AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಆರ್​ಸಿಬಿ-ಡೆಲ್ಲಿ ರೋಚಕ ಪಂದ್ಯ ವೀಕ್ಷಣೆ  ಮಾಡಿದ ಬಿಎಸ್ ಯಡಿಯೂರಪ್ಪ: ಫೋಟೋ ವೈರಲ್

IPL 2021, RCB vs DC: ಆರ್​ಸಿಬಿ ಹಾಗೂ ಡೆಲ್ಲಿ ನಡುವಣ ರೋಚಕ ಪಂದ್ಯವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವೀಕ್ಷಣೆ  ಮಾಡಿದ್ದಾರೆ. ಅದುಕೂಡ ತಮ್ಮ ಕಾರಿನಲ್ಲಿ ಕುಳಿತುಕೊಂಡು ಎಂಬುದು ವಿಶೇಷ.

BS Yediyurappa: ಆರ್​ಸಿಬಿ-ಡೆಲ್ಲಿ ರೋಚಕ ಪಂದ್ಯ ವೀಕ್ಷಣೆ  ಮಾಡಿದ ಬಿಎಸ್ ಯಡಿಯೂರಪ್ಪ: ಫೋಟೋ ವೈರಲ್
BS Yediyurappa RCB Vs DC Match
TV9 Web
| Updated By: Vinay Bhat|

Updated on: Oct 09, 2021 | 1:42 PM

Share

20ನೇ ಓವರ್​ನ ಕೊನೇಯ ಎಸೆತದಲ್ಲಿ 5 ರನ್‌ ಗಳಿಸುವ ಅಗತ್ಯವಿದ್ದಾಗ ಲಾಂಗ್‌ ಆನ್‌ ಕಡೆಗೆ ಭರ್ಜರಿ ಸಿಕ್ಸರ್‌ ಸಿಡಿಸಿದ ಶ್ರೀಕರ್‌ ಭರತ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಎದುರು 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 2021 ಟೂರ್ನಿಯ 55ನೇ ಲೀಗ್‌ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

ಗೆಲ್ಲಲು 165 ರನ್‌ಗಳ ಕಠಿಣ ಗುರಿ ಬೆನ್ನತ್ತಿದ್ದ ಆರ್‌ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 166 ರನ್‌ ಬಾರಿಸಿ ಅಂಕಪಟ್ಟಿಯ ಅಗ್ರಸ್ಥಾನಿ ಕ್ಯಾಪಿಟಲ್ಸ್‌ ಎದುರು ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಇನಿಂಗ್ಸ್‌ ಆರಂಭದಲ್ಲೇ ದೇವದತ್‌ ಪಡಿಕ್ಕಲ್‌ (0) ಮತ್ತು ವಿರಾಟ್‌ ಕೊಹ್ಲಿ (4) ವಿಕೆಟ್‌ ಕಳೆದುಕೊಂಡ ಆರ್‌ಸಿಬಿಗೆ ಎಬಿ ಡಿ’ವಿಲಿಯರ್ಸ್‌ (26) ಆಸರೆಯಾಗುವಲ್ಲಿ ವಿಫಲರಾದರು. ಆದರೆ, 4ನೇ ವಿಕೆಟ್‌ಗೆ ಜೊತೆಯಾದ ಶ್ರೀಕರ್‌ ಭರತ್ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ (ಅಜೇಯ 51) ಮುರಿಯದ 111 ರನ್‌ಗಳ ಮನಮೋಹಕ ಜೊತೆಯಾಟ ಆಡಿ ತಂಡವನ್ನು ಜಯದ ದಡ ಮುಟ್ಟಿಸಿದರು.

ಈ ರೋಚಕ ಪಂದ್ಯವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವೀಕ್ಷಣೆ  ಮಾಡಿದ್ದಾರೆ. ಅದುಕೂಡ ತಮ್ಮ ಕಾರಿನಲ್ಲಿ ಕುಳಿತುಕೊಂಡು ಎಂಬುದು ವಿಶೇಷ. ಹೌದು ರೋಚಕ  ಪಂದ್ಯವನ್ನು ವೀಕ್ಷಿಸಿ ಮಾಜಿ ಸಿಎಂ  ಬಿಎಸ್​ವೈ ಎಂಜಾಯ್  ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ವೈರಲ್ ಆಗುತ್ತಿದೆ.

ಚೊಚ್ಚಲ ಐಪಿಎಲ್ ಕಿರೀಟ ಎದುರು ನೋಡುತ್ತಿರುವ ಆರ್‌ಸಿಬಿ ತಂಡವೀಗ ಅಕ್ಟೋಬರ್ 11, ಸೋಮವಾರ ನಡೆಯಲಿರುವ ಎಲಿಮಿನೇಟರ್ ಹಣಾಹಣಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ. ಈ ಹಿಂದೆ 2009, 2011 ಹಾಗೂ 2016ರಲ್ಲಿ ಮೂರು ಬಾರಿ ರನ್ನರ್-ಅಪ್ ಪ್ರಶಸ್ತಿ ಗೆದ್ದಿರುವುದು ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿಯ ಶ್ರೇಷ್ಠ ಸಾಧನೆಯಾಗಿದೆ.

RCB, IPL 2021: ಭರತ್ ಸಿಕ್ಸರ್ ನಡುವೆ ಮರೆಯದಿರಿ ಐಪಿಎಲ್​ನಲ್ಲಿ ಆರ್​ಸಿಬಿ ಮಾಡಿರುವ ಈ ಹೊಸ ದಾಖಲೆ

Srikar Bharat: ಕೊನೇಯ ಬಾಲ್​ನಲ್ಲಿ ಸಿಕ್ಸ್: ನಿನ್ನೆಯ ಒಂದೇ ಪಂದ್ಯದಲ್ಲಿ ಶ್ರೀಕರ್ ಭರತ್​ಗೆ ಸಿಕ್ಕ ಹಣವೆಷ್ಟು ಗೊತ್ತಾ?

(IPL 2021 Former Karnataka CM BS Yediyurappa Watching RCB Vs DC Match Photo Goes Viral On Social Media)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ