AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RR: ಡೆಲ್ಲಿ ತಂಡದಲ್ಲಿ 3 ವಿದೇಶಿಗರು, ರಾಯಲ್ಸ್ ತಂಡದಲ್ಲಿ 2 ಬದಲಾವಣೆ; ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

IPL 2021: ಉಭಯ ತಂಡಗಳು ಟೂರ್ನಿಯ ಎರಡನೇ ಹಂತವನ್ನು ಗೆಲುವಿನೊಂದಿಗೆ ಆರಂಭಿಸಿದವು. ದೆಹಲಿ, ಸನ್ ರೈಸರ್ಸ್ ವಿರುದ್ಧ ಗೆದ್ದರೆ, ರಾಜಸ್ಥಾನ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಪಡೆದುಕೊಂಡಿತು.

DC vs RR: ಡೆಲ್ಲಿ ತಂಡದಲ್ಲಿ 3 ವಿದೇಶಿಗರು, ರಾಯಲ್ಸ್ ತಂಡದಲ್ಲಿ 2 ಬದಲಾವಣೆ; ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್
ಡಿಸಿ Vs ಆರ್​ಆರ್​
TV9 Web
| Edited By: |

Updated on:Sep 25, 2021 | 4:05 PM

Share

ಐಪಿಎಲ್ 2021 ರ ದ್ವಿತೀಯಾರ್ಧದ ಮೊದಲ ಡಬಲ್ ಹೆಡರ್ ಅನ್ನು ಇಂದು ಆಡಲಾಗುತ್ತಿದೆ. ಮೊದಲ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ತಾನ ಬೌಲಿಂಗ್ ಆಯ್ದುಕೊಂಡಿದೆ. ಎರಡೂ ತಂಡಗಳು ಪ್ಲೇಯಿಂಗ್ ಇಲೆವೆನ್‌ಗೆ ಸಂಬಂಧಿಸಿದಂತೆ ತಮ್ಮ ಕಾರ್ಡ್‌ಗಳನ್ನು ತೆರೆದಿವೆ. ಭಾರತದ ಇಬ್ಬರು ಯುವ ವಿಕೆಟ್ ಕೀಪರ್‌ಗಳ ನಾಯಕತ್ವಕ್ಕೆ ಇಂದಿನ ಪಂದ್ಯವು ದೊಡ್ಡ ಪರೀಕ್ಷೆಯಾಗಿದೆ. ರಿಷಭ್ ಪಂತ್ ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರೆ, ರಾಜಸ್ಥಾನ ರಾಯಲ್ಸ್ ತಂಡದ ಆಡಳಿತ ಸಂಜು ಸ್ಯಾಮ್ಸನ್ ಕೈಯಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಎರಡೂ ತಂಡಗಳಿಗೆ ಮುಖ್ಯವಾಗಿದೆ. ಡೆಲ್ಲಿ ಗೆಲುವಿನೊಂದಿಗೆ ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತಪಡಿಸಲು ನೋಡುತ್ತದೆ. ಮತ್ತೊಂದೆಡೆ, ರಾಜಸ್ಥಾನ ತನ್ನ ಭರವಸೆಗೆ ರೆಕ್ಕೆಗಳನ್ನು ನೀಡಲು ಗೆಲುವನ್ನು ಹುಡುಕಲು ಪ್ರಯತ್ನಿಸುತ್ತದೆ.

ಉಭಯ ತಂಡಗಳು ಟೂರ್ನಿಯ ಎರಡನೇ ಹಂತವನ್ನು ಗೆಲುವಿನೊಂದಿಗೆ ಆರಂಭಿಸಿದವು. ದೆಹಲಿ, ಸನ್ ರೈಸರ್ಸ್ ವಿರುದ್ಧ ಗೆದ್ದರೆ, ರಾಜಸ್ಥಾನ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಪಡೆದುಕೊಂಡಿತು.ಈ ಋತುವಿನಲ್ಲಿ ಈ ಎರಡು ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯು ಭಾರತದಲ್ಲಿ ಮೊದಲಾರ್ಧದಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಿತು, ಇದರಲ್ಲಿ ರಾಜಸ್ಥಾನವು ಡೇವಿಡ್ ಮಿಲ್ಲರ್ ಮತ್ತು ಕ್ರಿಸ್ ಮೋರಿಸ್ ಬಲದಿಂದ ದೆಹಲಿಯನ್ನು ಸೋಲಿಸಿತು.

ಎರಡೂ ತಂಡಗಳು ಹೀಗಿವೆ: ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲೆವೆನ್ ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಲಲಿತ್ ಯಾದವ್, ಶಿಮ್ರಾನ್ ಹೆಟ್ಮೀರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಕಾಗಿಸೊ ರಬಾಡಾ, ಎನ್ರಿಕ್ ನಾರ್ಖಿಯಾ, ಅವೇಶ್ ಖಾನ್

ರಾಜಸ್ಥಾನ ರಾಯಲ್ಸ್ ತಂಡ ಡೇವಿಡ್ ಮಿಲ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಲಿಯಾಮ್ ಲಿವಿಂಗ್ಸ್ಟನ್, ಮಹಿಪಾಲ್ ಲೊಮರ್, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ತಬ್ರೇಜ್ ಶಮ್ಸಿ, ಚೇತನ್ ಸಕಾರಿಯಾ, ಕಾರ್ತಿಕ್ ತ್ಯಾಗಿ, ಮುಸ್ತಫಿಜುರ್ ರಹಮಾನ್

Published On - 3:21 pm, Sat, 25 September 21

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು