AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಪಂದ್ಯಗಳಿಂದ ಕೇವಲ 5 ರನ್​: RCB ತಂಡದಲ್ಲಿ ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್​

RCB: ಆಲ್​ರೌಂಡರ್​ ಡೇನಿಯಲ್ ಕ್ರಿಶ್ಚಿಯನ್ ಸತತ 4 ಪಂದ್ಯಗಳಲ್ಲಿ ಕಣಕ್ಕಿಳಿದರೂ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಅದರಲ್ಲೂ 2 ಬಾರಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಸಿದರೂ ಕಲೆಹಾಕಿದ್ದು ಕೇವಲ 1 ರನ್ ಮಾತ್ರ.

8 ಪಂದ್ಯಗಳಿಂದ ಕೇವಲ 5 ರನ್​: RCB ತಂಡದಲ್ಲಿ ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್​
RCB
TV9 Web
| Updated By: ಝಾಹಿರ್ ಯೂಸುಫ್|

Updated on: Oct 10, 2021 | 5:41 PM

Share

ಪ್ಲೇ ಆಫ್ ಪಂದ್ಯಗಳಿಗೆ ಆರ್​ಸಿಬಿ ಸಜ್ಜಾಗಿದೆ. ಶಾರ್ಜಾದಲ್ಲಿ ನಡೆಯಲಿರುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ (RCB vs KKR)​ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು 2ನೇ ಕ್ವಾಲಿಫೈಯರ್ ಮ್ಯಾಚ್ ಆಡಲಿದೆ. ಹೀಗಾಗಿ ಕೆಕೆಆರ್​ ವಿರುದ್ದ ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಹಾಗಾಗಿಯೇ ಆರ್​ಸಿಬಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸಬೇಕಾಗುತ್ತದೆ. ಆದರೆ ಪ್ರಸ್ತುತ ತಂಡದಲ್ಲಿರುವ ಬಹುತೇಕ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದಾಗ್ಯೂ ಡೇನಿಯಲ್ ಕ್ರಿಶ್ಚಿಯನ್ ಮಾತ್ರ ಮಿಂಚುವಲ್ಲಿ ಎಡವುತ್ತಿರುವುದು ಆರ್​ಸಿಬಿ ಚಿಂತೆಗೆ ಕಾರಣ.

ಆಲ್​ರೌಂಡರ್​ ಡೇನಿಯಲ್ ಕ್ರಿಶ್ಚಿಯನ್ ಸತತ 4 ಪಂದ್ಯಗಳಲ್ಲಿ ಕಣಕ್ಕಿಳಿದರೂ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಅದರಲ್ಲೂ 2 ಬಾರಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಸಿದರೂ ಕಲೆಹಾಕಿದ್ದು ಕೇವಲ 1 ರನ್ ಮಾತ್ರ. ಅಷ್ಟೇ ಅಲ್ಲ, ಈ ಸೀಸನ್​ನಲ್ಲಿ ಕ್ರಿಶ್ಚಿಯನ್​ 8 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 5 ರನ್​. ಇನ್ನು ಪಡೆದಿರುವುದು 4 ವಿಕೆಟ್ ಮಾತ್ರ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಡೇನಿಯಲ್​ಗೆ ಚಾನ್ಸ್​ ನೀಡಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.

ಏಕೆಂದರೆ ಮತ್ತೊಂದೆಡೆ ಸ್ಪೋಟಕ ಬ್ಯಾಟ್ಸ್​ಮನ್ ಎನಿಸಿಕೊಂಡಿರುವ ಟಿಮ್ ಡೇವಿಡ್ ಹಾಗೂ ಸ್ಪಿನ್ನರ್ ವನಿಂದು ಹಸರಂಗ ಬೆಂಚ್ ಕಾಯುತ್ತಿದ್ದಾರೆ. ಇದೀಗ ಎಲಿಮಿನೇಟರ್ ಪಂದ್ಯ ನಡೆಯುತ್ತಿರುವುದು ಶಾರ್ಜಾ ಮೈದಾನದಲ್ಲಿ. ಈ ಮೈದಾನ ಚಿಕ್ಕದಾಗಿದ್ದರೂ ದೊಡ್ಡ ಸ್ಕೋರ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಿಗ್ ಹಿಟ್ಟರ್ ತಂಡದಲ್ಲಿದ್ದರೆ ದೊಡ್ಡ ಸ್ಕೋರ್ ಕಲೆಹಾಕಬಹುದು​. ಇತ್ತ ಡೆತ್ ಓವರ್​ನಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವ ಸಾಮರ್ಥ್ಯ ಟಿಮ್ ಡೇವಿಡ್​ ಅವರಿಗಿದೆ. ಆದರೆ ಆರ್​ಸಿಬಿ ಕೊನೆಯ 2 ಪಂದ್ಯಗಳಲ್ಲಿ ತಂಡದಲ್ಲಿ ಬದಲಾವಣೆ ಮಾಡಿಲ್ಲ ಎಂಬುದೇ ಅಚ್ಚರಿ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಬದಲಾವಣೆ ಮಾಡಲಿದ್ದಾರಾ ಎಂಬ ಪ್ರಶ್ನೆ ಕೂಡ ಮೂಡುತ್ತೆ. ಒಟ್ಟಿನಲ್ಲಿ ಸತತ ವೈಫಲ್ಯದ ಹೊರತಾಗಿ ಡೇನಿಯಲ್ ಕ್ರಿಶ್ಚಿಯನ್ ತಂಡದಲ್ಲಿದ್ದರೆ, ಮತ್ತೊಂದು ಅವಕಾಶಕ್ಕಾಗಿ ಟಿಮ್ ಡೇವಿಡ್ ಎದುರು ನೋಡುತ್ತಿದ್ದಾರೆ. ಹೀಗಾಗಿ ಎಲಿಮಿನೇಟರ್ ಪಂದ್ಯದಲ್ಲಿ ಈ ಇಬ್ಬರಲ್ಲಿ ಯಾರಿಗೆ ಚಾನ್ಸ್​ ಸಿಗಲಿದೆ ಕಾದು ನೋಡಬೇಕಿದೆ.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ