AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: RCB ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ ಎಬಿಡಿ

IPL 2021: ಯುಎಇನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಎಬಿಡಿ ಕ್ರಮವಾಗಿ 0(1), 12(11), 11(6), 4*(1), 23(18), 19*(13), 26(26) ಹಾಗೂ 11(9) ರನ್​ ಮಾತ್ರ ಕಲೆಹಾಕಿದ್ದರು.

AB de Villiers: RCB ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ ಎಬಿಡಿ
AB de Villiers
TV9 Web
| Edited By: |

Updated on:Oct 12, 2021 | 9:59 PM

Share

ಐಪಿಎಲ್​ ಸೀಸನ್ 14 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಫೈನಲ್​ ಪ್ರವೇಶಿಸಲಿದೆ ಎಂದು ಭಾವಿಸಿದ್ದ ಆರ್​ಸಿಬಿ ಕೆಕೆಆರ್ ವಿರುದ್ದ ಮುಗ್ಗರಿಸಿ ಹೊರಬಿದ್ದಿದೆ. ಈ ಸೋಲಿನೊಂದಿಗೆ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅವರ ಬಹುಕಾಲ ಕಪ್ ಗೆಲ್ಲುವ ಕನಸು ಕೂಡ ಕಮರಿದೆ. ಇದೀಗ ಈ ಸೋಲಿನೊಂದಿಗೆ ಸ್ಪೋಟಕ ಬ್ಯಾಟರ್ ಎಬಿಡಿ ನೋವಿನೊಂದಿಗೆ ತವರಿಗೆ ಮರಳಲಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ಅಭಿಮಾನಿಗಳ ಬಳಿ ಎಬಿಡಿ ಕ್ಷಮೆಯಾಚಿಸಿದ್ದಾರೆ. ಆರ್​ಸಿಬಿ ತಂಡವು ಅತ್ಯುತ್ತಮ ಅಭಿಮಾನಿ ಬಳಗವನ್ನು ಹೊಂದಿದೆ. ಇದಾಗ್ಯೂ ನಾವು ನಿರಾಸೆ ಮಾಡಿದೆವು. ಅವರಿಗಾಗಿ ನಾವು ಈ ಸಲ ಕೂಡ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಆರ್​ಸಿಬಿ ಫ್ಯಾನ್ಸ್​ ನಮ್ಮನ್ನು ಕ್ಷಮಿಸಬೇಕೆಂದು ಕೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಮತ್ತಷ್ಟು ಜೋಶ್​ನೊಂದಿಗೆ ಬರಲಿದ್ದೇನೆ ಎಂದು ಎಬಿಡಿ ತಿಳಿಸಿದ್ದಾರೆ. ಈ ಮೂಲಕ ಮುಂದಿನ ಸೀಸನ್ ಐಪಿಎಲ್ ಆಡುವ ಇಂಗಿತವನ್ನು ಎಬಿಡಿ ವ್ಯಕ್ತಪಡಿಸಿದ್ದಾರೆ. ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದ್ದು, ಎಬಿಡಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಈ ಬಾರಿ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಎಬಿಡಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದಲ್ಲಿ ಲಯ ತಪ್ಪಿದ್ದರು. ಭಾರತದಲ್ಲಿ ನಡೆದ ಪಂದ್ಯಗಳಲ್ಲಿ ಆರ್​ಸಿಬಿ ತಂಡದ ಗೆಲುವಿನಲ್ಲಿ ಡಿವಿಲಿಯರ್ಸ್ ಪ್ರಮುಖ ಪಾತ್ರವಹಿಸಿದ್ದರು. ಆದರೆ ದ್ವಿತಿಯಾರ್ಧದಲ್ಲಿ ಎಬಿಡಿ ಬ್ಯಾಟ್​ನಿಂದ ಮೂಡಿಬಂದಿದ್ದು ಕೇವಲ 106 ರನ್ ಮಾತ್ರ.

ಯುಎಇನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಎಬಿಡಿ ಕ್ರಮವಾಗಿ 0(1), 12(11), 11(6), 4*(1), 23(18), 19*(13), 26(26) ಹಾಗೂ 11(9) ರನ್​ ಮಾತ್ರ ಕಲೆಹಾಕಿದ್ದರು. ಹೀಗಾಗಿ ಯುಎಇನಲ್ಲಿ ಎಬಿಡಿ ಅಬ್ಬರಿಸದಿರುವುದು ಕೂಡ ಆರ್​ಸಿಬಿ ಸೋಲಿಗೆ ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ:ಟಿ20 ವಿಶ್ವಕಪ್ ಪಾಕ್ ತಂಡದಲ್ಲಿ ಪ್ರಮುಖ ಬದಲಾವಣೆ: 39 ವರ್ಷದ ಆಲ್​ರೌಂಡರ್ ಆಯ್ಕೆ 

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

(IPL 2021: AB de Villiers Apologises To RCB Fans After Loss To KKR In Eliminator)

Published On - 8:11 pm, Tue, 12 October 21

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ