AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: RCB ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ ಎಬಿಡಿ

IPL 2021: ಯುಎಇನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಎಬಿಡಿ ಕ್ರಮವಾಗಿ 0(1), 12(11), 11(6), 4*(1), 23(18), 19*(13), 26(26) ಹಾಗೂ 11(9) ರನ್​ ಮಾತ್ರ ಕಲೆಹಾಕಿದ್ದರು.

AB de Villiers: RCB ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ ಎಬಿಡಿ
AB de Villiers
TV9 Web
| Edited By: |

Updated on:Oct 12, 2021 | 9:59 PM

Share

ಐಪಿಎಲ್​ ಸೀಸನ್ 14 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಫೈನಲ್​ ಪ್ರವೇಶಿಸಲಿದೆ ಎಂದು ಭಾವಿಸಿದ್ದ ಆರ್​ಸಿಬಿ ಕೆಕೆಆರ್ ವಿರುದ್ದ ಮುಗ್ಗರಿಸಿ ಹೊರಬಿದ್ದಿದೆ. ಈ ಸೋಲಿನೊಂದಿಗೆ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅವರ ಬಹುಕಾಲ ಕಪ್ ಗೆಲ್ಲುವ ಕನಸು ಕೂಡ ಕಮರಿದೆ. ಇದೀಗ ಈ ಸೋಲಿನೊಂದಿಗೆ ಸ್ಪೋಟಕ ಬ್ಯಾಟರ್ ಎಬಿಡಿ ನೋವಿನೊಂದಿಗೆ ತವರಿಗೆ ಮರಳಲಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ಅಭಿಮಾನಿಗಳ ಬಳಿ ಎಬಿಡಿ ಕ್ಷಮೆಯಾಚಿಸಿದ್ದಾರೆ. ಆರ್​ಸಿಬಿ ತಂಡವು ಅತ್ಯುತ್ತಮ ಅಭಿಮಾನಿ ಬಳಗವನ್ನು ಹೊಂದಿದೆ. ಇದಾಗ್ಯೂ ನಾವು ನಿರಾಸೆ ಮಾಡಿದೆವು. ಅವರಿಗಾಗಿ ನಾವು ಈ ಸಲ ಕೂಡ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಆರ್​ಸಿಬಿ ಫ್ಯಾನ್ಸ್​ ನಮ್ಮನ್ನು ಕ್ಷಮಿಸಬೇಕೆಂದು ಕೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಮತ್ತಷ್ಟು ಜೋಶ್​ನೊಂದಿಗೆ ಬರಲಿದ್ದೇನೆ ಎಂದು ಎಬಿಡಿ ತಿಳಿಸಿದ್ದಾರೆ. ಈ ಮೂಲಕ ಮುಂದಿನ ಸೀಸನ್ ಐಪಿಎಲ್ ಆಡುವ ಇಂಗಿತವನ್ನು ಎಬಿಡಿ ವ್ಯಕ್ತಪಡಿಸಿದ್ದಾರೆ. ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದ್ದು, ಎಬಿಡಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಈ ಬಾರಿ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಎಬಿಡಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದಲ್ಲಿ ಲಯ ತಪ್ಪಿದ್ದರು. ಭಾರತದಲ್ಲಿ ನಡೆದ ಪಂದ್ಯಗಳಲ್ಲಿ ಆರ್​ಸಿಬಿ ತಂಡದ ಗೆಲುವಿನಲ್ಲಿ ಡಿವಿಲಿಯರ್ಸ್ ಪ್ರಮುಖ ಪಾತ್ರವಹಿಸಿದ್ದರು. ಆದರೆ ದ್ವಿತಿಯಾರ್ಧದಲ್ಲಿ ಎಬಿಡಿ ಬ್ಯಾಟ್​ನಿಂದ ಮೂಡಿಬಂದಿದ್ದು ಕೇವಲ 106 ರನ್ ಮಾತ್ರ.

ಯುಎಇನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಎಬಿಡಿ ಕ್ರಮವಾಗಿ 0(1), 12(11), 11(6), 4*(1), 23(18), 19*(13), 26(26) ಹಾಗೂ 11(9) ರನ್​ ಮಾತ್ರ ಕಲೆಹಾಕಿದ್ದರು. ಹೀಗಾಗಿ ಯುಎಇನಲ್ಲಿ ಎಬಿಡಿ ಅಬ್ಬರಿಸದಿರುವುದು ಕೂಡ ಆರ್​ಸಿಬಿ ಸೋಲಿಗೆ ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ:ಟಿ20 ವಿಶ್ವಕಪ್ ಪಾಕ್ ತಂಡದಲ್ಲಿ ಪ್ರಮುಖ ಬದಲಾವಣೆ: 39 ವರ್ಷದ ಆಲ್​ರೌಂಡರ್ ಆಯ್ಕೆ 

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

(IPL 2021: AB de Villiers Apologises To RCB Fans After Loss To KKR In Eliminator)

Published On - 8:11 pm, Tue, 12 October 21

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು