AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝಿಂಬಾಬ್ವೆ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು?

T20 World Cup 2026: ಟೀಮ್ ಇಂಡಿಯಾದ ಪ್ರಸ್ತುತ ನೆಟ್ ರನ್ ರೇಟ್ -3.800, ಅತ್ತ ವೆಸ್ಟ್ ಇಂಡೀಸ್ ಹಾಗೂ ಸೌತ್ ಆಫ್ರಿಕಾ ತಂಡಗಳು ಅತ್ಯುತ್ತಮ ನೆಟ್ ರನ್ ರೇಟ್ ಹೊಂದಿದೆ. ಇದೀಗ ಸೆಮಿಫೈನಲ್ ರೇಸ್​ನಲ್ಲಿರುವ ಟೀಮ್ ಇಂಡಿಯಾ ಝಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬೇಕು.

ಝಿಂಬಾಬ್ವೆ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು?
Team India
ಝಾಹಿರ್ ಯೂಸುಫ್
|

Updated on:Feb 26, 2026 | 11:12 AM

Share

T20 World Cup 2026: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ತನ್ನ ಸೆಮಿಫೈನಲ್​ ಹಾದಿಯನ್ನು ಸುಗಮಗೊಳಿಸಬಹುದು. ಅದರಲ್ಲೂ ನೆಟ್ ರನ್​ ರೇಟ್ ಹೆಚ್ಚಿಸಿಕೊಂಡರೆ ಮಾತ್ರ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರ ಸರಳವಾಗಲಿದೆ. ಹಾಗಿದ್ರೆ ಝಿಂಬಾಬ್ವೆ ವಿರುದ್ಧ ಭಾರತ ತಂಡ ಎಷ್ಟು ರನ್​ಗಳ ಅಂತರದಿಂದ ಗೆದ್ದರೆ ನೆಟ್ ರನ್ ರೇಟ್​ ಪಾಸಿಟಿವ್ (+0.000 ಕ್ಕಿಂತ ಹೆಚ್ಚು) ಮಾಡಿಕೊಳ್ಳಬಹುದು ಎಂದು ನೋಡುವುದಾದರೆ…

ಮೊದಲು ಬ್ಯಾಟಿಂಗ್ ಮಾಡಿದರೆ:

  • ಝಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಿದರೆ ಕನಿಷ್ಠ 77 ರನ್​ಗಳ ಅಂತರದಿಂದ ಜಯಗಳಿಸಬೇಕು. ಅಂದರೆ ಟೀಮ್ ಇಂಡಿಯಾ 200 ರನ್​ಗಳಿಸಿದರೆ, ಝಿಂಬಾಬ್ವೆ ತಂಡವನ್ನು 123 ರನ್ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಬೇಕು.
  • ಭಾರತ ತಂಡವು ಮೊದಲು ಬ್ಯಾಟ್ ಮಾಡಿ 180 ರನ್ ಗಳಿಸಿದರೆ, ಝಿಂಬಾಬ್ವೆ ತಂಡವನ್ನು 103 ರನ್ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ಕಟ್ಟಿಹಾಕಬೇಕು. ಅಂದರೆ ಟೀಮ್ ಇಂಡಿಯಾ ಕನಿಷ್ಠ 77 ರನ್​ಗಳ ಅಂತರದಿಂದ ಗೆದ್ದರೆ ಮಾತ್ರ ನೆಟ್ ರನ್ ರೇಟ್ ಪಾಸಿಟಿವ್ ಆಗಲಿದೆ.

ಚೇಸಿಂಗ್ ಮಾಡಿದರೆ:

  • ಝಿಂಬಾಬ್ವೆ ತಂಡವು ಮೊದಲು ಬ್ಯಾಟ್ ಮಾಡಿ 150 ರನ್​ಗಳ ಗುರಿ ನೀಡಿದರೆ, ಈ ಗುರಿಯನ್ನು ಟೀಮ್ ಇಂಡಿಯಾ 11 ಓವರ್​ಗಳಲ್ಲಿ ಚೇಸ್ ಮಾಡಬೇಕು.
  • ಒಂದು ವೇಳೆ ಝಿಂಬಾಬ್ವೆ 180 ರನ್​ಗಳಿಸಿದರೆ, ಭಾರತ ತಂಡವು 181 ರನ್​ಗಳನ್ನು ಕೇವಲ 11.4 ಓವರ್​ಗಳಲ್ಲಿ ಕಲೆಹಾಕಬೇಕು. ಅಂದರೆ 70 ಎಸೆತಗಳಲ್ಲಿ ಪಂದ್ಯವನ್ನು ಪೂರ್ಣಗೊಳಿಸಬೇಕು.
  • ಇನ್ನು ಝಿಂಬಾಬ್ವೆ ತಂಡವು 200 ರನ್​ಗಳ ಗುರಿ ನೀಡಿದರೆ, ಟೀಮ್ ಇಂಡಿಯಾ ಈ ಮೊತ್ತವನ್ನು ಕೇವಲ 12 ಓವರ್​ಗಳಲ್ಲಿ ಮುಟ್ಟಬೇಕು.

ಅಂದರೆ ಮೊದಲು ಬ್ಯಾಟ್ ಮಾಡಿದರೆ ಕನಿಷ್ಠ 77 ರನ್​ಗಳ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾದ ನೆಟ್ ರನ್ ರೇಟ್ +0.000 ಕ್ಕಿಂತ ಹೆಚ್ಚು ಆಗಲಿದೆ. ಇನ್ನು ಚೇಸಿಂಗ್ ಮಾಡಿದರೆ ಅತೀ ಕಡಿಮೆ ಎಸೆತಗಳಲ್ಲಿ ಗುರಿ ಬೆನ್ನತ್ತಿದರೆ ಮಾತ್ರ ಪಾಸಿಟಿವ್ ನೆಟ್ ರನ್ ರೇಟ್ ಪಡೆದುಕೊಳ್ಳಬಹುದು.

ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುವುದು ಅನಿವಾರ್ಯ. ಏಕೆಂದರೆ ಬೃಹತ್ ಮೊತ್ತ ಪೇರಿಸಿದರೆ ಮಾತ್ರ 77 ರನ್​ಗಳ ಅಂತರದಿಂದ ಗೆಲ್ಲಲು ಸಾಧ್ಯ. ಇನ್ನು ಅತೀ ಕಡಿಮೆ ಓವರ್​ಗಳಲ್ಲಿ ಗುರಿ ತಲುಪಿದರೆ ಮಾತ್ರ +0.000 ಕ್ಕಿಂತ ಹೆಚ್ಚಿ ನೆಟ್ ರನ್ ರೇಟ್ ಪಡೆದುಕೊಳ್ಳಬಹುದು. ಹೀಗಾಗಿ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗರಿಂದ ಹೊಡಿಬಡಿ ಆಟವನ್ನು ನಿರೀಕ್ಷಿಸಬಹುದು.

ಸೆಮಿಫೈನಲ್ ಹಾದಿ:

ಭಾರತವು ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ಎರಡೂ ತಂಡಗಳ ವಿರುದ್ಧ ಗೆದ್ದರೆ 4 ಅಂಕಗಳನ್ನು ಪಡೆಯುತ್ತದೆ. ಅತ್ತ ಸೌತ್ ಆಫ್ರಿಕಾ ತನ್ನ ಉಳಿದ ಪಂದ್ಯಗಳನ್ನು ಗೆದ್ದರೆ, ಅಂದರೆ ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ವಿರುದ್ಧ ಗೆದ್ದರೆ ಟೀಮ್ ಇಂಡಿಯಾಗೆ ನೆಟ್​ ರನ್ ರೇಟ್ ಆಧಾರದಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ಎದುರಾಗುವುದಿಲ್ಲ.

ಇದನ್ನೂ ಓದಿ: ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್

ಒಂದು ವೇಳೆ ಇಂದಿನ ಮೊದಲ ಪಂದ್ಯದಲ್ಲಿ (3 ಗಂಟೆಗೆ) ವೆಸ್ಟ್ ಇಂಡೀಸ್ ತಂಡವು ಸೌತ್ ಆಫ್ರಿಕಾ ವಿರುದ್ಧ ಗೆದ್ದರೆ, ಟೀಮ್ ಇಂಡಿಯಾ ಝಿಂಬಾಬ್ವೆ ವಿರುದ್ಧ ಅಮೋಘ ಗೆಲುವು ದಾಖಲಿಸುವುದು ಅನಿವಾರ್ಯ. ಏಕೆಂದರೆ ಕೊನೆಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದರೂ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕವೇ ಟೀಮ್ ಇಂಡಿಯಾ ತನ್ನ ನೆಟ್ ರನ್ ರೇಟ್​ ಅನ್ನು ಹೆಚ್ಚಿಸಿಕೊಳ್ಳಬೇಕಿದೆ.

Published On - 10:24 am, Thu, 26 February 26

Follow Us
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು
ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು
ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು
ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು