AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ರಾಜಸ್ಥಾನ್ ಮಣಿಸಿ ನಂ.1 ಪಟ್ಟಕ್ಕೇರಿದ ಡೆಲ್ಲಿ; ನಾಯಕ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ವ್ಯರ್ಥ

IPL 2021: ರಾಜಸ್ಥಾನ ಪರ ನಾಯಕ ಸಂಜು ಸ್ಯಾಮ್ಸನ್ ಅತ್ಯಧಿಕ ಅಜೇಯ 70 ರನ್ ಗಳಿಸಿದರು. ರಾಜಸ್ಥಾನ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಲಷ್ಟೇ ಶಕ್ತವಾಯಿತು.

IPL 2021: ರಾಜಸ್ಥಾನ್ ಮಣಿಸಿ ನಂ.1 ಪಟ್ಟಕ್ಕೇರಿದ ಡೆಲ್ಲಿ; ನಾಯಕ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ವ್ಯರ್ಥ
ಡೆಲ್ಲಿ ಕ್ಯಾಪಿಟಲ್ಸ್
TV9 Web
| Edited By: |

Updated on: Sep 25, 2021 | 7:37 PM

Share

ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್ 2021) 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ 33 ರನ್ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಶ್ರೇಯಸ್ ಅಯ್ಯರ್ ದೆಹಲಿ ಪರ 43 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರು. ಈ ಗೆಲುವಿನೊಂದಿಗೆ ದೆಹಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಯ್ಯರ್ 32 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದರೆ, ಹೆಟ್ಮೀರ್ 16 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 28 ರನ್ ಗಳಿಸಿದರು. ರಾಜಸ್ತಾನ ಪರ ಮುಸ್ತಫಿಜುರ್ ರೆಹಮಾನ್ ಮತ್ತು ಚೇತನ್ ಸಕಾರಿಯಾ ತಲಾ ಎರಡು ವಿಕೆಟ್ ಪಡೆದರು.

ಈ ಗೆಲುವಿನ ನಂತರ, ದೆಹಲಿ ಕ್ಯಾಪಿಟಲ್ಸ್ 16 ಅಂಕಗಳನ್ನು ಹೊಂದಿದೆ ಮತ್ತು ಪ್ಲೇಆಫ್‌ಗೆ ಹೋಗುವುದು ಬಹುತೇಕ ಖಚಿತವಾಗಿದೆ. ರಾಜಸ್ಥಾನ ಪರ ನಾಯಕ ಸಂಜು ಸ್ಯಾಮ್ಸನ್ ಅತ್ಯಧಿಕ ಅಜೇಯ 70 ರನ್ ಗಳಿಸಿದರು. ರಾಜಸ್ಥಾನ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಲಷ್ಟೇ ಶಕ್ತವಾಯಿತು. ರಿಯಾನ್ ಪರಾಗ್‌ನಿಂದ ದೊಡ್ಡ ಸ್ಕೋರ್ ನಿರೀಕ್ಷಿಸಲಾಗಿತ್ತು. ಆದರೆ ಅಕ್ಷರ್ ಪಟೇಲ್ ಅವರ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದರು. ಪರಾಗ್ ಕೇವಲ ಎರಡು ರನ್ ಗಳಿಸಿದರು.

ಟಾಸ್ ಗೆದ್ದ ರಾಜಸ್ಥಾನ ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ ಮಾಡಿದ ನಂತರ ಮೊದಲ ಮೂರು ಓವರ್​ಗಳಲ್ಲಿ ಮುಸ್ತಫಿಜುರ್ ರೆಹಮಾನ್, ಮಹಿಪಾಲ್ ಲೊಮರ್ ಮತ್ತು ಚೇತನ್ ಸಕಾರಿಯಾ ಕೇವಲ 18 ರನ್ ಬಿಟ್ಟುಕೊಟ್ಟರು. ಇದರ ಲಾಭ ಹಿಂದಿನ ಪಂದ್ಯದ ನಾಯಕ, ಯುವ ವೇಗದ ಬೌಲರ್ ಕಾರ್ತಿಕ್ ತ್ಯಾಗಿಗೆ (40 ರನ್​ಗಳಿಗೆ ಒಂದು ವಿಕೆಟ್) ಹೋಯಿತು. ಅವರು ನಾಲ್ಕನೇ ಓವರ್‌ನ ಮೊದಲ ಎಸೆತದಲ್ಲಿ ಅನುಭವಿ ಶಿಖರ್ ಧವನ್‌ ಅವರನ್ನು ಔಟ್ ಮಾಡಿದರು. ಕೊನೆಯ ಐದು ಓವರ್‌ಗಳಲ್ಲಿ ಕೇವಲ ಐದು ಬೌಂಡರಿಗಳನ್ನು ಬಾರಿಸಿದ ನಂತರವೂ ದೆಹಲಿ ತಂಡವು 50 ರನ್ ಗಳಿಸಲು ಸಾಧ್ಯವಾಯಿತು.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?