AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮುಂಬೈ ಇಂಡಿಯನ್ಸ್​ಗೆ ಸೋಲಾಗಲಿ! ರೋಹಿತ್ ತಂಡಕ್ಕೆ ವೀರೇಂದ್ರ ಸೆಹ್ವಾಗ್ ಶಾಪ ಹಾಕಿದ್ಯಾಕೆ?

IPL 2021: ಈ ವರ್ಷ ಮುಂಬೈ ಇಂಡಿಯನ್ಸ್ ಅಗ್ರಸ್ಥಾನಕ್ಕೇರುವುದು ನನಗೆ ಇಷ್ಟವಿಲ್ಲ. ಮುಂಬೈ ಬದಲಿಗೆ ಹೊಸ ತಂಡ ಅರ್ಹತೆ ಪಡೆಯಬೇಕು ಮತ್ತು ನಾವು ಹೊಸ ಚಾಂಪಿಯನ್ ಪಡೆಯಬೇಕು ಎಂದು ಹೇಳಿದರು.

IPL 2021: ಮುಂಬೈ ಇಂಡಿಯನ್ಸ್​ಗೆ ಸೋಲಾಗಲಿ! ರೋಹಿತ್ ತಂಡಕ್ಕೆ ವೀರೇಂದ್ರ ಸೆಹ್ವಾಗ್ ಶಾಪ ಹಾಕಿದ್ಯಾಕೆ?
ಮುಂಬೈ ಇಂಡಿಯನ್ಸ್​
TV9 Web
| Edited By: |

Updated on: Oct 02, 2021 | 2:43 PM

Share

ಐಪಿಎಲ್ 2021ರಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಕ್ಕೆ ತುಂಬಾ ನಿರಾಶಾದಾಯಕವಾಗಿದೆ. ಕಳೆದ ಋತುವಿನ ಚಾಂಪಿಯನ್ ಈ ಬಾರಿ ಪ್ಲೇಆಫ್‌ಗೆ ಪ್ರವೇಶಿಸಲು ಹೆಣಗಾಡುತ್ತಿದ್ದಾರೆ. ಈ ತಂಡವು 11 ಪಂದ್ಯಗಳಿಂದ ಐದು ಗೆಲುವು ಮತ್ತು 10 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಅಭಿಮಾನಿಗಳು ತಂಡದ ಮರಳುವಿಕೆಗಾಗಿ ಕಾಯುತ್ತಿದ್ದಾರೆ. ಆದಾಗ್ಯೂ, ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್​ಗೆ ಮುಂಬೈ ತಂಡ ಮತ್ತೊಮ್ಮೆ ಚಾಂಪಿಯನ್ ಆಗುವುದು ಇಷ್ಟವಿಲ್ಲ ಎಂದು ಕಾಣುತ್ತದೆ. ಇದಕ್ಕೆ ಅವರು ನೀಡಿರುವ ಹೇಳಿಕೆಯೇ ಸಾಕ್ಷಿಯಾಗಿದೆ.

ಮುಂಬೈ ಇಂಡಿಯನ್ಸ್ ತಂಡಕ್ಕೆ ಎರಡನೇ ಹಂತದ ಐಪಿಎಲ್​ನ ಪಯಣ ಸುಲಭವಲ್ಲ. ಯುಎಇಗೆ ಬಂದ ನಂತರ, ಅವರು ಸತತ ಮೂರು ಪಂದ್ಯಗಳಲ್ಲಿ ಸೋಲನ್ನು ಎದುರಿಸಿಬೇಕಾಯಿತು. ಇದರ ನಂತರ, ತಂಡವು ತನ್ನ ಪ್ಲೇಆಫ್ ಭರವಸೆಯನ್ನು ಜೀವಂತವಾಗಿಟ್ಟುಕೊಂಡು ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತು. ಮುಂಬೈ ಇಂಡಿಯನ್ಸ್ ಮೂರು ಪಂದ್ಯಗಳ ರೂಪದಲ್ಲಿ ಮೂರು ಅವಕಾಶಗಳನ್ನು ಹೊಂದಿದೆ. ಅವರು ಮೂರರಲ್ಲಿ ಗೆದ್ದರೆ, ಪ್ಲೇಆಫ್‌ಗೆ ಅರ್ಹತೆ ಪಡೆಯಲು ಎಲ್ಲ ಅವಕಾಶಗಳನ್ನು ಹೊಂದಿರುತ್ತಾರೆ. ಆದರೆ ಮುಂಬೈ ಮತ್ತೊಮ್ಮೆ ಚಾಂಪಿಯನ್‌ ಆಗುವುದು ವೀರೇಂದ್ರ ಸೆಹ್ವಾಗ್​ಗೆ ಇಷ್ಟವಿಲ್ಲ. ಐಪಿಎಲ್ 2021 ರಲ್ಲಿ ಅಭಿಮಾನಿಗಳು ಹೊಸ ಚಾಂಪಿಯನ್ ನೋಡಲು ಅವಕಾಶ ಪಡೆಯಬೇಕು ಎಂದು ಸೆಹ್ವಾಗ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಹೊಸ ಚಾಂಪಿಯನ್ ಬೇಕೆಂದ ವೀರೇಂದ್ರ ಸೆಹ್ವಾಗ್ ಕ್ರಿಕ್ ಬಜ್ ಜೊತೆ ಮಾತನಾಡಿದ ಮಾಜಿ ಭಾರತೀಯ ಓಪನರ್, ಈ ವರ್ಷ ಮುಂಬೈ ಇಂಡಿಯನ್ಸ್ ಅಗ್ರಸ್ಥಾನಕ್ಕೇರುವುದು ನನಗೆ ಇಷ್ಟವಿಲ್ಲ. ಮುಂಬೈ ಬದಲಿಗೆ ಹೊಸ ತಂಡ ಅರ್ಹತೆ ಪಡೆಯಬೇಕು ಮತ್ತು ನಾವು ಹೊಸ ಚಾಂಪಿಯನ್ ಪಡೆಯಬೇಕು ಎಂದು ಹೇಳಿದರು. ಅದು ಬೆಂಗಳೂರು, ದೆಹಲಿ ಅಥವಾ ಪಂಜಾಬ್ ಆಗಿರಬಹುದು. ಆದರೂ ಮುಂಬೈ ಇಂಡಿಯನ್ಸ್‌ಗೆ ಪ್ಲೇಆಫ್‌ ಹಾದಿ ಸುಲಭವಲ್ಲ. ಈ ಬಗ್ಗೆ ಮಾತನಾಡಿದ ಸೆಹ್ವಾಗ್, ಐಪಿಎಲ್‌ನಲ್ಲಿ ಮುಂಬೈ ಅತ್ಯುತ್ತಮ ತಂಡವಾಗಿದೆ ಮತ್ತು ಪ್ರತಿದಾಳಿ ಮಾಡುವುದು ಹೇಗೆ ಎಂದು ತಿಳಿದಿದೆ. ಆದರೆ ಮುಂಬೈ ಪ್ಲೇಆಫ್‌ಗೆ ಹೋಗಲು ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕು, ಆಗ ಮಾತ್ರ ಅದನ್ನು ತಲುಪಲು ಸಾಧ್ಯವಾಗುತ್ತದೆ. ಆದಾಗ್ಯೂ, ಮುಂಬಯಿಗೆ ಮುಂಬರುವ ಎಲ್ಲಾ ಪಂದ್ಯಗಳು ಅಷ್ಟು ಸುಲಭವಲ್ಲ.

ಇತಿಹಾಸ ಮುಂಬೈ ಇಂಡಿಯನ್ಸ್‌ ಹೆಸರಿನಲ್ಲಿದೆ ಕೆಲವೊಮ್ಮೆ ನೀವು ಗೆಲ್ಲಲು ಹಂಬಲಿಸಿದಾಗ ನೀವು ತಪ್ಪುಗಳನ್ನು ಮಾಡುತ್ತೀರಿ ಮತ್ತು ಆ ತಪ್ಪುಗಳು ನಿಮ್ಮ ಸೋಲಿಗೆ ಕಾರಣವಾಗುತ್ತವೆ, ಆದರೆ ಮುಂಬೈನ ಇತಿಹಾಸವನ್ನು ನೋಡಿದಾಗ, ಅವರು ಪಂದ್ಯವನ್ನು ಗೆಲ್ಲಬೇಕಾದರೆ ಮಾಡಿ ಇಲ್ಲವೆ ಮಡಿ ಎಂಬಂತೆ ಹೋರಾಡುತ್ತಾರೆ. ನಂತರ ಅವರು ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತಾರೆ. ಆದ್ದರಿಂದ, ನಾವು ಇತಿಹಾಸವನ್ನು ನೋಡಿದರೆ, ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಇತಿಹಾಸವನ್ನು ಪುನರಾವರ್ತಿಸಬಹುದು, ಆದರೆ ನಾನು ಇತಿಹಾಸವನ್ನು ಹೆಚ್ಚು ನಂಬುವುದಿಲ್ಲ ಎಂದು ಸೆಹ್ವಾಗ್ ಹೇಳಿದ್ದಾರೆ.

ಇದನ್ನೂ ಓದಿ:ಗಂಗೂಲಿ ಅಥವಾ ಧೋನಿ ಈ ಇಬ್ಬರಲ್ಲಿ ಯಾರು ಅತ್ಯುತ್ತಮ ನಾಯಕ? ಒಂದೇ ಪದದಲ್ಲಿ ಉತ್ತರಿಸಿದ ಸೆಹ್ವಾಗ್

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ