Asia Cup 2022: ಜಸ್ಪ್ರೀತ್ ಬುಮ್ರಾ ಬಳಿಕ ಮತ್ತೊಬ್ಬ ಸ್ಟಾರ್ ಬೌಲರ್ ಏಷ್ಯಾಕಪ್​ನಿಂದ ಔಟ್..!

Asia Cup 2022: ಭಾರತದ ಜಸ್ಪ್ರೀತ್ ಬುಮ್ರಾ ಮತ್ತು ಬಾಂಗ್ಲಾದೇಶದ ನೂರುಲ್ ಹಸನ್ ಏಷ್ಯಾಕಪ್‌ನಿಂದ ಹೊರಗುಳಿಯುವುದರ ನಡುವೆ ಒಂದು ಸಾಮ್ಯತೆ ಇದೆ. ಇವರಿಬ್ಬರೂ ಏಷ್ಯಾಕಪ್​ನಿಂದ ಹೊರಬಿದ್ದಿರುವ ಸುದ್ದಿ ಅವರವರ ದೇಶದ ತಂಡದ ಆಯ್ಕೆಗೂ ಮುನ್ನವೇ ಬಂದಿದೆ.

Asia Cup 2022: ಜಸ್ಪ್ರೀತ್ ಬುಮ್ರಾ ಬಳಿಕ ಮತ್ತೊಬ್ಬ ಸ್ಟಾರ್ ಬೌಲರ್ ಏಷ್ಯಾಕಪ್​ನಿಂದ ಔಟ್..!
ಬುಮ್ರಾ
Follow us
| Updated By: ಪೃಥ್ವಿಶಂಕರ

Updated on:Aug 09, 2022 | 5:20 PM

ಜಸ್ಪ್ರೀತ್ ಬುಮ್ರಾ (Jasprit Bumrah) ನಂತರ, ಏಷ್ಯಾಕಪ್‌ನಿಂದ (Asia Cup) ಹೊರಗುಳಿಯುವ ಆಟಗಾರರ ಪಟ್ಟಿಯಲ್ಲಿ ಮತ್ತೊಂದು ಹೆಸರು ನೋಂದಾಯಿಸಲಾಗಿದೆ. ಇದು ಬಾಂಗ್ಲಾದೇಶದ ನೂರುಲ್ ಹಸನ್ (Nurul Hasan) ಹೆಸರು. ನೂರುಲ್ ಹಸನ್ ಅವರ ಬೆರಳಿನಲ್ಲಿ ಮೂಳೆ ಮುರಿತವಾಗಿದ್ದು, ಸೋಮವಾರ ಸಿಂಗಾಪುರದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಶಸ್ತ್ರಚಿಕಿತ್ಸೆಯ ನಂತರ, ನೂರುಲ್ ಹಸನ್ ಅವರ ಗಾಯದಿಂದ ಚೇತರಿಸಿಕೊಳ್ಳಲು 4 ವಾರಗಳು ಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಅವರಿಗೆ ಏಷ್ಯಾಕಪ್‌ ಆಡಲು ಸಾಧ್ಯವಾಗುವುದಿಲ್ಲ. ಇದೇ ಕಾರಣಕ್ಕೆ ಅವರು ಈ ಬಹುರಾಷ್ಟ್ರೀಯ ಟೂರ್ನಿಯಿಂದ ಹೊರಗುಳಿಯಬೇಕಾಯಿತು.

ಜುಲೈ 31 ರಂದು ಜಿಂಬಾಬ್ವೆ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದ ವೇಳೆ ನೂರುಲ್ ಹಸನ್ ಗಾಯಗೊಂಡಿದ್ದರು. ಆ ಗಾಯದ ನಂತರ, ಜಿಂಬಾಬ್ವೆ ಪ್ರವಾಸದಿಂದ ನೂರುಲ್ ಹೊರಗುಳಿದಿದ್ದರು, ಈಗ ಅವರು ಏಷ್ಯಾಕಪ್‌ನಿಂದಲೂ ಹೊರಗುಳಿಯಬೇಕಾಗಿದೆ. ಗಾಯದ ಸಮಸ್ಯೆಯಿಂದಾಗಿ ಬಾಂಗ್ಲಾದೇಶ ಇನ್ನೂ ತನ್ನ ತಂಡವನ್ನು ಪ್ರಕಟಿಸಿಲ್ಲ. ಬಹುಶಃ ಬಾಂಗ್ಲಾ ಕ್ರಿಕೆಟ್ ಮಂಡಳಿ ಗುರುವಾರ ಏಷ್ಯಾಕಪ್‌ಗೆ ತಮ್ಮ ತಂಡವನ್ನು ಪ್ರಕಟಿಸಬಹುದು.

ಬುಮ್ರಾ ನಂತರ ಏಷ್ಯಾಕಪ್‌ನಿಂದ ನೂರುಲ್ ಹಸನ್ ಔಟ್

ಇದನ್ನೂ ಓದಿ
Image
Asia Cup: ಏಷ್ಯಾಕಪ್​ಗೆ ತಂಡದಲ್ಲಿ ಸ್ಥಾನ ಪಡೆದ ಆರ್​ಸಿಬಿ ಆಟಗಾರ; ಕಾಮೆಂಟರಿಗೆ ಸೂಕ್ತ ಎಂದ ಜಡೇಜಾ..!
Image
IND vs PAK: ಏಷ್ಯಾಕಪ್​ನಲ್ಲಿ ಪಾಕ್​ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೀಗಿರಲಿದೆ
Image
Asia Cup 2022: ಕೊಹ್ಲಿ, ರಾಹುಲ್ ರೀ ಎಂಟ್ರಿ; ಏಷ್ಯಾಕಪ್​ಗೆ ಸಂಭಾವ್ಯ ಟೀಂ ಇಂಡಿಯಾ ಹೀಗಿದೆ

ಭಾರತದ ಜಸ್ಪ್ರೀತ್ ಬುಮ್ರಾ ಮತ್ತು ಬಾಂಗ್ಲಾದೇಶದ ನೂರುಲ್ ಹಸನ್ ಏಷ್ಯಾಕಪ್‌ನಿಂದ ಹೊರಗುಳಿಯುವುದರ ನಡುವೆ ಒಂದು ಸಾಮ್ಯತೆ ಇದೆ. ಇವರಿಬ್ಬರೂ ಏಷ್ಯಾಕಪ್​ನಿಂದ ಹೊರಬಿದ್ದಿರುವ ಸುದ್ದಿ ಅವರವರ ದೇಶದ ತಂಡದ ಆಯ್ಕೆಗೂ ಮುನ್ನವೇ ಬಂದಿದೆ. ಅಲ್ಲದೆ, ಬುಮ್ರಾ ನಿರ್ಗಮನವು ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ನೂರುಲ್ ಹಸನ್ ಅನುಪಸ್ಥಿತಿಯಿಂದ ಬಾಂಗ್ಲಾದೇಶಕ್ಕೆ ದೊಡ್ಡ ಆಘಾತ ಎದುರಾಗಿದೆ.

ಶಸ್ತ್ರಚಿಕಿತ್ಸೆಯ ನಂತರ 4 ವಾರಗಳ ರೆಸ್ಟ್

ಬೆರಳಿನ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳಲು ನೂರುಲ್ ಹಸನ್ ಈಗ ನಾಲ್ಕು ವಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮುಖ್ಯ ವೈದ್ಯ ದೇಬಾಶಿಶ್ ಚೌಧರಿ ಹೇಳಿದ್ದಾರೆ. ನೂರುಲ್ ಹಸನ್ ಅವರು ಆಟಗಾರರಲ್ಲದೆ ಬಾಂಗ್ಲಾದೇಶದ ಟಿ20 ತಂಡದ ನಾಯಕರೂ ಆಗಿದ್ದರು ಎಂಬುದನ್ನು ಇಲ್ಲಿ ಗಮನಿಸಿಬೇಕಾದ ಸಂಗತಿಯಾಗಿದೆ.

ಅಂದಹಾಗೆ,ಇಂಜುರಿಗೆ ತುತ್ತಾಗಿರುವ ಬಾಂಗ್ಲಾದೇಶದ ಏಕೈಕ ಆಟಗಾರ ನೂರುಲ್ ಹಸನ್ ಅಲ್ಲ. ಬದಲಿಗೆ, ಇದು ತಂಡದ ಅರ್ಧದಷ್ಟು ಆಟಗಾರರ ಸ್ಥಿತಿಯಾಗಿದೆ. ಇದಕ್ಕೂ ಮೊದಲು, ಮುಸ್ತಫಿಜುರ್ ರೆಹಮಾನ್ ಮಂಡಿರಜ್ಜು, ಸೈಫುದ್ದೀನ್ ಬೆನ್ನಿನ ಗಾಯ, ಮುಸ್ತಾಫಿಕುರ್ ರಹೀಮ್ ಹೆಬ್ಬೆರಳು ಗಾಯ ಮತ್ತು ಶೋರಿಫುಲ್ ಇಸ್ಲಾಂ ಮೊಣಕಾಲು ಗಾಯದಿಂದ ಬಳಲುತ್ತಿದ್ದರು.

Published On - 5:19 pm, Tue, 9 August 22

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್