರ್ನಿಯನ್ನು ಹೊರತುಪಡಿಸಿ, ಟೀಮ್ ಇಂಡಿಯಾ 3 ಸರಣಿಗಳೊಂದಿಗೆ ಈ ವರ್ಷ ಒಟ್ಟು 13 ಟಿ20 ಪಂದ್ಯಗಳನ್ನಾಡಲಿದೆ.

ಇನ್ನು ಏಷ್ಯಾಕಪ್​ನಲ್ಲಿ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ 2 ಪಂದ್ಯಗಳನ್ನಾಡುವುದು ಖಚಿತ. ಇದನ್ನು ಸೇರಿಸಿದರೆ ಭಾರತ ತಂಡವು ಕನಿಷ್ಠ 15 ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ ಎನ್ನಬಹುದು.

ಭಾರತದ ಮುಂಬರುವ ಟಿ20 ಸರಣಿಗಳು:

  • ಭಾರತ vs ಬಾಂಗ್ಲಾದೇಶ್- ಆಗಸ್ಟ್​ (ಬಾಂಗ್ಲಾದೇಶದಲ್ಲಿ)- 3 ಟಿ20
  • ಭಾರತ vs ಆಸ್ಟ್ರೇಲಿಯಾ, ಅಕ್ಟೋಬರ್ (ಆಸ್ಟ್ರೇಲಿಯಾದಲ್ಲಿ)- 5 ಟಿ20
  • ಭಾರತ vs ಸೌತ್ ಆಫ್ರಿಕಾ, ಡಿಸೆಂಬರ್ (ಭಾರತದಲ್ಲಿ)- 5 ಟಿ20

ಭಾರತ ತಂಡದ ಮುಂದಿನ ಸರಣಿ ವೇಳಾಪಟ್ಟಿ:

ದಿನಾಂಕ  ಪಂದ್ಯ ಮತ್ತು ಸ್ಥಳ ಸಮಯ
ಫೆಬ್ರವರಿ 06, ಗುರುವಾರ ಭಾರತ vs ಇಂಗ್ಲೆಂಡ್, ಮೊದಲ ಏಕದಿನ ಪಂದ್ಯ (ನಾಗ್ಪುರ)  01:30 PM IST
ಫೆಬ್ರವರಿ 09, ಭಾನುವಾರ ಭಾರತ vs ಇಂಗ್ಲೆಂಡ್, ಎರಡನೇ ಏಕದಿನ ಪಂದ್ಯ ( ಕಟಕ್)  01:30 PM IST
ಫೆಬ್ರವರಿ 12, ಬುಧವಾರ ಭಾರತ vs ಇಂಗ್ಲೆಂಡ್, ಮೂರನೇ ಏಕದಿನ ಪಂದ್ಯ (ಅಹಮದಾಬಾದ್)  01:30 PM IST

ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ:

  • ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
  • ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
  • ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
  • ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
  • ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)

Published On - 7:18 am, Tue, 4 February 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ