AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW: ತಂಡದ ಸೋಲಿಗೆ ಕನ್ನಡತಿಯನ್ನು ದೂರಿದ ಟೀಂ ಇಂಡಿಯಾ ನಾಯಕಿ! ನೆಟ್ಟಿಗರ ಆಕ್ರೋಶ

INDW vs AUSW: ಪಂದ್ಯದ ನಂತರ ಮಾತನಾಡಿದ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಈ ಸೋಲಿಗೆ ಯುವ ಬೌಲರ್ ಶ್ರೇಯಾಂಕಾ ಪಾಟೀಲ್ ಕಾರಣ ಎಂದು ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿಸಿದರು. ಆದರೆ ಹರ್ಮನ್‌ಪ್ರೀತ್ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈಗ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

INDW vs AUSW: ತಂಡದ ಸೋಲಿಗೆ ಕನ್ನಡತಿಯನ್ನು ದೂರಿದ ಟೀಂ ಇಂಡಿಯಾ ನಾಯಕಿ! ನೆಟ್ಟಿಗರ ಆಕ್ರೋಶ
ಹರ್ಮನ್​ಪ್ರೀತ್ ಕೌರ್, ಶ್ರೇಯಾಂಕ್ ಪಾಟೀಲ್
ಪೃಥ್ವಿಶಂಕರ
|

Updated on: Jan 08, 2024 | 10:06 PM

Share

ಭಾನುವಾರ ನಡೆದ ಭಾರತ ಮಹಿಳಾ ಪಡೆ ಹಾಗೂ ಆಸ್ಟ್ರೇಲಿಯಾ ಮಹಿಳಾ (India Women vs Australia Women) ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಸ್ಟ್ರೇಲಿಯಾ ತಂಡ 6 ವಿಕೆಟ್​ಗಳಿಂದ ಗೆದ್ದುಕೊಂಡಿತು. ಸರಣಿಯ ಮೊದಲ ಪಂದ್ಯವನ್ನು ಸುಲಭವಾಗಿ ಗೆದ್ದಿದ್ದ ಹರ್ಮನ್ ಪಡೆ, ಎರಡನೇ ಟಿ20 ಪಂದ್ಯದಲ್ಲಿ ಕೊನೆಯವರೆಗೂ ಹೋರಾಡಿ ಕೊನೆಯಲ್ಲಿ ಮಾಡಿಕೊಂಡ ಎಡವಟ್ಟಿನಿಂದ ಸೋಲಿನ ಭಾರವನ್ನು ಹೊರಬೇಕಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ಭಾರತ, ಆಸ್ಟ್ರೇಲಿಯಾಕ್ಕೆ 131 ರನ್ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ಕೊನೆಯವರೆಗೂ ವಿಜಯಲಕ್ಷ್ಮಿ ಗಗನ ಕುಸುಮವಾಗಿದ್ದಳು. ಆದರೆ 19ನೇ ಓವರ್​ನಲ್ಲಿ ನಾಯಕಿ ತೆಗೆದುಕೊಂಡ ತೀರ್ಮಾನ ತಂಡದ ಸೋಲಿಗೆ ಕಾರಣವಾಯಿತು. ಆದರೆ ಪಂದ್ಯದ ನಂತರ ಮಾತನಾಡಿದ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಈ ಸೋಲಿಗೆ ಯುವ ಬೌಲರ್ ಶ್ರೇಯಾಂಕಾ ಪಾಟೀಲ್ (Shreyanka Patil) ಕಾರಣ ಎಂದು ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿಸಿದರು. ಆದರೆ ಹರ್ಮನ್‌ಪ್ರೀತ್ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈಗ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ವಾಸ್ತವವಾಗಿ ಆಸ್ಟ್ರೇಲಿಯಾ ಗೆಲುವಿಗೆ ಕೊನೆಯ 12 ಎಸೆತಗಳಲ್ಲಿ 15 ರನ್‌ಗಳ ಅಗತ್ಯವಿತ್ತು. ಈ ವೇಳೆ ನಾಯಕಿ ಹರ್ಮನ್, ಯುವ ಆಟಗಾರ್ತಿ ಶ್ರೇಯಾಂಕ ಪಾಟೀಲ್​ಗೆ ಹರ್ಮನ್ 19ನೇ ಓವರ್ ಬೌಲ್ ಮಾಡುವ ಜವಬ್ದಾರಿ ನೀಡಿದರು. ಆದರೆ ಈ ಓವರ್​ನಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಬಿಟ್ಟುಕೊಟ್ಟ ಶ್ರೇಯಾಂಕ ದುಬಾರಿಯಾಗಿದಲ್ಲದೆ ತಂಡವನ್ನು ಸೋಲಿನ ದವಡೆಗೆ ತಳ್ಳಿದರು. ವಾಸ್ತವವಾಗಿ ಸರಣಿಯ ಮೊದಲ ಪಂದ್ಯದಲ್ಲಿ 4 ವಿಕೆಟ್ ಪಡೆದಿದ್ದ ಟಿಟಾಸ್ ಸಾದು ಅವರ ಇನ್ನೊಂದು ಓವರ್ ಬಾಕಿ ಇರುವಂತೆಯೇ ಹರ್ಮನ್, ಯುವ ಸ್ಪಿನ್ನರ್​ಗೆ ಬೌಲಿಂಗ್ ಮಾಡುವ ಜವಬ್ದಾರಿ ನೀಡಿದ್ದು ತಂಡದ ಸೋಲಿಗೆ ಪ್ರಮುಖ ಕಾರಣವಾಗಿತ್ತು. ಆದರೆ ಪಂದ್ಯದ ಬಳಿಕ ಮಾತನಾಡಿದ ಹರ್ಮನ್ ಬೇರೆಯದ್ದೇ ಕಥೆ ಹೇಳಿದರು.

INDW vs AUSW: 100 ವಿಕೆಟ್, 1000 ರನ್! ಈ ಸಾಧನೆ ಮಾಡಿದ ಮೊದಲ ಮಹಿಳಾ ಕ್ರಿಕೆಟರ್ ದೀಪ್ತಿ ಶರ್ಮಾ

ಶ್ರೇಯಾಂಕ ರನ್​ಗಳಿಗೆ ಕಡಿವಾಣ ಹಾಕಬೇಕಿತ್ತು- ಹರ್ಮನ್

ಪೋಸ್ಟ್ ಮ್ಯಾಚ್ ಪ್ರೆಸೆಂಟೆಷನ್​ನಲ್ಲಿ ಮಾತನಾಡಿದ ಹರ್ಮನ್, ನಾವು ಮೊದಲು ಬ್ಯಾಟ್ ಮಾಡಿ ಸ್ಕೋರ್ ಬೋರ್ಡ್​ನಲ್ಲಿ ಕಡಿಮೆ ಸ್ಕೋರ್ ದಾಖಲಿಸಿದೇವು. ಆದರೂ ಪಂದ್ಯವನ್ನು ನಾವು 19ನೇ ಓವರ್​ವರೆಗೂ ತಂದೆವು. ಆದರೆ 19ನೇ ಓವರ್‌ನಲ್ಲಿ ಶ್ರೇಯಾಂಕ್ ಪಾಟೀಲ್ ಬಿಗ್​ ಶಾಟ್ ನೀಡದೆ, ರನ್​ಗಳಿಗೆ ಕಡಿವಾಣ ಹಾಕಿದರೆ, ಭಾರತ ತಂಡ ಗೆಲ್ಲಬಹುದಿತ್ತು ಎಂದರು. ಹರ್ಮನ್ ಅವರ ಈ ಹೇಳಿಕೆ ನೆಟ್ಟಿಗರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ.

ಹರ್ಮನ್‌ಪ್ರೀತ್ ಹೇಳಿಕೆಯ ನಂತರ, ಅವರ ಹೇಳಿಕೆಗ ಭಾರೀ ಟೀಕೆ ವ್ಯಕ್ತವಾಗುತ್ತಿದ್ದು, 21ರ ಹರೆಯದ ಯುವ ಬೌಲರ್‌ಗೆ ಸೋಲಿನ ಹೊಣೆ ಹೊರಿಸುವುದು ಸರಿಯಲ್ಲ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ನಾಯಕಿಯಾಗಿರುವ ಹರ್ಮನ್‌ಪ್ರೀತ್ ಕೌರ್ ಅವರೇ ಬ್ಯಾಟಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವಾಗ ಅವರು ಯುವ ಆಟಗಾರ್ತಿಯನ್ನು ಹೇಗೆ ದೂಷಿಸುತ್ತಾರೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಿ ಹರ್ಮನ್‌ಪ್ರೀತ್ 12 ಎಸೆತಗಳನ್ನು ಎದುರಿಸಿ ಆರು ರನ್‌ಗಳ ಬದಲು ಹೆಚ್ಚು ರನ್ ಗಳಿಸಿದ್ದರೆ, ಅದು ಬಹಳಷ್ಟು ವ್ಯತ್ಯಾಸವನ್ನುಂಟು ಮಾಡುತ್ತಿತ್ತು ಎಂದು ಇನ್ನೊಬ್ಬ ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಪಂದ್ಯ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು. ತಂಡದ ಯಾವುದೇ ಬ್ಯಾಟರ್​ಗಳಿಗೆ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ. ತಂಡದ ಪರ ಅತ್ಯುತ್ತಮ ಸ್ಕೋರರ್ ಎನಿಸಿಕೊಂಡ ದೀಪ್ತಿ ಶರ್ಮಾ 27 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 30 ರನ್ ಗಳಿಸಿದರು. ರಿಚಾ ಘೋಷ್ 19 ಎಸೆತಗಳಲ್ಲಿ 23 ರನ್ ಬಾರಿಸಿದರೆ, ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 26 ಎಸೆತಗಳಲ್ಲಿ 23 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಅಲಿಸ್ಸಾ ಪೆರ್ರಿ ಅಜೇಯ 34 ಮತ್ತು ಫೋಬೆ ಲಿಚ್‌ಫೀಲ್ಡ್ ಅಜೇಯ 18 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಇವರಿಬ್ಬರನ್ನು ಹೊರತುಪಡಿಸಿ, ಅಲಿಸ್ಸಾ ಹಿಲ್ಲಿ 26 ರನ್ ಮತ್ತು ಬೆತ್ ಮೂನಿ 20 ರನ್‌ಗಳ ಇನ್ನಿಂಗ್ಸ್ ಆಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ