AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಇಂದು ಬಹುನಿರೀಕ್ಷೆಯ ಆರ್​ಸಿಬಿ ಪಂದ್ಯ: ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ ಕೆಕೆಆರ್

KKR vs RCB: ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 27 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ 14 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021: ಇಂದು ಬಹುನಿರೀಕ್ಷೆಯ ಆರ್​ಸಿಬಿ ಪಂದ್ಯ: ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ ಕೆಕೆಆರ್
KKR vs RCB
TV9 Web
| Updated By: Vinay Bhat|

Updated on: Sep 20, 2021 | 7:14 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ (IPL 2021) ಎರಡನೇ ಚರಣದಲ್ಲಿಂದು ಬಿಗ್ ಮ್ಯಾಚ್ ನಡೆಯಲಿದೆ. ಈ ಬಾರಿಯಾದರೂ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಛಲದೊಂದಿಗೆ ಮುನ್ನುಗ್ಗುತ್ತಿರುವ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (KKRvsRCB) ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಅಬುಧಾಬಿಯ (Abu Dhabi) ಶೇಕ್ ಝಯೇದ್ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಕೆಕೆಆರ್ ಪಾಯಿಂಟ್ ಪಟ್ಟಿಯಲ್ಲಿ ಪಾತಾಳದಲ್ಲಿದ್ದರೂ ತಂಡದ ಬಲವನ್ನು ಕಡೆಗಣಿಸುವಂತಿಲ್ಲ. ಹೀಗಾಗಿ ಉಭಯ ತಂಡಗಳ ನಡುವಣ ಕಾಳಗ ಕುತೂಹಲ ಕೆರಳಿಸಿದೆ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಆರ್​ಸಿಬಿ ತಂಡ ಒಟ್ಟು ಏಳು ಪಂದ್ಯಗಳನ್ನು ಆಡಿದ್ದು ಐದರಲ್ಲಿ ಗೆಲುವು ಸಾಧಿಸಿ ಕೇವಲ ಎರಡರಲ್ಲಷ್ಟೆ ಸೋತಿದೆ. 10 ಅಂಕದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ, ಆರ್​ಸಿಬಿಯ ನೆಟ್ ರನ್​ರೇಟ್ -0.171 ಇಂದು ಇದನ್ನು ಪ್ಲಸ್ ಆಗಿ ಕನ್ವರ್ಟ್ ಮಾಡಬೇಕಿದೆ. ಇತ್ತ ಕೆಕೆಆರ್ ಆಡಿದ ಏಳು ಪಂದ್ಯಗಳಲ್ಲಿ ಕೇವಲ 2 ರಲ್ಲಷ್ಟೆ ಗೆದ್ದಿದ್ದು, 6 ಪಂದ್ಯಗಳಲ್ಲಿ ಸೋಲುಕಂಡು 4 ಅಂಕದೊಂದಿಗೆ 7ನೇ ಸ್ಥಾನದಲ್ಲಿದೆ. ಹೀಗಾಗಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಕೆಕೆಆರ್​ಗೆ ಇದು ಮಹತ್ವದ ಪಂದ್ಯವಾಗಿದೆ.

ಮೊದಲ ಚರಣದಲ್ಲಿ ಆರ್​ಸಿಬಿ ಬ್ಯಾಟಿಂಗ್-ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿತ್ತು. ಈಗ ಮೇಲ್ನೋಟಕ್ಕೆ ಕೊಹ್ಲಿ ಪಡೆಯ ಬೌಲಿಂಗ್ ವಿಭಾಗ ಮತ್ತಷ್ಟು ಕಠಿಣವಾಗಿದೆ. ಇದು ತಂಡದ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಯುಜ್ವೇಂದ್ರ ಚಾಹಲ್​ಗೆ ಸಾಥ್ ನೀಡಲು ಲಂಕಾ ಸ್ಪಿನ್ನರ್ ವಾನಿಂದು ಹಸರಂಗ ಇದ್ದು ಇವರ ಪ್ರದರ್ಶನದ ಮೇಲೆ ಎಲ್ಲರ ಕಣ್ಣಿದೆ. ವೇಗಿಗಳ ಪೈಕಿ ಹರ್ಷಲ್ ಪಟೇಲ್ ಈ ಬಾರಿ ಗರಿಷ್ಠ ವಿಕೆಟ್ ಪಡೆದವರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಕೈಲ್ ಜೇಮಿಸನ್ ಹಾಗೂ ಮೊಹಮ್ಮದ್ ಸಿರಾಜ್ ಮಾರಕವಾಗಿ ಗೋಚರಿಸಲಿದ್ದಾರೆ.

ಇನ್ನೂ ಬ್ಯಾಟಿಂಗ್ ವಿಭಾಗವೂ ಬಲಿಷ್ಠವಾಗಿದೆ. ಓಪನರ್​ಗಳಾಗಿ ನಾಯಕ ವಿರಾಟ್ ಕೊಹ್ಲಿ ಜೊತೆ ದೇವದತ್ ಪಡಿಕ್ಕಲ್ ಕಣಕ್ಕಿಳಿಯಲಿದ್ದಾರೆ. ರಜತ್ ಪಟಿದಾರ್, ಗ್ಲೆನ್ ಮ್ಯಾಕ್ಸ್​ವೆಲ್, ಎಬಿ ಡಿವಿಲಿಯರ್ಸ್ ತಂಡದ ಪ್ರಮುಖ ಬ್ಯಾಟಿಂಗ್ ಅಸ್ತ್ರ. ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಮೊಹಮ್ಮದ್ ಅಜರುದ್ದೀನ್​ಗೆ ಅವಕಾಶ ನೀಡಿದರೆ ಅಚ್ಚರಿ ಪಡಬೇಕಿಲ್ಲ.

ಇತ್ತ ಕೆಕೆಆರ್ ತಂಡ ಬಿಗ್ ಹಿಟ್ಟರ್​ಗಳಿಂದ ಕೂಡಿದೆ. ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ ನಾಯಕ ಇಯಾನ್ ಮಾರ್ಗನ್ ಹಾಗೂ ದಿನೇಶ್ ಕಾರ್ತಿಕ್ ಒಂದುಕಡೆಯಾದರೆ, ಆಂಡ್ರೊ ರಸೆಲ್ ಅಬ್ಬರಿಸಲು ತಯಾರಾಗಿದ್ದಾರೆ, ವಿಶೇಷ ಎಂದರೆ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ರಸೆಲ್ ಹಾಗೂ ಸುನಿಲ್ ನರೈನ್ ಅವರ ಸ್ಟ್ರೈಕ್​ರೇಟ್ 200ಕ್ಕೂ ಅಧಿಕವಿದೆ. ಬೌಲಿಂಗ್​ನಲ್ಲಿ ವರುಣ್ ಚಕ್ರವರ್ತಿ ಹಾಗೂ ಪ್ರಸಿದ್ಧ್ ಕೃಷ್ಣ ಮೇಲೆ ಹೆಚ್ಚು ನಂಬಿಕೊಂಡಿದೆ. ಲೂಕಿ ಫರ್ಗುಸನ್ ಹಾಗೂ ಕಮಲೇಶ್ ನಾಗರಕೋಟಿಯೂ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಟೂರ್ನಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಏಪ್ರಿಲ್ 18ರಂದು ಚೆನ್ನೈನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಆರ್‌ಸಿಬಿ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ (78) ಮತ್ತು ಎಬಿ ಡಿವಿಲಿಯರ್ಸ್‌ (76*) ಜೋಡಿಯ ಭರ್ಜರಿ ಆಟದಿಂದ 4 ವಿಕೆಟ್‌ಗೆ 204 ರನ್ ಪೇರಿಸಿತ್ತು. ಪ್ರತಿಯಾಗಿ ಕೆಕೆಆರ್ 8 ವಿಕೆಟ್‌ಗೆ 166 ರನ್ ಗಳಿಸಲಷ್ಟೇ ಶಕ್ತವಾಗಿ 38 ರನ್‌ಗಳಿಂದ ಶರಣಾಗಿತ್ತು.

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 27 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ 14 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021: RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ ಘೋಷಣೆ

IPL 2021: ವನಿಂದು ಹಸರಂಗ vs ಟಿಮ್ ಡೇವಿಡ್: ಯಾರಿಗೆ ಸಿಗಲಿದೆ ಚೊಚ್ಚಲ ಚಾನ್ಸ್​

(IPL 2021 KKR vs RCB 31st Match: Kolkata Knight Riders clashing against Royal Challengers Bangalore)

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್