AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮೊದಲು ಈ ಕೆಲಸ ಮುಗಿಸಿಕೊಳ್ಳಿ! ಎಲ್ಲಾ ಐಪಿಎಲ್ ಫ್ರಾಂಚೈಸಿಗಳಿಗೆ ಖಡಕ್ ಸಂದೇಶ ರವಾನಿಸಿದ ಬಿಸಿಸಿಐ

IPL 2021: 27 ದಿನಗಳಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿವೆ. ಪಂದ್ಯಾವಳಿಯನ್ನು ಪುನರಾರಂಭಿಸುವ ಮೊದಲು, ಎಲ್ಲಾ ಆಟಗಾರರು ಮತ್ತು ಸಿಬ್ಬಂದಿ ಸದಸ್ಯರು ಕೊರೊನಾ ಲಸಿಕೆಯನ್ನು ಪಡೆಯುವುದು ಮುಖ್ಯವಾಗಿದೆ.

IPL 2021: ಮೊದಲು ಈ ಕೆಲಸ ಮುಗಿಸಿಕೊಳ್ಳಿ! ಎಲ್ಲಾ ಐಪಿಎಲ್ ಫ್ರಾಂಚೈಸಿಗಳಿಗೆ ಖಡಕ್ ಸಂದೇಶ ರವಾನಿಸಿದ ಬಿಸಿಸಿಐ
ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.
TV9 Web
| Edited By: |

Updated on: Aug 06, 2021 | 6:43 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2021) ಎರಡನೇ ಹಂತದ ಸಿದ್ಧತೆಗಳನ್ನು ಆರಂಭಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಪ್ರಯಾಣಿಸುವ ಮೊದಲು ಪ್ರತಿಯೊಬ್ಬರೂ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಬೋರ್ಡ್, ಲೀಗ್‌ನ ಎಲ್ಲಾ ಫ್ರಾಂಚೈಸಿಗಳನ್ನು ಕೇಳಿದೆ. 14 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಈಗ ಐಪಿಎಲ್‌ನ ಉಳಿದ ಪಂದ್ಯಗಳು ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ನಡೆಯಲಿದೆ.

ಬಿಸಿಸಿಐ ಕಳೆದ ತಿಂಗಳು ಐಪಿಎಲ್ 2021 ರ ಉಳಿದ ವೇಳಾಪಟ್ಟಿಯನ್ನು ಘೋಷಿಸಿತ್ತು. ಇದರ ಪ್ರಕಾರ, 27 ದಿನಗಳಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿವೆ. ಪಂದ್ಯಾವಳಿಯನ್ನು ಪುನರಾರಂಭಿಸುವ ಮೊದಲು, ಎಲ್ಲಾ ಆಟಗಾರರು ಮತ್ತು ಸಿಬ್ಬಂದಿ ಸದಸ್ಯರು ಕೊರೊನಾ ಲಸಿಕೆಯನ್ನು ಪಡೆಯುವುದು ಮುಖ್ಯವಾಗಿದೆ.

ಕ್ವಾರಂಟೈನ್ ಏಳು ದಿನಗಳವರೆಗೆ ಇರಬಹುದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಪ್ರಯಾಣಿಸುವವರೆಲ್ಲರೂ ಎರಡೂ ಡೋಸ್ ಲಸಿಕೆಯನ್ನು ಪೂರ್ಣಗೊಳಿಸಬೇಕು ಎಂದು ನಮಗೆ ತಿಳಿಸಲಾಗಿದೆ. ಆದ್ದರಿಂದ ತಂಡಗಳು ಯುಎಇ ತಲುಪಿದ ನಂತರ ಯಾವುದೇ ಸಮಸ್ಯೆ ಇರುವುದಿಲ್ಲ. ತಂಡಗಳು ತರಬೇತಿ ಆರಂಭಿಸಲು ಏಳು ದಿನಗಳ ಮೊದಲು ಕ್ವಾರಂಟೈನ್ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.

ಮೊದಲ ಪಂದ್ಯದಲ್ಲಿ ಚೆನ್ನೈ ಮತ್ತು ಮುಂಬೈ ಮುಖಾಮುಖಿಯಾಗಲಿವೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದೊಂದಿಗೆ ದುಬೈನಲ್ಲಿ ಪಂದ್ಯಾವಳಿ ಆರಂಭವಾಗಲಿದೆ. ತಮ್ಮ ಹಿಂದಿನ ಪಂದ್ಯದಲ್ಲಿ ತಂಡಗಳು ಮುಖಾಮುಖಿಯಾದಾಗ, ಕೀರನ್ ಪೊಲ್ಲಾರ್ಡ್ ಅದ್ಭುತ ಇನ್ನಿಂಗ್ಸ್ ಆಡಿ ಮುಂಬೈ ಇಂಡಿಯನ್ಸ್ ಗೆಲುವಿಗೆ ಸಹಾಯ ಮಾಡಿದರು. ಐಪಿಎಲ್ ಗೆ ಇಂಗ್ಲೆಂಡ್ ಆಟಗಾರರು ಲಭ್ಯವಿರುವುದನ್ನು ಬಿಸಿಸಿಐ ಖಚಿತಪಡಿಸಿದೆ. ಈ ಸುದ್ದಿಯ ನಂತರ, ಕೆಲವು ಫ್ರಾಂಚೈಸಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಪ್ಯಾಟ್ ಕಮಿನ್ಸ್ ಗೈರಾಗಬಹುದು ಮತ್ತೊಂದೆಡೆ, ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಉಳಿದ ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಆಸ್ಟ್ರೇಲಿಯಾದ ವೇಗದ ಬೌಲರ್ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ , ದುರದೃಷ್ಟವಶಾತ್ ಈ ಹಂತದಲ್ಲಿ ನಾನು ಬಹುಶಃ ಐಪಿಎಲ್‌ಗೆ ಹೋಗುತ್ತಿಲ್ಲ. ನಾನು ಈ ಬಗ್ಗೆ ಅಧಿಕೃತ ನಿರ್ಧಾರ ತೆಗೆದುಕೊಂಡಿಲ್ಲ, ಆದರೆ ನನ್ನ ಸಂಗಾತಿ ಗರ್ಭಿಣಿಯಾಗಿದ್ದಾಳೆ. ಪ್ರಸ್ತುತ, ಆಸ್ಟ್ರೇಲಿಯಾ ಮರಳಲು ಪ್ರಯಾಣದ ನಿಷೇಧವಿದೆ. ಅಲ್ಲದೆ ನಾವು 2 ವಾರಗಳ ಕಾಲ ಕ್ವಾರಂಟೈನ್‌ನಲ್ಲಿರಬೇಕು ಎಂದಿದ್ದಾರೆ.

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ