AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs DC: ಟಾಸ್​ ಗೆದ್ದ ಡೆಲ್ಲಿ; ಎರಡೂ ತಂಡಗಳಲ್ಲಿ ಒಂದೊಂದು ಬದಲಾವಣೆ.. ಪ್ಲೇಯಿಂಗ್ ಇಲೆವೆನ್ ಹೀಗಿದೆ

IPL 2021: ಇಂದಿನ ಯುದ್ಧ ಶಾರ್ಜಾದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಡೆಲ್ಲಿ ತಂಡ ಬೌಲಿಂಗ್ ಆಯ್ದುಕೊಂಡಿದೆ. ಜೊತೆಗೆ ಎರಡೂ ತಂಡಗಳ ನಾಯಕರು ಕೂಡ ಪ್ಲೇಯಿಂಗ್ ಇಲೆವನ್‌ಗೆ ಸಂಬಂಧಿಸಿದಂತೆ ತಮ್ಮ ಕಾರ್ಡ್‌ಗಳನ್ನು ತೆರೆದಿದ್ದಾರೆ.

MI vs DC: ಟಾಸ್​ ಗೆದ್ದ ಡೆಲ್ಲಿ; ಎರಡೂ ತಂಡಗಳಲ್ಲಿ ಒಂದೊಂದು ಬದಲಾವಣೆ.. ಪ್ಲೇಯಿಂಗ್ ಇಲೆವೆನ್ ಹೀಗಿದೆ
ರೋಹಿತ್, ಪಂತ್
TV9 Web
| Edited By: |

Updated on:Oct 02, 2021 | 3:19 PM

Share

ಐಪಿಎಲ್ 2021 ರಲ್ಲಿ ಇಂದು ಡಬಲ್ ಹೆಡರ್ ಪಂದ್ಯ ಇದೆ. ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಇಂದಿನ ಯುದ್ಧ ಶಾರ್ಜಾದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಡೆಲ್ಲಿ ತಂಡ ಬೌಲಿಂಗ್ ಆಯ್ದುಕೊಂಡಿದೆ. ಜೊತೆಗೆ ಎರಡೂ ತಂಡಗಳ ನಾಯಕರು ಕೂಡ ಪ್ಲೇಯಿಂಗ್ ಇಲೆವನ್‌ಗೆ ಸಂಬಂಧಿಸಿದಂತೆ ತಮ್ಮ ಕಾರ್ಡ್‌ಗಳನ್ನು ತೆರೆದಿದ್ದಾರೆ. ಇಂದಿನ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್​ಗೆ ಗೆಲುವು ಬಹಳ ಮುಖ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಮುಂಬೈ ಸೋತರೆ, ಅವರ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಮತ್ತೊಂದೆಡೆ, ದೆಹಲಿ ತಂಡವು ಪ್ಲೇಆಫ್‌ಗೆ ಟಿಕೆಟ್ ಪಡೆದುಕೊಂಡಿದೆ. ಹಾಗಾಗಿ ಅವರು ಕೇವಲ 2 ನೇ ಸ್ಥಾನದಲ್ಲಿ ಉಳಿಯಲು ಪ್ರಯತ್ನಿಸುತ್ತಾರೆ. ಅದೇ ಸಮಯದಲ್ಲಿ, ಮುಂಬೈ ಇಂಡಿಯನ್ಸ್‌ಗೆ ಈ ಗೆಲುವು ಅನಿವಾರ್ಯ. ಅವರು ಈ ಪಂದ್ಯವನ್ನು ಗೆದ್ದರೆ, ಪ್ಲೇಆಫ್ ಹಾದಿ ಸುಗಮವಾಗಲಿದೆ.

ಉಭಯ ತಂಡಗಳ ಆಡುವ XI ನಲ್ಲಿ 1-1 ಬದಲಾವಣೆ ದೆಹಲಿ ಮತ್ತು ಮುಂಬೈ ಎರಡೂ ತಮ್ಮ ತಂಡಗಳಲ್ಲಿ ಬದಲಾವಣೆ ಮಾಡಿವೆ. ಲಲಿತ್ ಯಾದವ್ ಬದಲಿಗೆ ಪೃಥ್ವಿ ಶಾ ಅವರಿಗೆ ದೆಹಲಿ ಅವಕಾಶ ನೀಡಿದೆ. ಅದೇ ಸಮಯದಲ್ಲಿ, ಮುಂಬೈ ತಂಡದಲ್ಲಿ ರಾಹುಲ್ ಚಹರ್ ಬದಲಿಗೆ ಜಯಂತ್ ಯಾದವ್ ಅವರಿಗೆ ಅವಕಾಶ ಸಿಕ್ಕಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲ್ಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲೆವೆನ್ ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ), ಶಿಮ್ರಾನ್ ಹೆಟ್ಮೀರ್, ಸ್ಟೀವ್ ಸ್ಮಿತ್, ಅಕ್ಸರ್ ಪಟೇಲ್, ಆರ್. ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಎನ್ರಿಕ್ ನಾರ್ಖಿಯಾ

Published On - 3:16 pm, Sat, 2 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ