IND vs SA: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಆಶಾ, ಸ್ಮೃತಿ ಶತಕ; ಭಾರತಕ್ಕೆ 143 ರನ್​ಗಳ ಜಯ..!

India Women vs South Africa Women: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಬರೋಬ್ಬರಿ 143 ರನ್​​ಗಳಿಂದ ಮಣಿಸಿದೆ.

IND vs SA: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಆಶಾ, ಸ್ಮೃತಿ ಶತಕ; ಭಾರತಕ್ಕೆ 143 ರನ್​ಗಳ ಜಯ..!
ಭಾರತ- ದಕ್ಷಿಣ ಆಫ್ರಿಕಾ ವನಿತಾ ಪಡೆ
Follow us
|

Updated on:Jun 16, 2024 | 8:47 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M. Chinnaswamy Stadium) ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ (India Women vs South Africa Women) ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಬರೋಬ್ಬರಿ 143 ರನ್​​ಗಳಿಂದ ಮಣಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಸ್ಮೃತಿ ಮಂಧಾನ (Smriti Mandhana) ಅವರ ಶತಕದ ಆಧಾರದ ಮೇಲೆ 265 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ, ಭಾರತದ ದಾಳಿಯ ಮುಂದೆ ಪೂರ್ಣ 20 ಓವರ್​​ಗಳನ್ನು ಆಡಲು ಸಾಧ್ಯವಾಗದೆ 37.4 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 122 ರನ್​ ಕಲೆಹಾಕಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ಚೊಚ್ಚಲ ಏಕದಿನ ಪಂದ್ಯವನ್ನಾಡಿದ ಲೆಗ್ ಸ್ಪಿನ್ನರ್ ಆಶಾ ಶೋಭ್ನಾ (Asha Sobhana) ಗರಿಷ್ಠ 4 ವಿಕೆಟ್ ಪಡೆದು ಮಿಂಚಿದರು.

ಭಾರತಕ್ಕೆ ಆರಂಭಿಕ ಆಘಾತ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆಗೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಸ್ಕೋರ್ 15 ರನ್ ಆಗುವಷ್ಟರಲ್ಲಿ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ 7 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ದಯಾಳನ್ ಹೇಮಲತಾ ಕೂಡ 12 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ನಾಯಕಿ ಹರ್ಮನ್​ಪ್ರೀತ್ ಕೌರ್ ಕೂಡ 10 ರನ್​ಗಳಿಗೆ ಸುಸ್ತಾದರು. ಹೀಗಾಗಿ ತಂಡ ಕೇವಲ 53 ರನ್​ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಸ್ಮೃತಿ- ದೀಪ್ತಿ ಜೊತೆಯಾಟ

ಇಲ್ಲಿಂದ ಸ್ಮೃತಿಗೆ ಜೊತೆಯಾದ ಜೆಮಿಮಾ ರಾಡ್ರಿಗಸ್ 17 ರನ್​ಗಳ ಕಾಣಿಕೆ ನೀಡಿದಲ್ಲದೆ ತಂಡದ ಮೊತ್ತವನ್ನು 90 ರನ್​ಗಳ ಗಡಿ ದಾಟಿಸಿದರು. ಈ ವೇಳೆ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಜೆಮಿಮಾ ಕ್ಯಾಚಿತ್ತು ಔಟಾದರು. ನಂತರ ಬಂದ ರಿಚಾ ಘೋಷ್ 3 ರನ್​​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಹೀಗಾಗಿ ಮತ್ತೊಮ್ಮೆ ತಂಡ ಸಂಕಷ್ಟಕ್ಕೆ ಸಿಲುಕಿತು. ಆದರೆ 7ನೇ ಕ್ರಮಾಂಕದಲ್ಲಿ ಬಂದ ದೀಪ್ತಿ ಶರ್ಮಾ 37 ರನ್​ಗಳ ಇನ್ನಿಂಗ್ಸ್ ಆಡುವುದರ ಜೊತೆಗೆ ಸ್ಮೃತಿ ಜೊತೆ ಅರ್ಧಶತಕಕ್ಕೂ ಹೆಚ್ಚಿನ ಜೊತೆಯಾಟ ನೀಡಿದರು. ಈ ವೇಳೆಗೆ ಸ್ಮೃತಿ ತಮ್ಮ ಅರ್ಧಶತಕ ಪೂರೈಸಿದರು.

ಭರ್ಜರಿ ಶತಕ ಸಿಡಿಸಿದ ಸ್ಮೃತಿ

8ನೇ ಕ್ರಮಾಂಕದಲ್ಲಿ ಬಂದ ಪೂಜಾ, ಸ್ಮೃತಿಗೆ ಉತ್ತಮ ಸಾಥ್ ನೀಡಿದಲ್ಲದೆ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಇಬ್ಬರ ನಡುವೆ 50 ರನ್​ಗಳ ಜೊತೆಯಾಟ ಕೂಡ ಮೂಡಿಬಂತು. ಈ ಹೊತ್ತಿಗೆ ಹೊಡಿಬಡಿ ಆಟಕ್ಕೆ ಮುಂದಾದ ಸ್ಮೃತಿ 93 ರನ್​ಗಳಿರುವಾಗ ಭರ್ಜರಿ ಸಿಕ್ಸರ್ ಸಿಡಿಸಿ, ನಂತರದ ಎಸೆತದಲ್ಲಿ ಸಿಂಗಲ್ ಕದಿಯುವ ಮೂಲಕ ತಮ್ಮ ಶತಕ ಪೂರೈಸಿದರು. ಕೊನೆಗೆ 127 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 117 ರನ್ ಬಾರಿಸಿ ಸ್ಮೃತಿ ತಮ್ಮ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಭಾರತ ವನಿತಾ ಪಡೆ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 265 ರನ್ ಕಲೆಹಾಕಿದೆ. ಈ ಮೂಲಕ ಆಫ್ರಿಕಾ ತಂಡಕ್ಕೆ 266 ರನ್​ಗಳ ಟಾರ್ಗೆಟ್ ನೀಡಿತು.

ತತ್ತರಿಸಿದ ಆಫ್ರಿಕಾ ಇನ್ನಿಂಗ್ಸ್

ಗೆಲುವಿಗೆ 266 ರನ್​​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕೆ ಸಿಲುಕಿತು. ಮೊದಲ ಓವರ್​ನಲ್ಲೇ ರೇಣುಕಾ, ನಾಯಕಿ ಲಾರಾ ವೊಲ್ವಾರ್ಡ್ಟ್​ರನ್ನು ಕ್ಲೀನ್ ಬೌಲ್ಡ್ ಮಾಡಿದರು. 33 ರನ್​​ ಆಗುವಷ್ಟರಲ್ಲಿ ತಂಡ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. ಅನುಭವಿ ಮರಿಜಾನ್ನೆ ಕಪ್ 24 ರನ್ ಕಲೆಹಾಕುವ ಮೂಲಕ ತಂಡದ ಇನ್ನಿಂಗ್ಸ್​ಗೆ ಕೊಂಚ ಬಲ ತುಂಬಿದರು. ಆದರೆ ಈ ವಿಕೆಟ್ ಪತನದ ಬಳಿಕ ಆಫ್ರಿಕಾ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ಕೆಳಕ್ರಮಾಂಕದಲ್ಲಿ ಸಿನಾಲೊ ಜಾಫ್ತಾ 27 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 pm, Sun, 16 June 24

ತಾಜಾ ಸುದ್ದಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್