AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟೆಸ್ಟ್ ತಂಡ ಪ್ರಕಟ: ಕನ್ನಡಿಗ ಉಪನಾಯಕ

India vs Sri lanka Test series 2026: ಭಾರತ ತಂಡವು ಕೊನೆಯ ಬಾರಿ ಶ್ರೀಲಂಕಾ ನೆಲದಲ್ಲಿ ಟೆಸ್ಟ್ ಸರಣಿ ಆಡಿದ್ದು 2017 ರಲ್ಲಿ. ಇದೀಗ ಬರೋಬ್ಬರಿ 9 ವರ್ಷಗಳ ದೀರ್ಘ ಬಿಡುವಿನ ಬಳಿಕ ಟೀಮ್ ಇಂಡಿಯಾ ಲಂಕಾದಲ್ಲಿ ರೆಡ್ ಬಾಲ್ ಕ್ರಿಕೆಟ್ ಆಡಲು ಸಜ್ಜಾಗುತ್ತಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ.

ಭಾರತ ಟೆಸ್ಟ್ ತಂಡ ಪ್ರಕಟ: ಕನ್ನಡಿಗ ಉಪನಾಯಕ
Team India Image Credit source: BCCI
ಝಾಹಿರ್ ಯೂಸುಫ್
|

Updated on:Jul 28, 2026 | 9:55 AM

Share

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದು, ಉಪನಾಯಕನಾಗಿ ಕನ್ನಡಿಗ ಕೆ.ಎಲ್. ರಾಹುಲ್ ಜವಾಬ್ದಾರಿ ಹೊತ್ತಿದ್ದಾರೆ. ಇನ್ನುಳಿದಂತೆ, ಮಧ್ಯಪ್ರದೇಶದ ಸ್ಪಿನ್ನರ್ ಸರಂಶ್ ಜೈನ್‌ಗೆ ತಂಡದಲ್ಲಿ ಚೊಚ್ಚಲ ಅವಕಾಶ ದೊರೆತಿದೆ.

ಭಾರತ ಟೆಸ್ಟ್ ತಂಡದ ವಿವರ:

  • ಬ್ಯಾಟರ್‌ಗಳು: ಶುಭ್‌ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್*
  • ವಿಕೆಟ್ ಕೀಪರ್‌ಗಳು: ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್
  • ಆಲ್‌ರೌಂಡರ್‌ಗಳು/ಸ್ಪಿನ್ನರ್‌ಗಳು: ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್
  • ವೇಗದ ಬೌಲರ್‌ಗಳು: ಜಸ್‌ಪ್ರೀತ್ ಬುಮ್ರಾ*, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್

ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿರುವ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಮತ್ತು ತಮಿಳುನಾಡಿನ ಬ್ಯಾಟರ್ ಸಾಯಿ ಸುದರ್ಶನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದರೂ, ಅವರ ಲಭ್ಯತೆಯು ಬಿಸಿಸಿಐನ ‘ಸೆಂಟರ್ ಆಫ್ ಎಕ್ಸಲೆನ್ಸ್’ (CoE) ನೀಡುವ ಫಿಟ್‌ನೆಸ್ ಕ್ಲಿಯರೆನ್ಸ್ ಮೇಲೆ ಆಧಾರಿತವಾಗಿದೆ.

ಜಡ್ಡು ಕಂಬ್ಯಾಕ್:

ಟೆನ್ನಿಸ್ ಎಲ್ಬೋ (ಮೊಣಕೈ) ಗಾಯದಿಂದಾಗಿ ಕೆಲವು ಕಾಲ ಕ್ರಿಕೆಟ್‌ನಿಂದ ದೂರವಿದ್ದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಸಂಪೂರ್ಣ ಗುಣಮುಖರಾಗಿ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಇದು ಭಾರತದ ಸ್ಪಿನ್ ವಿಭಾಗಕ್ಕೆ ಹೆಚ್ಚಿನ ಬಲ ತಂದಿದೆ.

ಸರಂಶ್ ಜೈನ್‌ಗೆ ಚೊಚ್ಚಲ ಅವಕಾಶ:

ಮಧ್ಯಪ್ರದೇಶದ ಆಫ್-ಸ್ಪಿನ್ನರ್ ಸರಂಶ್ ಜೈನ್ ಮೊದಲ ಬಾರಿಗೆ ರಾಷ್ಟ್ರೀಯ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹ್ಯಾಮ್‌ಸ್ಟ್ರಿಂಗ್ ಗಾಯದ ಸಮಸ್ಯೆಯಿಂದಾಗಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿರುವ ವಾಷಿಂಗ್ಟನ್ ಸುಂದರ್ ಅವರ ಜಾಗಕ್ಕೆ ಸಾರಂಶ್ ಅವರನ್ನು ಆಯ್ಕೆ ಮಾಡಲಾಗಿದೆ.

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್.

ಭಾರತ ಮತ್ತು ಶ್ರೀಲಂಕಾ ಸರಣಿ ವೇಳಾಪಟ್ಟಿ:

ಆಗಸ್ಟ್ 4 ರಂದು ಕೊಲಂಬೋ ತಲುಪಲಿರುವ ಟೀಮ್ ಇಂಡಿಯಾ, ಮೊದಲ ಟೆಸ್ಟ್‌ಗೂ ಮುನ್ನ ಸ್ಥಳೀಯ ಲಂಕಾ ಬೋರ್ಡ್ XI ವಿರುದ್ಧ 4 ದಿನಗಳ ಸುದೀರ್ಘ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದಾದ ಬಳಿಕ 2 ಟೆಸ್ಟ್ ಮ್ಯಾಚ್​ಗಳಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

ದಿನಾಂಕ ಪಂದ್ಯದ ವಿವರ ಕ್ರೀಡಾಂಗಣ
ಆಗಸ್ಟ್ 7 – 10, 2026 4 ದಿನಗಳ ಅಭ್ಯಾಸ ಪಂದ್ಯ ಎನ್‌ಸಿಸಿ ಮೈದಾನ, ಕೊಲಂಬೋ
ಆಗಸ್ಟ್ 15 – 19, 2026 ಮೊದಲನೇ ಟೆಸ್ಟ್ ಪಂದ್ಯ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣ, ಗಾಲೆ
ಆಗಸ್ಟ್ 23 – 27, 2026 ಎರಡನೇ ಟೆಸ್ಟ್ ಪಂದ್ಯ ಎಸ್‌ಎಸ್‌ಸಿ ಮೈದಾನ, ಕೊಲಂಬೋ

ಇದನ್ನೂ ಓದಿ: ಎಚ್ಚರಿಕೆ… ವೈಭವ್‌ಗೆ ಕೋಚ್ ಲಕ್ಷ್ಮಣ್ ಕಟ್ಟುನಿಟ್ಟಿನ ಸೂಚನೆ!

ಈ ಸರಣಿಯ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 8 ಮ್ಯಾಚ್​ಗಳ ಸರಣಿ ಆಡಲಿದೆ. ಈ ಸರಣಿ ಸೆಪ್ಟೆಂಬರ್ 26 ರಿಂದ ಶುರುವಾಗಲಿದ್ದು,  3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಾಗುತ್ತದೆ.

Published On - 9:38 am, Tue, 28 July 26

Follow Us
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ