AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಬೆಳ್ಳಿ ಪರದೆಯ ಮೇಲೆ ಟಿ20 ವಿಶ್ವಕಪ್‌ ನೇರ ಪ್ರಸಾರ! ಟಿಕೆಟ್ ದರ ಎಷ್ಟು ಗೊತ್ತಾ?

T20 World Cup: ಪಂದ್ಯವನ್ನು ವೀಕ್ಷಿಸಲು ಟಿಕೆಟ್ ದರವನ್ನು 200 ರಿಂದ 500 ರೂ.ಗೆ ನಿಗದಿ ಪಡಿಸಲಾಗಿದೆ. ಐನಾಕ್ಸ್ ದೇಶದ 70 ನಗರಗಳಲ್ಲಿ 56 ಮಲ್ಟಿಪ್ಲೆಕ್ಸ್‌ಗಳಲ್ಲಿ 658 ಸ್ಕ್ರೀನ್‌ಗಳನ್ನು ಹೊಂದಿದೆ.

T20 World Cup: ಬೆಳ್ಳಿ ಪರದೆಯ ಮೇಲೆ ಟಿ20 ವಿಶ್ವಕಪ್‌ ನೇರ ಪ್ರಸಾರ! ಟಿಕೆಟ್ ದರ ಎಷ್ಟು ಗೊತ್ತಾ?
ಐನಾಕ್ಸ್ ಥಿಯೇಟರ್
TV9 Web
| Edited By: |

Updated on: Oct 15, 2021 | 9:05 PM

Share

ಐಪಿಎಸ್ ಮುಗಿದ ತಕ್ಷಣ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ರಸದೌತಣ ಸಿಗಲಿದೆ. ಕೆಲವೇ ದಿನಗಳಲ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಆರಂಭವಾಗಲಿದೆ. ಈ ವರ್ಷದ ಟಿ 20 ವಿಶ್ವಕಪ್‌ ಭಾರತದಲ್ಲಿ ನಡೆಯಬೇಕಿತ್ತು. ಆದಾಗ್ಯೂ, ಕೊರೊನಾ ಹಿನ್ನೆಲೆಯಲ್ಲಿ ಯುಎಇ ಮತ್ತು ಒಮಾನ್‌ನಲ್ಲಿ ಕಿರು ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಐಸಿಸಿ ಸಿದ್ಧತೆ ನಡೆಸಿದೆ. ಈ ಮೆಗಾ ಟೂರ್ನಮೆಂಟ್ ಕ್ರಿಕೆಟ್​ನಲ್ಲಿ ಭಾರತ ಆಡುವ ಪಂದ್ಯಗಳನ್ನು ಐನಾಕ್ಸ್ ಥಿಯೇಟರ್ ಗಳಲ್ಲಿ ಪ್ರದರ್ಶಿಸಲು ಮ್ಯಾನೇಜ್ಮೆಂಟ್ ಸಿದ್ಧತೆ ನಡೆಸಿಕೊಂಡಿದೆ. ಇದನ್ನು ಮಲ್ಟಿಪ್ಲೆಕ್ಸ್ ಮ್ಯಾನೇಜ್‌ಮೆಂಟ್ ಕಂಪನಿ ಐನಾಕ್ಸ್ ಲೇಸರ್ ಘೋಷಿಸಿದೆ. ಟಿ 20 ವಿಶ್ವಕಪ್ ಪಂದ್ಯಗಳು ಅಕ್ಟೋಬರ್ 17 ರಿಂದ ಆರಂಭವಾಗುತ್ತವೆ. ಅಂತಿಮ ಪಂದ್ಯ ನವೆಂಬರ್ 14 ರಂದು ನಡೆಯಲಿದೆ.

ಟಿಕೆಟ್ ದರ 200 ರಿಂದ 500 ರೂ. ಆದಾಗ್ಯೂ, ಐನಾಕ್ಸ್ ಮ್ಯಾನೇಜ್‌ಮೆಂಟ್ ಭಾರತ ಆಡುವ ಪಂದ್ಯಗಳನ್ನು ತಮ್ಮ ಐನಾಕ್ಸ್ ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಘೋಷಿಸಿದೆ. ಥಿಯೇಟರ್‌ನಲ್ಲಿ ಈ ರೀತಿಯ ಪಂದ್ಯಗಳನ್ನು ದೊಡ್ಡ ಪರದೆಯಲ್ಲಿ ನೋಡುವುದು ಕ್ರಿಕೆಟ್ ಮೈದಾನದಲ್ಲಿ ಪಂದ್ಯಗಳನ್ನು ನೋಡುವ ಭಾವನೆಯನ್ನು ನೀಡುತ್ತದೆ ಎಂದು ಐನಾಕ್ಸ್ ಹೇಳಿದೆ. ಪಂದ್ಯವನ್ನು ವೀಕ್ಷಿಸಲು ಟಿಕೆಟ್ ದರವನ್ನು 200 ರಿಂದ 500 ರೂ.ಗೆ ನಿಗದಿ ಪಡಿಸಲಾಗಿದೆ. ಐನಾಕ್ಸ್ ದೇಶದ 70 ನಗರಗಳಲ್ಲಿ 56 ಮಲ್ಟಿಪ್ಲೆಕ್ಸ್‌ಗಳಲ್ಲಿ 658 ಸ್ಕ್ರೀನ್‌ಗಳನ್ನು ಹೊಂದಿದೆ. ಹೀಗಾಗಿ ಈ ಎಲ್ಲಾ ಪರದೆಗಳಲ್ಲೂ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ವೀಕ್ಷಿಸಬಹುದು.

ಟೀಮ್ ಇಂಡಿಯಾದ ವೇಳಾಪಟ್ಟಿ ಹೀಗಿದೆ ಈ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗ್ರೂಪ್-ಬಿ ಯಲ್ಲಿ ಸ್ಥಾನ ಪಡೆದಿದೆ. ತಂಡವು ತನ್ನ ಮೊದಲ ಪಂದ್ಯವನ್ನು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 24 ರಂದು ಆಡಲಿದೆ. ಇದರ ನಂತರ ತಂಡವು ಅಕ್ಟೋಬರ್ 31 ರಂದು ನ್ಯೂಜಿಲೆಂಡ್ ವಿರುದ್ಧ ಆಡಬೇಕಿದೆ. ಈ ಎರಡೂ ಪಂದ್ಯಗಳು ದುಬೈನಲ್ಲಿ ನಡೆಯಲಿದೆ. ಇದರ ನಂತರ, ನವೆಂಬರ್ 3 ರಂದು, ಅಬುಧಾಬಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡಲಿದೆ. ನವೆಂಬರ್ 5 ರಂದು, ತಂಡವು ತನ್ನ ಮುಂದಿನ ಪಂದ್ಯವನ್ನು ಆಡಬೇಕು. ನಂತರ ನವೆಂಬರ್ 8 ರಂದು ತಂಡವು ತನ್ನ ಕೊನೆಯ ಪಂದ್ಯವನ್ನು ಗುಂಪು ಪಂದ್ಯದಲ್ಲಿ ಆಡುತ್ತದೆ. ಈ ಎರಡೂ ತಂಡಗಳು ಅರ್ಹತಾ ಸುತ್ತಿನಿಂದ ಬರುತ್ತವೆ. ಈ ಎರಡೂ ಪಂದ್ಯಗಳು ಕೂಡ ದುಬೈನಲ್ಲಿ ನಡೆಯಲಿದೆ.

ಟಿ 20 ವಿಶ್ವಕಪ್‌ಗಾಗಿ ಭಾರತೀಯ ತಂಡ– ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ