AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಟೆಸ್ಟ್ ತಂಡದ ಆಟಗಾರರು ದೇಶೀಯ ಟೂರ್ನಿ ಆಡಲೇಬೇಕು..!

Team India: ಭಾರತ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ದೇಶೀಯ ಟೂರ್ನಿಯಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಡಬೇಕು ಎಂದು ಈ ಹಿಂದೆ ಗೌತಮ್ ಗಂಭೀರ್ ಹೇಳಿದ್ದರು. ಇದೀಗ ಭಾರತ ಟೆಸ್ಟ್ ತಂಡದ ಆಟಗಾರರಿಗೆ ದುಲೀಪ್ ಟ್ರೋಫಿ ಆಡುವಂತೆ ಬಿಸಿಸಿಐ ಸೂಚಿಸಿದ್ದಾರೆ. ಅಂದರೆ ಮುಂಬರುವ ದಿನಗಳಲ್ಲಿ ದುಲೀಪ್ ಟ್ರೋಫಿಯಲ್ಲಿ ಕಾಣಿಸಿಕೊಂಡ ಆಟಗಾರರನ್ನು ಮಾತ್ರ ಟೆಸ್ಟ್ ತಂಡದ ಆಯ್ಕೆಗೆ ಪರಿಗಣಿಸಲಾಗುತ್ತದೆ.

ಟೀಮ್ ಇಂಡಿಯಾ ಟೆಸ್ಟ್ ತಂಡದ ಆಟಗಾರರು ದೇಶೀಯ ಟೂರ್ನಿ ಆಡಲೇಬೇಕು..!
Team India
ಝಾಹಿರ್ ಯೂಸುಫ್
|

Updated on: Jul 17, 2024 | 9:30 AM

Share

ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್‌ಗಳು ದೇಶೀಯ ಟೂರ್ನಿಯಲ್ಲಿ ಭಾಗವಹಿಸಬೇಕೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಟ್ಟಪಣೆ ಹೊರಡಿಸುವ ಸಾಧ್ಯತೆಯಿದೆ. ಏಕೆಂದರೆ ಟೆಸ್ಟ್ ತಂಡದಲ್ಲಿರುವ ಆಟಗಾರರು ರಾಷ್ಟ್ರೀಯ ತಂಡದಿಂದ ಹೊರಗುಳಿದಾಗ ಯಾವುದೇ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇನ್ಮುಂದೆ ದೇಶೀಯ ಟೆಸ್ಟ್ ಪಂದ್ಯಾವಳಿಗಳಲ್ಲಿ ಭಾಗವಹಿಸುವುದು ಕಡ್ಡಾಯ ಮಾಡಲು ಬಿಸಿಸಿಐ ಮುಂದಾಗಿದೆ.

ಇದಾಗ್ಯೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾಗೆ ಈ ನಿಯಮದಿಂದ ವಿನಾಯಿತಿ ನೀಡಲಾಗುತ್ತದೆ. ಅಂದರೆ ಈ ಮೂವರು ಆಟಗಾರರು ರಾಷ್ಟ್ರೀಯ ತಂಡದಿಂದ ಹೊರಗುಳಿದರೂ, ದೇಶೀಯ ಟೂರ್ನಿಗಳಲ್ಲಿ ಕಾಣಿಸಿಕೊಳ್ಳುವುದು ಮತ್ತು ಬಿಡುವುಡು ಅವರ ಆಯ್ಕೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇನ್ನುಳಿದ ಟೆಸ್ಟ್​ ಆಟಗಾರರು ಫಸ್ಟ್ ಕ್ಲಾಸ್ ಟೂರ್ನಿಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯ ಮಾಡಲಾಗುತ್ತಿದೆ. ಇದರಿಂದ ಫಾರ್ಮ್​ನಲ್ಲಿರುವ ಆಟಗಾರರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲು ಸಹಕಾರಿಯಾಗಲಿದೆ ಎಂಬುದು ಬಿಸಿಸಿಐ ಆಯ್ಕೆ ಸಮಿತಿಯ ಅಭಿಪ್ರಾಯ.

ಅದರಂತೆ ಬಾಂಗ್ಲಾದೇಶ್ ಮತ್ತು ಮತ್ತು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳಿಗೂ ಮುನ್ನ ಭಾರತೀಯ ಟೆಸ್ಟ್ ತಂಡದ ಆಟಗಾರರು ಕನಿಷ್ಠ ಒಂದು ದುಲೀಪ್ ಟ್ರೋಫಿ ಪಂದ್ಯದಲ್ಲಿ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ಮುಂಬರುವ ದುಲೀಪ್ ಟ್ರೋಫಿಯ ತಂಡಗಳಲ್ಲಿ ಟೀಮ್ ಇಂಡಿಯಾದ ಟೆಸ್ಟ್ ಆಟಗಾರರನ್ನು ಸೇರಿಸಿಕೊಳ್ಳಲಾಗುತ್ತದೆ. ಅಲ್ಲಿ ನೀಡಿದ ಪ್ರದರ್ಶನದ ಆಧಾರದ ಮೇಲೆ ಮತ್ತೆ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಸಂದರ್ಭದಲ್ಲಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಕೇಂದ್ರೀಯ ಒಪ್ಪಂದ ಹೊಂದಿರುವ ಆಟಗಾರರು ದೇಶೀಯ ಸರ್ಕ್ಯೂಟ್‌ನಲ್ಲಿ ಭಾಗವಹಿಸಬೇಕು ಎಂದು ಕಠಿಣ ಸಂದೇಶ ರವಾನಿಸಿದ್ದರು. ಇದರ ಮೊದಲ ಹೆಜ್ಜೆಯಾಗಿ ಇದೀಗ ಭಾರತ ಟೆಸ್ಟ್ ತಂಡದ ಆಟಗಾರರು ದುಲೀಪ್ ಟ್ರೋಫಿಯಲ್ಲಿ ಭಾಗವಹಿಸಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಏನಿದು ದುಲೀಪ್ ಟ್ರೋಫಿ?

ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ. ಹಾಗೆಯೇ ಈ ಟೂರ್ನಿಯಲ್ಲಿ ದೇಶದ ಆರು ವಲಯಗಳ ತಂಡಗಳು ಕಣಕ್ಕಿಳಿಯುತ್ತವೆ. ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳು ಈ ಕೆಳಗಿನಂತಿವೆ…

  • ಕೇಂದ್ರ ವಲಯ
  • ದಕ್ಷಿಣ ವಲಯ
  • ಪೂರ್ವ ವಲಯ
  • ಪಶ್ಚಿಮ ವಲಯ
  • ಉತ್ತರ ವಲಯ
  • ಈಶಾನ್ಯ ವಲಯ

ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ. ದಕ್ಷಿಣ ವಲಯವನ್ನು ದಕ್ಷಿಣ ವಲಯ ಕರ್ನಾಟಕ, ಆಂಧ್ರಪ್ರದೇಶ, ಗೋವಾ, ಹೈದರಾಬಾದ್, ಕೇರಳ, ಪಾಂಡಿಚೇರಿ, ತಮಿಳುನಾಡು ರಾಜ್ಯಗಳ ಆಟಗಾರರು ಕಾಣಿಸಿಕೊಳ್ಳುತ್ತಾರೆ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು