ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ

India Vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಸರಣಿಯು ಡಿಸೆಂಬರ್ 15 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ 3 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಈ ಪಂದ್ಯಗಳಿಗೆ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಜರುಗಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ
Team India
Follow us
ಝಾಹಿರ್ ಯೂಸುಫ್
|

Updated on: Dec 14, 2024 | 8:24 AM

ಡಿಸೆಂಬರ್ 15 ರಿಂದ ಶುರುವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ 6 ಪಂದ್ಯಗಳ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಯಲ್ಲೂ ನಾಯಕಿಯಾಗಿ ಹರ್ಮನ್​ಪ್ರೀತ್ ಕೌರ್ ಮುಂದುವರೆಯಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಟಿ20 ತಂಡದಲ್ಲಿ ಹೊಸಮುಖವಾಗಿ ನಂದಿನಿ ಕಶ್ಯಪ್ ಕಾಣಿಸಿಕೊಂಡರೆ, ಏಕದಿನ ತಂಡದಲ್ಲಿ ಇದೇ ಮೊದಲ ಬಾರಿಗೆ ರಾಘ್ವಿ ಬಿಸ್ತ್ ಮತ್ತು ಪ್ರತೀಕಾ ರಾವಲ್ ಸ್ಥಾನ ಪಡೆದಿದ್ದಾರೆ. ಇನ್ನೂ ಟಿ20 ಮತ್ತು ಏಕದಿನ ತಂಡಗಳಲ್ಲಿ ಶಫಾಲಿ ವರ್ಮಾ ಹಾಗೂ ಶ್ರೇಯಾಂಕಾ ಪಾಟೀಲ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಅದರಂತೆ ವೆಸ್ಟ್ ಇಂಡೀಸ್ ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ…

ಭಾರತ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ನಂದಿನಿ ಕಶ್ಯಪ್, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಸಜನಾ ಸಜೀವನ್, ರಾಘ್ವಿ ಬಿಸ್ತ್, ರೇಣುಕಾ ಸಿಂಗ್ ಠಾಕೂರ್, ಪ್ರಿಯಾ ಮಿಶ್ರಾ, ಟಿಟಾಸ್ ಸಾಧು, ಸಾಯಿ ಠಾಕೋರ್, ಮಿನ್ನು ಮಣಿ, ರಾಧಾ ಯಾದವ್.

ಇದನ್ನೂ ಓದಿ: ಗಾಬಾ ಟೆಸ್ಟ್​ನಿಂದ 7 ಆಟಗಾರರು ಔಟ್..!

ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ತೇಜಲ್ ಹಸಬ್ನಿಸ್, ದೀಪ್ತಿ ಶರ್ಮಾ, ಮಿನ್ನು ಮಣಿ, ಪ್ರಿಯಾ ಮಿಶ್ರಾ, ತನುಜಾ ಕನ್ವೆರ್, ಟಿಟಾಸ್ ಸಾಧು , ಸೈಮಾ ಠಾಕೂರ್, ರೇಣುಕಾ ಸಿಂಗ್ ಠಾಕೂರ್.

ಭಾರತ ಮತ್ತು ವೆಸ್ಟ್ ಇಂಡೀಸ್ ಸರಣಿಯ ವೇಳಾಪಟ್ಟಿ

ಸಂಖ್ಯೆ ದಿನ ಮತ್ತು ದಿನಾಂಕ  ಸಮಯ ಪಂದ್ಯ ಸ್ಥಳ
1 ಭಾನುವಾರ 15-ಡಿಸೆಂಬರ್-24 7:00 PM 1ನೇ ಟಿ20 ಡಿವೈ ಪಾಟೀಲ್ ಸ್ಟೇಡಿಯಂ, ನವಿ ಮುಂಬೈ
2 ಮಂಗಳವಾರ 17-ಡಿಸೆಂಬರ್-24 7:00 PM 2ನೇ ಟಿ20 ಡಿವೈ ಪಾಟೀಲ್ ಸ್ಟೇಡಿಯಂ, ನವಿ ಮುಂಬೈ
3 ಗುರುವಾರ 19-ಡಿಸೆಂಬರ್-24 7:00 PM 3ನೇ ಟಿ20 ಡಿವೈ ಪಾಟೀಲ್ ಸ್ಟೇಡಿಯಂ, ನವಿ ಮುಂಬೈ
4 ಭಾನುವಾರ 22-ಡಿಸೆಂಬರ್-24 1:30 PM 1ನೇ ಏಕದಿನ ಕೊಟಂಬಿ ಕ್ರೀಡಾಂಗಣ, ವಡೋದರ
5 ಮಂಗಳವಾರ 24-ಡಿಸೆಂಬರ್-24 1:30 PM 2ನೇ ಏಕದಿನ ಕೊಟಂಬಿ ಕ್ರೀಡಾಂಗಣ, ವಡೋದರ
6 ಶುಕ್ರವಾರ 27-ಡಿಸೆಂಬರ್-24 9:30 AM 3ನೇ ಏಕದಿನ ಕೊಟಂಬಿ ಕ್ರೀಡಾಂಗಣ, ವಡೋದರ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ