AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರಿಷ್ಠ ಸ್ಕೋರ್​ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿಂದ ಜಯಭೇರಿ ಬಾರಿಸಿದೆ.

ಗರಿಷ್ಠ ಸ್ಕೋರ್​ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ
Suryakumar Yadav
ಝಾಹಿರ್ ಯೂಸುಫ್
|

Updated on:Jan 24, 2026 | 8:14 AM

Share

ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಅಮೋಘ ಜಯ ಸಾಧಿಸಿದೆ. ಅದು ಕೂಡ 208 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತುವ ಮೂಲಕ. ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 6 ರನ್​ಗಳಿಸುವಷ್ಟರಲ್ಲಿ ಸಂಜು ಸ್ಯಾಮ್ಸನ್ (6) ಹಾಗೂ ಅಭಿಷೇಕ್ ಶರ್ಮಾ (0) ಅವರ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಸಿಡಿಲಬ್ಬರ ಶುರು ಮಾಡಿದ ಇಶಾನ್ ಕಿಶನ್ ನ್ಯೂಝಿಲೆಂಡ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಪಾಕೆಟ್ ಡೈನಾಮೊ ಬ್ಯಾಟ್​ನಿಂದ ಕೇವಲ 32 ಎಸೆತಗಳಲ್ಲಿ 11 ಫೋರ್ ಹಾಗೂ 4 ಭರ್ಜರಿ ಸಿಕ್ಸರ್​ಗಳು ಮೂಡಿಬಂತು. ಅಷ್ಟೇ ಅಲ್ಲದೆ 3ನೇ ವಿಕೆಟ್​ಗೆ 116 ರನ್​ಗಳ ಜೊತೆಯಾಟವಾಡಿದ ಇಶಾನ್ ಕಿಶನ್ (76) ಔಟಾದರು.

ಇದಾದ ಬಳಿಕ ಸಂಪೂರ್ಣ ಜವಾಬ್ದಾರಿ ಹೆಗಲೇರಿಸಿಕೊಂಡ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೂ ಫೋರ್​ಗಳನ್ನು ಬಾರಿಸಿದ ಸೂರ್ಯ 37 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 82 ರನ್​ ಬಾರಿಸಿದರು. ಈ ಮೂಲಕ 15.2 ಓವರ್​ಗಳಲ್ಲಿ ಟೀಮ್ ಇಂಡಿಯಾ ಗುರಿ ಮುಟ್ಟಿಸಿದರು.

ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ:

ಈ ಪಂದ್ಯದಲ್ಲಿ ಗರಿಷ್ಠ ಸ್ಕೋರ್​ಗಳಿಸಿದ್ದ ಸೂರ್ಯಕುಮಾರ್ ಯಾದವ್. ಕೇವಲ 37 ಎಸೆತಗಳನ್ನು ಎದುರಿಸಿದ ಸೂರ್ಯ ಅಜೇಯ 82 ರನ್​ ಚಚ್ಚಿದ್ದರು. ಇದಾಗ್ಯೂ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ದು ಇಶಾನ್ ಕಿಶನ್​ಗೆ ಎಂಬುದು ವಿಶೇಷ.

ಇದಕ್ಕೆ ಮುಖ್ಯ ಕಾರಣ ಇಶಾನ್ ಕಿಶನ್ ಆಡಿದ ಇನಿಂಗ್ಸ್. ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡಿದ್ದಾಗ ಬ್ಯಾಟಿಂಗ್ ಆರಂಭಿಸಿದ ಇಶಾನ್ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ್ದರು. ಈ ಸಿಡಿಲಬ್ಬರದೊಂದಿಗೆ ಇಡೀ ಪಂದ್ಯದ ಚಿತ್ರಣವನ್ನು ಸಹ ಬದಲಿಸಿದ್ದರು.

ಅಂದರೆ ಆರಂಭಿಕ ಆಘಾತಕ್ಕೊಳಗಾಗಿದ್ದ ಭಾರತ ತಂಡವನ್ನು ಪಾರು ಮಾಡಿದ್ದು ಇಶಾನ್ ಕಿಶನ್. ಯುವ ಎಡಗೈ ದಾಂಡಿಗನ ಸಿಡಿಲಬ್ಬರದಿಂದಾಗಿ ಉಳಿದ ಬ್ಯಾಟರ್​ಗಳ ಒತ್ತಡ ಕೂಡ ಇಳಿಯಿತು. ಇದಾದ ಬಳಿಕವಷ್ಟೇ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಹೀಗಾಗಿಯೇ ಅಜೇಯ 82 ರನ್​ ಬಾರಿಸಿದ ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್​ಗಿಂತ 76 ರನ್​ಗಳಿಸಿದ ಇಶಾನ್ ಕಿಶನ್ ಅವರ ಇನಿಂಗ್ಸ್​ ಅನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈ ಇನಿಂಗ್ಸ್ ಇಡೀ ಪಂದ್ಯ ಚಿತ್ರಣ ಬದಲಿಸಿದ್ದರಿಂದ ಇಶಾನ್ ಕಿಶನ್​ಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ: ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ

ವಿಶೇಷ ಎಂದರೆ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆಯುತ್ತಿರುವುದು ಬರೋಬ್ಬರಿ 4 ವರ್ಷಗಳ ಬಳಿಕ. ಅಂದರೆ ಇದಕ್ಕೂ ಮುನ್ನ 2022 ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದೀಗ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಪಾಕೆಟ್ ಡೈನಾಮೊ ಮತ್ತೆ ಸದ್ದು ಮಾಡಿರುವುದು ವಿಶೇಷ.

Published On - 8:05 am, Sat, 24 January 26

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್