AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ತಾಲಿಬಾನ್ ಹಿಡಿತದಲ್ಲಿ ಅಫ್ಘಾನಿಸ್ತಾನ್: ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರಾ ಮೂವರು ಅಫ್ಘಾನ್ ಆಟಗಾರರು?

IPL 2021 Phase 2: ಸೆಪ್ಟೆಂಬರ್​ 25ರಿಂದ ಡಬಲ್ ಹೆಡರ್​ಗಳು ಆರಂಭವಾಗಲಿದ್ದು, ಒಟ್ಟು ಏಳು ಡಬಲ್ ಹೆಡರ್​ಗಳು ಇರಲಿದೆ. ಫೈನಲ್ ಪಂದ್ಯವು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಅಕ್ಟೋಬರ್ 15 ರಂದು ನಡೆಯಲಿದೆ.

IPL 2021: ತಾಲಿಬಾನ್ ಹಿಡಿತದಲ್ಲಿ ಅಫ್ಘಾನಿಸ್ತಾನ್: ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರಾ ಮೂವರು ಅಫ್ಘಾನ್ ಆಟಗಾರರು?
Mohammed Nabi-Rashid khan
TV9 Web
| Edited By: |

Updated on: Aug 16, 2021 | 3:18 PM

Share

ಅಫ್ಘಾನಿಸ್ತಾನ (Afghanistan Crisis) ದೇಶವು ಸಂಪೂರ್ಣವಾಗಿ ತಾಲಿಬಾನ್ ಉಗ್ರರ ಹಿಡಿತಕ್ಕೊಳಗಾಗಿದೆ. ಈಗಾಗಲೇ ಅಫ್ಘಾನ್​ನ ರಾಷ್ಟ್ರಪತಿಗಳಿಂದ ಹಿಡಿದು ಸರ್ಕಾರದ ಉನ್ನತ ಮಂತ್ರಿಗಳು ದೇಶವನ್ನು ತೊರೆದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಅಫ್ಘಾನಿಸ್ತಾನದ ಆಟಗಾರರು ಐಪಿಎಲ್ (IPL 2021) ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಅದರಲ್ಲೂ ಐಪಿಎಲ್ 2021 ರ ದ್ವಿತಿಯಾರ್ಧಕ್ಕೆ  ಸ್ಟಾರ್ ಲೆಗ್ ಸ್ಪಿನ್ನರ್ ಎನಿಸಿಕೊಂಡಿರುವ ರಶೀದ್ ಖಾನ್ (Rashid Khan) ಮತ್ತು ಆಲ್ ರೌಂಡರ್ ಮೊಹಮ್ಮದ್ ನಬಿ (Mohammed Nabi) ಹಾಗೂ ಸ್ಪಿನ್ನರ್ ಮುಜೀಬುರ್ ರೆಹಮಾನ್ (IPL 2021 Phase 2) ಅವರ ಲಭ್ಯತೆಯ ಬಗ್ಗೆ ಪ್ರಶ್ನೆಗಳೆದ್ದಿವೆ. ಏಕೆಂದರೆ ಈ ಮೂವರು ಆಟಗಾರರು ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad) ತಂಡವನ್ನು ಪ್ರತಿನಿಧಿಸುತ್ತಿದ್ದು, ಹೀಗಾಗಿ ಒಂದೇ ಸಮಯದಲ್ಲಿ ವಿದೇಶಿ ಸ್ಟಾರ್ ಆಟಗಾರರು ಹೊರಗುಳಿದರೆ ಎಸ್​ಆರ್​ಹೆಚ್ (SRH)​ ತಂಡಕ್ಕೆ ಹಿನ್ನಡೆಯಾಗಲಿದೆ.

ಇತ್ತ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ ಕೂಡ ಅಫ್ಘಾನಿಸ್ತಾನದ ಆಟಗಾರರೊಂದಿಗೆ ಸಂಪರ್ಕದಲ್ಲಿದ್ದಾರೆ. ಇತ್ತ ರಶೀದ್ ಖಾನ್ ಹಾಗೂ ಮೊಹಮ್ಮದ್ ನಬಿ ಇಂಗ್ಲೆಂಡ್​ನಲ್ಲಿ ದಿ ಹಂಡ್ರೆಡ್ ಲೀಗ್ ಆಡುತ್ತಿದ್ದು, ಹೀಗಾಗಿ ಅಲ್ಲಿಂದಲೇ ಯುಎಇನತ್ತ ಪ್ರಯಾಣ ಬೆಳೆಸುವುದಾಗಿ ತಿಳಿಸಿದ್ದಾರೆ ಎಂದು ಸನ್​​ರೈಸರ್ಸ್ ಹೈದರಾಬಾದ್ ತಂಡದ ಸಿಇಒ ಷಣ್ಮುಗಮ್ ತಿಳಿಸಿದ್ದಾರೆ. ಇನ್ನು ಮುಜೀಬುರ್ ರೆಹಮಾನ್ ಬಗ್ಗೆ ಯಾವುದೇ ಸ್ಷಷ್ಟತೆ ಸಿಕ್ಕಿಲ್ಲ. ಹೀಗಾಗಿ ಎಸ್​ಆರ್​ಹೆಚ್ (SRH) ತಂಡದ ಇಬ್ಬರು ಅಫ್ಘಾನ್ ಆಟಗಾರರು ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad)  ತಂಡ ಸ್ಪಷ್ಟನೆ ನೀಡಿದೆ.

ಇದಾಗ್ಯೂ ಈ ಆಟಗಾರರು ಕುಟುಂಬಗಳು ಅಫ್ಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ರಶೀದ್ ಖಾನ್ ಇತ್ತೀಚೆಗಷ್ಟೇ  ತಾಲಿಬಾನ್ ಉಗ್ರರ ಹೋರಾಟವನ್ನು ಹತ್ತಿಕ್ಕುವಂತೆ ವಿಶ್ವ ನಾಯಕರಿಗೆ ಮನವಿ ಮಾಡಿದ್ದರು. ಇದೀಗ ಇಡೀ ಅಫ್ಘಾನಿಸ್ತಾನ್ ತಾಲಿಬಾನ್ ಹಿಡಿತದಲ್ಲಿದ್ದು, ಹೀಗಾಗಿ ರಶೀದ್ ಖಾನ್ ಕುಟುಂಬದ ಮೇಲೆ ಉಗ್ರರು ಆಕ್ರಮಣ ಮಾಡುವ ಆತಂಕ ಎದುರಾಗಿದೆ.

ಐಪಿಎಲ್​ನ ದ್ವಿತಿಯಾರ್ಧ ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಉಳಿದ 31 ಪಂದ್ಯಗಳನ್ನು ಮೂರು ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅದರಂತೆ ಶಾರ್ಜಾ, ಅಬುಧಾಬಿ ಹಾಗೂ ದುಬೈನ ಕ್ರಿಕೆಟ್ ಸ್ಟೇಡಿಯಂಲ್ಲಿ ಐಪಿಎಲ್ ಕಾದಾಟ ನಡೆಯಲಿದೆ. ಮೊದಲ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್ (CSK)​ ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ನಡುವೆ ನಡೆಯಲಿದ್ದು, ಹಾಗೆಯೇ ಅಕ್ಟೋಬರ್ 8 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ಲೀಗ್ ಹಂತದ ಅಂತಿಮ ಪಂದ್ಯ ಆಡಲಿದೆ.

ಇನ್ನು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ 13 ಪಂದ್ಯಗಳು ನಡೆಯಲಿದೆ. ಅದೇ ರೀತಿ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ಸೇರಿದಂತೆ ಶಾರ್ಜಾದಲ್ಲಿ ಒಟ್ಟು 10 ಪಂದ್ಯಗಳನ್ನು ಆಯೋಜಿಸಲಿದೆ. ಹಾಗೆಯೇ 8 ಪಂದ್ಯಗಳಿಗೆ ಅಬುಧಾಬಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಸೆಪ್ಟೆಂಬರ್​ 25ರಿಂದ ಡಬಲ್ ಹೆಡರ್​ಗಳು ಆರಂಭವಾಗಲಿದ್ದು, ಒಟ್ಟು ಏಳು ಡಬಲ್ ಹೆಡರ್​ಗಳು ಇರಲಿದೆ. ಫೈನಲ್ ಪಂದ್ಯವು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಅಕ್ಟೋಬರ್ 15 ರಂದು ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಪಂದ್ಯಗಳು ನಡೆಯಲಿದ್ದು, ಎರಡು ಪಂದಗಳಿದ್ದಾಗ ಮೊದಲ ಪಂದ್ಯವು ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡ: ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್, ವಿರಾಟ್ ಸಿಂಗ್, ಮನೀಶ್ ಪಾಂಡೆ, ಪ್ರಿಯಂ ಗರ್ಗ್, ವೃದ್ಧಿಮಾನ್ ಸಹಾ, ಜಾನಿ ಬೈರ್​ಸ್ಟೋ, ಶ್ರೀವತ್ಸ್ ಗೋಸ್ವಾಮಿ, ವಿಜಯ್ ಶಂಕರ್, ಮಿಚೆಲ್ ಮಾರ್ಷ್, ಮೊಹಮ್ಮದ್ ನಬಿ, ಜೇಸನ್ ಹೋಲ್ಡರ್, ಅಭಿಶೇಕ್ ಶರ್ಮಾ, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ರಶೀದ್ ಖಾನ್, ಟಿ ನಟರಾಜನ್, ಸಂದೀಪ್ ಶರ್ಮ, ಖಲೀಲ್ ಅಹ್ಮದ್, ಸಿದ್ದಾರ್ಥ್ ಕೌಲ್, ಬಸಿಲ್ ಥಂಪಿ, ಶಾಬಾದ್ ನದೀಂ, ಕೇದಾರ್ ಜಾಧವ್, ಜೆ ಸುಚಿತ್, ಮುಜೀಬುರ್ ರೆಹಮಾನ್

ಇದನ್ನೂ ಓದಿ: India vs England 2nd Test: ಅಂದು ದಾದಾ, ಇಂದು ಕೊಹ್ಲಿ: ಲಾರ್ಡ್ಸ್​ ಬಾಲ್ಕನಿಯಲ್ಲಿ ಕ್ಯಾಪ್ಟನ್ ಡ್ಯಾನ್ಸ್​

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

ಇದನ್ನೂ ಓದಿ: ಇವರ ಬ್ಯಾಟಿಂಗ್ ಮುಂದೆ, ಗೇಲ್-ಎಬಿಡಿ-ಸೆಹ್ವಾಗ್ ಏನೂ ಅಲ್ಲ: ವಿಶ್ವದ ಅತೀ ವೇಗದ ಶತಕದ ಸರದಾರ

ಇದನ್ನೂ ಓದಿ: Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ