AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್ ರೋಹಿತ್ ಶರ್ಮಾ

IPL 2021 CSK vs MI: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಿಟ್​ಮ್ಯಾನ್ ರೋಹಿತ್ ಶರ್ಮಾ ಇಂದಿನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೇ ಈ ದಾಖಲೆ ಬರೆಯುವ ಅಂದಾಜಿದೆ.

Rohit Sharma: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್ ರೋಹಿತ್ ಶರ್ಮಾ
Rohit Sharma
TV9 Web
| Updated By: Vinay Bhat|

Updated on: Sep 19, 2021 | 10:13 AM

Share

ಭಾರತದಲ್ಲಿ ಅಪೂರ್ಣಗೊಂಡಿದ್ದ ಐಪಿಎಲ್ 2021ಕ್ಕೆ (IPL 2021) ಇಂದು ದುಬೈನಲ್ಲಿ ಮತ್ತೆ ಚಾಲನೆ ಸಿಗಲಿದ್ದು, ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSKvsMI) ತಂಡಗಳು ಮೊದಲ ಪಂದ್ಯದಲ್ಲಿ ಸೆಣೆಸಾಟ ನಡೆಸಲಿವೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ (Dubai International Stadium) ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದು, ಅರ್ಧದಷ್ಟು ಪ್ರೇಕ್ಷಕರಿಗೂ ಅನುಮತಿ ನೀಡಲಾಗಿದೆ. ಈ ಮೊದಲ ಪಂದ್ಯದಲ್ಲೇ ಹಿಟ್​ಮ್ಯಾನ್ ರೋಹಿತ್ ಶರ್ಮಾ (Rohit Sharma) ನೂತನ ದಾಖಲೆಯ ಹೊಸ್ತಿಲಲ್ಲಿದ್ದಾರೆ. ಹೌದು, ಟಿ-20 (T20 Cricket) ಮಾದರಿಯ ಕ್ರಿಕೆಟ್​ನಲ್ಲಿ ಸ್ಟಾರ್ ಬ್ಯಾಟ್ಸ್​ಮನ್ ಆಗಿ ಗುರಿತಿಸಿಕೊಂಡಿರುವ ರೋಹಿತ್ ಶರ್ಮಾ ಇತಿಹಾಸ ರಚಿಸುವ ತವಕದಲ್ಲಿದ್ದಾರೆ. ಟಿ-20 ಕ್ರಿಕೆಟ್ ಇತಿಹಾಸದಲ್ಲಿ ಈವರೆಗೆ ರೋಹಿತ್ ಬರೋಬ್ಬರಿ 397 ಸಿಕ್ಸರ್ ಸಿಡಿಸಿದ್ದಾರೆ. ಇನ್ನೂ ಕೇವಲ 3 ಸಿಕ್ಸರ್ ಬಾರಿಸಿದರೆ ಇವರ ಸಿಕ್ಸರ್​ಗಳ ಸಂಖ್ಯೆ 400 ತಲುಪಲಿದೆ.

ಈ ಮೂಲಕ ಟಿ-20 ಕ್ರಿಕೆಟ್​ನಲ್ಲಿ 400 ಸಿಕ್ಸರ್ ಬಾರಿಸಿದ ಮೊಟ್ಟ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆಯಲಿದ್ದಾರೆ. ಈ ಸಾಧನೆಯನ್ನು ಹಿಟ್​ಮ್ಯಾನ್ ಇಂದಿನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೇ ಮಾಡುವ ಅಂದಾಜಿದೆ.

ರೋಹಿತ್ ಶರ್ಮಾ ಒಟ್ಟು ಈವರೆಗೆ 397 ಸಿಕ್ಸರ್ ಬಾರಿಸಿದ್ದಾರೆ. ಇದರಲ್ಲಿ 224 ಸಿಕ್ಸರ್ ಐಪಿಎಲ್​ನಿಂದಲೇ ಬಂದಿದೆ. ಮುಂಬೈ ಇಂಡಿಯನ್ಸ್ ಪರ 173 ಮತ್ತು ಡೆಕ್ಕನ್ ಚಾರ್ಜೆಸ್ ಪರ 51 ಸಿಕ್ಸರ್ ಬಾರಿಸಿದ್ದರು. ಇನ್ನೂ 300 ಸಿಕ್ಸರ್​ಗಳ ಗಡಿ ದಾಟಿದ ಭಾರತೀಯ ಬ್ಯಾಟ್ಸ್​ಮನ್​ಗಳ ಸಾಲಿನಲ್ಲಿ ರೋಹಿತ್ ಮೊದಲ ಸ್ಥಾನದಲ್ಲಿದ್ದರೆ, ಸುರೇಶ್ ರೈನಾ (324) ಎರಡನೇ ಸ್ಥಾನ, ವಿರಾಟ್ ಕೊಹ್ಲಿ (315), ಎಂ. ಎಸ್ ಧೋನಿ (303) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ನಾಲ್ಕುವರೆ ತಿಂಗಳ ಬಳಿಕ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಇಂದು ಮತ್ತೆ ಚಾಲನೆ ಸಿಗುತ್ತಿದೆ. ಅರಬ್ ನಾಡಿನಲ್ಲಿ ಅಬ್ಬರಿಸಲು ಆಟಗಾರರು ತಯಾರಾಗಿದ್ದು, ಅಭಿಮಾನಿಗಳಂತು ಕಾದುಕುಳಿತಿದ್ದಾರೆ. ಐಪಿಎಲ್ ಇತಿಹಾಸದ ಸಾಂಪ್ರದಾಯಿಕ ಎದುರಾಳಿ, ಎರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಸಂಜೆ 7:30ಕ್ಕೆ ದುಬೈ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿ ಆಗಿವೆ. ಈ ಪೈಕಿ 19 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಸಂಭಾವ್ಯ ಪ್ಲೇಯಿಂಗ್ XI:

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಫಾಫ್ ಡು ಪ್ಲೆಸಿಸ್ / ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಸುರೇಶ್ ರೈನಾ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ, ವಿಕೆಟ್ ಕೀಪರ್‌), ಮೊಯೀನ್ ಅಲಿ, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಜೋಶ್ ಹೇಜಲ್‌ವುಡ್.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಜಸ್​ಪ್ರೀತ್ ಬುಮ್ರಾ, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಮಾರ್ಕೊ ಜಾನ್ಸನ್.

IPL 2021: ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್: ಯಾವ ತಂಡ ಬಲಿಷ್ಠ?, ಪಿಚ್ ವರದಿ, ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

IPL 2021: ಅರಬ್ ನಾಡಿನಲ್ಲಿ ಐಪಿಎಲ್ ಅಬ್ಬರ ಶುರು: ಇಂದು ಚೆನ್ನೈ-ಮುಂಬೈ ನಡುವೆ ಮೊದಲ ಸೆಣೆಸಾಟ

(IPL 2021 CSK vs MI Mumbai Indians captain Rohit Sharma only 3 sixes away to create Sixes Record)

ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ