AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಹಾನೆ-ಪೂಜಾರ ಮಾತ್ರವಲ್ಲ, ಮತ್ತೊಬ್ಬ ಬ್ಯಾಟ್ಸ್‌ಮನ್‌ನ ವೃತ್ತಿಜೀವನದ ಮೇಲೆ ಕಾರ್ಮೋಡ..!

Team India: ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲು ರಿಷಭ್ ಪಂತ್ ಕೂಡ ತುದಿಗಾಲಲ್ಲಿ ನಿಂತಿದ್ದಾರೆ. ಪಂತ್ ಮಿಂಚಿದರೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅವರೇ ಆಗಿ ಕಾಣಿಸಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ.

ರಹಾನೆ-ಪೂಜಾರ ಮಾತ್ರವಲ್ಲ, ಮತ್ತೊಬ್ಬ ಬ್ಯಾಟ್ಸ್‌ಮನ್‌ನ ವೃತ್ತಿಜೀವನದ ಮೇಲೆ ಕಾರ್ಮೋಡ..!
Team India
TV9 Web
| Updated By: ಝಾಹಿರ್ ಯೂಸುಫ್|

Updated on: Dec 02, 2023 | 11:14 PM

Share

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಟೀಮ್ ಇಂಡಿಯಾ ವಶಪಡಿಸಿಕೊಂಡಿದೆ. ಇದೇ ವೇಳೆ ಬಿಸಿಸಿಐ ಕೂಡ ಸೌತ್ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ. ಈ ಸರಣಿಯಲ್ಲಿ ಉಭಯ ತಂಡಗಳು 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿವೆ. ಈ ಸರಣಿಗಾಗಿ ಮೂರು ತಂಡಗಳನ್ನು ಆಯ್ಕೆ ಮಾಡಲಾಗಿದೆ. ಆದರೆ ಟೆಸ್ಟ್ ತಂಡದಲ್ಲಿ ಅನುಭವಿ ಆಟಗಾರರಾದ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಸ್ಥಾನ ನೀಡಲಾಗಿಲ್ಲ. ಇದರ ಜೊತೆಗೆ ಮತ್ತೋರ್ವ ಆಟಗಾರು ಕೂಡ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ.

ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಟೀಮ್ ಇಂಡಿಯಾದಿಂದ ಹೊರಗುಳಿಯುತ್ತಿರುವುದು ಇದೇ ಮೊದಲಲ್ಲ. 2022 ರಿಂದ ಟೀಮ್ ಇಂಡಿಯಾದ ಪ್ರಯಾಣವು ಎರಡೂ ಆಟಗಾರರಿಗೆ ಏರಿಳಿತಗಳಿಂದ ತುಂಬಿದೆ. ಚೇತೇಶ್ವರ್ ಪೂಜಾರ ಅವರು ಕೌಂಟಿ ಕ್ರಿಕೆಟ್‌ನಲ್ಲಿ ಸಾಕಷ್ಟು ರನ್ ಗಳಿಸಿದ ನಂತರ ಟೀಮ್ ಇಂಡಿಯಾಕ್ಕೆ ಮರಳಿದರು. ಆನಂತರ ವೆಸ್ಟ್ ಇಂಡೀಸ್ ಪ್ರವಾಸದಿಂದ ಅವರನ್ನು ಕೈ ಬಿಡಲಾಯಿತು.

ಮತ್ತೊಂದೆಡೆ ಅಜಿಂಕ್ಯ ರಹಾನೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಒನ್ ಮ್ಯಾನ್ ಆರ್ಮಿ ಆಗಿ ಮಿಂಚಿದ್ದರು. ಆದರೆ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ರಹಾನೆ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

ಈ ಇಬ್ಬರು ಅನುಭವಿ ಆಟಗಾರರ ಜೊತೆ ತಂಡದಿಂದ ಹೊರಬಿದ್ದ ಮತ್ತೋರ್ವ ಆಟಗಾರ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕೆ.ಎಸ್.ಭರತ್. ರಿಷಭ್ ಪಂತ್ ಸ್ಥಾನದಲ್ಲಿ ಅವಕಾಶ ಪಡೆದಿದ್ದ ಭರತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಟೀಮ್ ಇಂಡಿಯಾ ಪರ 5 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದ ಭರತ್ 8 ಇನ್ನಿಂಗ್ಸ್‌ಗಳಲ್ಲಿ ಕಲೆಹಾಕಿದ್ದು ಕೇವಲ 129 ರನ್ ಮಾತ್ರ.

ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಕೆಎಸ್ ಭರತ್ ಅವರನ್ನು ಕೈ ಬಿಡಲಾಗಿದೆ. ಅವರ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಇಶಾನ್ ಕಿಶನ್​ಗೆ ಅವಕಾಶ ಕಲ್ಪಿಸಲಾಗಿದೆ. ಇತ್ತ ತಂಡದಲ್ಲಿ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್ ಆಗಿ ಕೆಎಲ್ ರಾಹುಲ್ ಕೂಡ ಇದ್ದಾರೆ. ಹೀಗಾಗಿ ಕೆಎಸ್ ಭರತ್ ಅವರ ಮುಂಬರುವ ದಿನಗಳಲ್ಲಿ ಅವಕಾಶ ಸಿಗುವುದು ಅನುಮಾನ.

ಏಕೆಂದರೆ ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲು ರಿಷಭ್ ಪಂತ್ ಕೂಡ ತುದಿಗಾಲಲ್ಲಿ ನಿಂತಿದ್ದಾರೆ. ಪಂತ್ ಮಿಂಚಿದರೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅವರೇ ಆಗಿ ಕಾಣಿಸಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ.

ಇದನ್ನೂ ಓದಿ: IPL 2024: ಕಡಿಮೆ ಮೂಲ ಬೆಲೆಯೊಂದಿಗೆ ಹೆಸರು ನೋಂದಾಯಿಸಿದ ರಚಿನ್ ರವೀಂದ್ರ

ಸೌತ್ ಆಫ್ರಿಕಾ ಸರಣಿಗೆ ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮುಖೇಶ್ ಕುಮಾರ್, ಮುಕೇಶ್. ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ