AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದುವೇ ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್​ನೆಸ್​​!

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರಂಭಿಸಲಿದೆ. ಈ ಪಂದ್ಯದ ಬಳಿಕ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ತಂಡಗಳನ್ನು ಎದುರಿಸಲಿದೆ.

ಇದುವೇ ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್​ನೆಸ್​​!
Team India
ಝಾಹಿರ್ ಯೂಸುಫ್
|

Updated on: Feb 22, 2026 | 10:31 AM

Share

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.22) ಭಾರತ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ ತಂಡದ ಕೋಚ್ ಶುಕ್ರಿ ಕಾನ್ರಾಡ್ ಅಹಮದಾಬಾದ್​ನಲ್ಲಿ ಭಾರತ ತಂಡದ ಬಂಡವಾಳ ಬಯಲು ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಇಲ್ಲಿ ಟೀಮ್ ಇಂಡಿಯಾದ ‘ಬಂಡವಾಳ’ ಏನು ಹುಡುಕಾಡಿದರೆ ಸಿಗುವ ಉತ್ತರ ಅತೀ ದೊಡ್ಡ ವೀಕ್​ವೆಸ್​.

ಹೌದು, ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ 4 ಪಂದ್ಯಗಳಲ್ಲೂ ಜಯ ಸಾಧಿಸಿದೆ. ಇದಾಗ್ಯೂ ಭಾರತೀಯ ಬ್ಯಾಟರ್​ಗಳು  ಆಫ್-ಸ್ಪಿನ್ನರ್‌ಗಳನ್ನು ಎದುರಿಸಲು ಪರದಾಡುತ್ತಿರುವುದು ಅಂಕಿಅಂಶಗಳಿಂದ ಬಹಿರಂಗವಾಗಿದೆ. ಇದನ್ನೇ ಶುಕ್ರಿ ಕಾನ್ರಾಡ್ ಕೂಡ ಬಂಡವಾಳ ಬಯಲು ಮಾಡುತ್ತೇವೆ ಎಂದಿರಬಹುದು.

ಏಕೆಂದರೆ ಕಳೆದ 4 ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಆಫ್ ಸ್ಪಿನ್ನರ್​ಗಳ ವಿರುದ್ಧ ಪ್ರತಿ ಓವರ್​ಗೆ 7 ಕ್ಕಿಂತ ಕಡಿಮೆ ಸರಾಸರಿಯಲ್ಲಿ ರನ್​ಗಳಿಸಿದ್ದಾರೆ. ಅದರಲ್ಲೂ ಟಾಪ್ ಆರ್ಡರ್ ಬ್ಯಾಟರ್​ಗಳು ಆಫ್ ಸ್ಪಿನ್ನರ್​ಗಳಿಗೆ ವಿಕೆಟ್ ಒಪ್ಪಿಸಿರುವುದು ಚಿಂತೆಗೆ ಕಾರಣವಾಗಿದೆ.

  • ಕಡಿಮೆ ರನ್ ರೇಟ್: ಆಫ್-ಸ್ಪಿನ್ ವಿರುದ್ಧ ಭಾರತೀಯ ಬ್ಯಾಟರ್​ಗಳ ರನ್ ರೇಟ್ ಪ್ರತಿ ಓವರ್‌ಗೆ ಕೇವಲ 6.23 ಮಾತ್ರ. ಅದು ಕೂಡ ಯುಎಸ್​ಎ, ನೆದರ್​​ಲೆಂಡ್ಸ್ ಮತ್ತು ನಮೀಬಿಯ ವಿರುದ್ಧ ಕಣಕ್ಕಿಳಿದು ಎಂಬುದು ಇಲ್ಲಿ ಉಲ್ಲೇಖಾರ್ಹ.
  • ವಿಕೆಟ್ ಪತನ: ಕಳೆದ 4 ಪಂದ್ಯಗಳಲ್ಲಿ ಭಾರತ ಕಳೆದುಕೊಂಡ ಒಟ್ಟು 31 ವಿಕೆಟ್‌ಗಳಲ್ಲಿ 11 ವಿಕೆಟ್‌ಗಳು ಆಫ್-ಸ್ಪಿನ್ನರ್‌ಗಳ ಪಾಲಾಗಿವೆ.
  • ಕಡಿಮೆ ಸರಾಸರಿ: ಆಫ್-ಸ್ಪಿನ್ ಎದುರು ಭಾರತೀಯ ಬ್ಯಾಟರ್‌ಗಳ ಸರಾಸರಿ ಕೇವಲ 13.25 ರನ್ ಮಾತ್ರ.

ವೈಫಲ್ಯಕ್ಕೆ ಪ್ರಮುಖ ಕಾರಣಗಳು:

  • ಎಡಗೈ ಬ್ಯಾಟರ್‌ಗಳ ಪ್ರಾಬಲ್ಯ: ಭಾರತದ ಅಗ್ರ ಕ್ರಮಾಂಕದಲ್ಲಿ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಅವರಂತಹ ಎಡಗೈ ಬ್ಯಾಟರ್‌ಗಳಿದ್ದಾರೆ. ಚೆಂಡು ಎಡಗೈ ಬ್ಯಾಟರ್‌ಗಳಿಂದ ದೂರ ತಿರುಗುವುದರಿಂದ, ಆಫ್-ಸ್ಪಿನ್ನರ್‌ಗಳು ಅವರಿಗೆ ಮಾರಕವಾಗುತ್ತಿದ್ದಾರೆ.
  • ಸ್ಟ್ರೈಕ್ ರೊಟೇಷನ್ ಕೊರತೆ: ಮಧ್ಯಮ ಓವರ್‌ಗಳಲ್ಲಿ ಸಿಂಗಲ್ಸ್ ಮತ್ತು ಡಬಲ್ಸ್ ತೆಗೆದುಕೊಳ್ಳುವಲ್ಲಿ ಬ್ಯಾಟರ್‌ಗಳು ವಿಫಲರಾಗುತ್ತಿದ್ದಾರೆ. ಇದರಿಂದ ಒತ್ತಡ ಹೆಚ್ಚಾಗಿ ದೊಡ್ಡ ಹೊಡೆತಕ್ಕೆ ಹೋಗಿ ವಿಕೆಟ್ ಒಪ್ಪಿಸುತ್ತಿದ್ದಾರೆ.
  • ತಾಂತ್ರಿಕ ದೋಷ: ಸುನಿಲ್ ಗವಾಸ್ಕರ್ ಅವರಂತಹ ತಜ್ಞರ ಪ್ರಕಾರ, ಇಂದಿನ ಬ್ಯಾಟರ್‌ಗಳು ಪವರ್-ಹಿಟ್ಟಿಂಗ್‌ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಸಾಂಪ್ರದಾಯಿಕವಾಗಿ ಸ್ಪಿನ್ ಆಡುವ ಕಲೆ (ಪಾದಗಳ ಚಲನೆ) ಕಡಿಮೆಯಾಗುತ್ತಿದೆ.

ಆಫ್​ ಸ್ಪಿನ್ನರ್​ಗಳ ಮಿಂಚಿಂಗ್:

  • ನಮೀಬಿಯ ವಿರುದ್ಧ: ಗೆರ್ಹಾರ್ಡ್ ಎರಾಸ್ಮಸ್ 4 ವಿಕೆಟ್ ಪಡೆದು ಭಾರತದ ಬ್ಯಾಟಿಂಗ್ ಲೈನ್-ಅಪ್ ಅನ್ನು ನಡುಗಿಸಿದ್ದರು.
  • ಪಾಕಿಸ್ತಾನ್ ವಿರುದ್ಧ: ಪಾಕ್ ತಂಡದ ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ಸೈಮ್ ಅಯ್ಯೂಬ್​ಗೆ ಟೀಮ್ ಇಂಡಿಯಾದ ಮೂರು ಬ್ಯಾಟರ್​ಗಳು ವಿಕೆಟ್ ಒಪ್ಪಿಸಿದ್ದರು. ಅಲ್ಲದೆ ಸೈಮ್ 4 ಓವರ್​ಗಳಲ್ಲಿ ನೀಡಿದ್ದು ಕೇವಲ 25 ರನ್​ಗಳು ಮಾತ್ರ.
  • ನೆದರ್​ಲೆಂಡ್ಸ್​ ವಿರುದ್ಧ: ಆರ್ಯನ್ ದತ್ ಅವರು ಪವರ್‌ಪ್ಲೇನಲ್ಲಿಯೇ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ವಿಕೆಟ್ ಪಡೆದಿದ್ದರು.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ಸೌತ್ ಆಫ್ರಿಕಾ ಆಫ್ ಸ್ಪಿನ್ನರ್ಸ್​:

ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾ ತಂಡದ ನಾಯಕ ಐಡನ್ ಮಾರ್ಕ್ರಾಮ್ ಆಫ್ ಸ್ಪಿನ್ ಅಸ್ತ್ರ ಪ್ರಯೋಗಿಸುವ ಸಾಧ್ಯತೆಯಿದೆ. ಏಕೆಂದರೆ ಖುದ್ದು ಮಾರ್ಕ್ರಾಮ್ ಆಫ್ ಸ್ಪಿನ್ ಬೌಲರ್. ಇನ್ನು ಟ್ರಿಸ್ಟನ್ ಸ್ಟಬ್ಸ್ ಕೂಡ ಆಫ್ ಸ್ಪಿನ್ ಎಸೆಯಬಲ್ಲರು. ಇದರ ಜೊತೆಗೆ ಎಡಗೈ ಆರ್ಥೋಡಾಕ್ಸ್ ಸ್ಪಿನ್ನರ್ ಆಗಿ ಕೇಶವ್ ಮಹಾರಾಜ್ ಕೂಡ ಇರಲಿದ್ದಾರೆ. ಹೀಗಾಗಿ ಅಹಮದಾಬಾದ್​ನಲ್ಲಿ ಭಾರತೀಯ ಬ್ಯಾಟರ್​ಗಳು ಮತ್ತು ಸೌತ್ ಆಫ್ರಿಕಾ ಬೌಲರ್​ಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!