AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಬೆಳ್ಳಿ ಪರದೆಯ ಮೇಲೆ ಟಿ20 ವಿಶ್ವಕಪ್‌ ನೇರ ಪ್ರಸಾರ! ಟಿಕೆಟ್ ದರ ಎಷ್ಟು ಗೊತ್ತಾ?

T20 World Cup: ಪಂದ್ಯವನ್ನು ವೀಕ್ಷಿಸಲು ಟಿಕೆಟ್ ದರವನ್ನು 200 ರಿಂದ 500 ರೂ.ಗೆ ನಿಗದಿ ಪಡಿಸಲಾಗಿದೆ. ಐನಾಕ್ಸ್ ದೇಶದ 70 ನಗರಗಳಲ್ಲಿ 56 ಮಲ್ಟಿಪ್ಲೆಕ್ಸ್‌ಗಳಲ್ಲಿ 658 ಸ್ಕ್ರೀನ್‌ಗಳನ್ನು ಹೊಂದಿದೆ.

T20 World Cup: ಬೆಳ್ಳಿ ಪರದೆಯ ಮೇಲೆ ಟಿ20 ವಿಶ್ವಕಪ್‌ ನೇರ ಪ್ರಸಾರ! ಟಿಕೆಟ್ ದರ ಎಷ್ಟು ಗೊತ್ತಾ?
ಐನಾಕ್ಸ್ ಥಿಯೇಟರ್
TV9 Web
| Updated By: ಪೃಥ್ವಿಶಂಕರ|

Updated on: Oct 15, 2021 | 9:05 PM

Share

ಐಪಿಎಸ್ ಮುಗಿದ ತಕ್ಷಣ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ರಸದೌತಣ ಸಿಗಲಿದೆ. ಕೆಲವೇ ದಿನಗಳಲ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಆರಂಭವಾಗಲಿದೆ. ಈ ವರ್ಷದ ಟಿ 20 ವಿಶ್ವಕಪ್‌ ಭಾರತದಲ್ಲಿ ನಡೆಯಬೇಕಿತ್ತು. ಆದಾಗ್ಯೂ, ಕೊರೊನಾ ಹಿನ್ನೆಲೆಯಲ್ಲಿ ಯುಎಇ ಮತ್ತು ಒಮಾನ್‌ನಲ್ಲಿ ಕಿರು ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಐಸಿಸಿ ಸಿದ್ಧತೆ ನಡೆಸಿದೆ. ಈ ಮೆಗಾ ಟೂರ್ನಮೆಂಟ್ ಕ್ರಿಕೆಟ್​ನಲ್ಲಿ ಭಾರತ ಆಡುವ ಪಂದ್ಯಗಳನ್ನು ಐನಾಕ್ಸ್ ಥಿಯೇಟರ್ ಗಳಲ್ಲಿ ಪ್ರದರ್ಶಿಸಲು ಮ್ಯಾನೇಜ್ಮೆಂಟ್ ಸಿದ್ಧತೆ ನಡೆಸಿಕೊಂಡಿದೆ. ಇದನ್ನು ಮಲ್ಟಿಪ್ಲೆಕ್ಸ್ ಮ್ಯಾನೇಜ್‌ಮೆಂಟ್ ಕಂಪನಿ ಐನಾಕ್ಸ್ ಲೇಸರ್ ಘೋಷಿಸಿದೆ. ಟಿ 20 ವಿಶ್ವಕಪ್ ಪಂದ್ಯಗಳು ಅಕ್ಟೋಬರ್ 17 ರಿಂದ ಆರಂಭವಾಗುತ್ತವೆ. ಅಂತಿಮ ಪಂದ್ಯ ನವೆಂಬರ್ 14 ರಂದು ನಡೆಯಲಿದೆ.

ಟಿಕೆಟ್ ದರ 200 ರಿಂದ 500 ರೂ. ಆದಾಗ್ಯೂ, ಐನಾಕ್ಸ್ ಮ್ಯಾನೇಜ್‌ಮೆಂಟ್ ಭಾರತ ಆಡುವ ಪಂದ್ಯಗಳನ್ನು ತಮ್ಮ ಐನಾಕ್ಸ್ ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಘೋಷಿಸಿದೆ. ಥಿಯೇಟರ್‌ನಲ್ಲಿ ಈ ರೀತಿಯ ಪಂದ್ಯಗಳನ್ನು ದೊಡ್ಡ ಪರದೆಯಲ್ಲಿ ನೋಡುವುದು ಕ್ರಿಕೆಟ್ ಮೈದಾನದಲ್ಲಿ ಪಂದ್ಯಗಳನ್ನು ನೋಡುವ ಭಾವನೆಯನ್ನು ನೀಡುತ್ತದೆ ಎಂದು ಐನಾಕ್ಸ್ ಹೇಳಿದೆ. ಪಂದ್ಯವನ್ನು ವೀಕ್ಷಿಸಲು ಟಿಕೆಟ್ ದರವನ್ನು 200 ರಿಂದ 500 ರೂ.ಗೆ ನಿಗದಿ ಪಡಿಸಲಾಗಿದೆ. ಐನಾಕ್ಸ್ ದೇಶದ 70 ನಗರಗಳಲ್ಲಿ 56 ಮಲ್ಟಿಪ್ಲೆಕ್ಸ್‌ಗಳಲ್ಲಿ 658 ಸ್ಕ್ರೀನ್‌ಗಳನ್ನು ಹೊಂದಿದೆ. ಹೀಗಾಗಿ ಈ ಎಲ್ಲಾ ಪರದೆಗಳಲ್ಲೂ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ವೀಕ್ಷಿಸಬಹುದು.

ಟೀಮ್ ಇಂಡಿಯಾದ ವೇಳಾಪಟ್ಟಿ ಹೀಗಿದೆ ಈ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗ್ರೂಪ್-ಬಿ ಯಲ್ಲಿ ಸ್ಥಾನ ಪಡೆದಿದೆ. ತಂಡವು ತನ್ನ ಮೊದಲ ಪಂದ್ಯವನ್ನು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 24 ರಂದು ಆಡಲಿದೆ. ಇದರ ನಂತರ ತಂಡವು ಅಕ್ಟೋಬರ್ 31 ರಂದು ನ್ಯೂಜಿಲೆಂಡ್ ವಿರುದ್ಧ ಆಡಬೇಕಿದೆ. ಈ ಎರಡೂ ಪಂದ್ಯಗಳು ದುಬೈನಲ್ಲಿ ನಡೆಯಲಿದೆ. ಇದರ ನಂತರ, ನವೆಂಬರ್ 3 ರಂದು, ಅಬುಧಾಬಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡಲಿದೆ. ನವೆಂಬರ್ 5 ರಂದು, ತಂಡವು ತನ್ನ ಮುಂದಿನ ಪಂದ್ಯವನ್ನು ಆಡಬೇಕು. ನಂತರ ನವೆಂಬರ್ 8 ರಂದು ತಂಡವು ತನ್ನ ಕೊನೆಯ ಪಂದ್ಯವನ್ನು ಗುಂಪು ಪಂದ್ಯದಲ್ಲಿ ಆಡುತ್ತದೆ. ಈ ಎರಡೂ ತಂಡಗಳು ಅರ್ಹತಾ ಸುತ್ತಿನಿಂದ ಬರುತ್ತವೆ. ಈ ಎರಡೂ ಪಂದ್ಯಗಳು ಕೂಡ ದುಬೈನಲ್ಲಿ ನಡೆಯಲಿದೆ.

ಟಿ 20 ವಿಶ್ವಕಪ್‌ಗಾಗಿ ಭಾರತೀಯ ತಂಡ– ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?