AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021, KKR vs RCB: ಹೀನಾಯ ಪ್ರದರ್ಶನದ ಬಳಿಕ ಕೆಕೆಆರ್ ಸ್ಫೋಟಕ ಬ್ಯಾಟ್ಸ್​ಮನ್​ಗೆ ಕೊಹ್ಲಿ ಬ್ಯಾಟಿಂಗ್ ಟಿಪ್ಸ್

Venkatesh Iyer: ಆರ್​ಸಿಬಿ ತಂಡದ ಹೀನಾಯ ಸೋಲಿನ ನಡುವೆಯೂ ಕೆಕೆಆರ್ ತಂಡದ ಆಟಗಾರ ವೆಂಕಟೇಶ್ ಅಯ್ಯರ್​ಗೆ ವಿರಾಟ್ ಕೊಹ್ಲಿ ಪಂದ್ಯ ಮುಗಿದ ಬಳಿಕ ಬ್ಯಾಟಿಂಗ್ ಟಿಪ್ಸ್ ನೀಡಿದರು.

IPL 2021, KKR vs RCB: ಹೀನಾಯ ಪ್ರದರ್ಶನದ ಬಳಿಕ ಕೆಕೆಆರ್ ಸ್ಫೋಟಕ ಬ್ಯಾಟ್ಸ್​ಮನ್​ಗೆ ಕೊಹ್ಲಿ ಬ್ಯಾಟಿಂಗ್ ಟಿಪ್ಸ್
Virat Kohli and Venkatesh Iyer
TV9 Web
| Edited By: |

Updated on: Sep 21, 2021 | 10:16 AM

Share

ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡದ ಬೌಲಿಂಗ್ ದಾಳಿಗೆ ತೆಗೆಲೆಯಂತೆ ಉರುಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಬ್ಯಾಟ್ಸ್​ಮನ್​ಗಳು ಕೇವಲ 92 ರನ್​ಗೆ ಸರ್ವಪತನ ಕಂಡಿತು. ನೀಲಿ ಜೆರ್ಸಿಯೊಂದಿಗೆ ಕಣಕ್ಕಿಳಿದ ಆರ್​ಸಿಬಿಗೆ (RCB) ಲಕ್ ಒಲಿಯಲಿಲ್ಲ. ಕೋಲ್ಕತ್ತಾ ತಂಡ ಕೇವಲ 10 ಓವರ್​ನಲ್ಲಿ 94 ರನ್ ಸಿಡಿಸಿ ಅಮೋಘ ಗೆಲುವು ಕಂಡಿತು. ಅದರಲ್ಲೂ ಕೆಕೆಆರ್ (KKR) ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ ವೆಂಕಟೇಶ್ ಅಯ್ಯರ್ (Venkatesh Iyer) ತನ್ನ ಚೊಚ್ಚಲ ಐಪಿಎಲ್ ಪಂದ್ಯದಲ್ಲೇ ಕೇವಲ 27 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್ ಬಾರಿಸಿ ಅಜೇಯ 41 ರನ್ ಚಚ್ಚಿದರು. ಅಯ್ಯರ್ ಅವರ ಒಂದೊಂದು ಹೊಡೆತ ಮನಮೋಹಕವಾಗಿತ್ತು. ಯಂಗ್​ಸ್ಟಾರ್ಸ್​ಗೆ ಸದಾ ಉತ್ಸಾಹ ತುಂಬುವ, ಬ್ಯಾಟಿಂಗ್ ಟಿಪ್ಸ್ ನೀಡುವ ವಿರಾಟ್ ಕೊಹ್ಲಿ (Virat Kohli) ವೆಂಕಟೇಶ್​​ಗೂ ಕೆಲವು ಬ್ಯಾಟಿಂಗ್ ಟಿಪ್ಸ್ ನೀಡಿದರು.

ಆರ್​ಸಿಬಿ ತಂಡದ ಹೀನಾಯ ಸೋಲಿನ ನಡುವೆಯೂ ಎದುರಾಳಿ ಆಟಗಾರನಿಗೆ ಕೊಹ್ಲಿ ಅವರು ಪಂದ್ಯ ಮುಗಿದ ಬಳಿಕ ಬ್ಯಾಟಿಂಗ್ ಟಿಪ್ಸ್ ನೀಡಿದರು. ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ತನ್ನ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ವೆಂಕಟೇಶ್ ಅಯ್ಯರ್​ಗೆ ಕೊಹ್ಲಿ ಕೆಲ ಟಿಪ್ಸ್ ನೀಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದೆ.

ಇನ್ನೂ ತಂಡದ ಸೋಲಿನ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಬೇಸರ ಹೊರಹಾಕಿದ್ದು, ಸೋಲಿಗೆ ಬ್ಯಾಟ್ಸ್​ಮನ್​ಗಳೇ ಪ್ರಮುಖ ಕಾರಣ ಎಂದು ಹೇಳಿದ್ದಾರೆ. “ನಾವು 41 ರನ್ ಆಗುವ ಹೊತ್ತಿಗೆ ಕೇವಲ 2 ವಿಕೆಟ್​ಗಳನ್ನಷ್ಟೆ ಕಳೆದುಕೊಂಡಿದ್ದೆವು. ಆದರೆ, ನಂತರದ 20 ರನ್​ಗಳಲ್ಲಿ ಪ್ರಮುಖ 5 ವಿಕೆಟ್ ಕಳೆದುಕೊಂಡೆವು. ಈ ಸಂದರ್ಭ ಪಂದ್ಯದಲ್ಲಿ ಹಿಡಿತ ಸಾಧಿಸಲು ನಮಗೆ ತುಂಬಾನೆ ಕಷ್ಟವಾಯಿತು. ಇದು ಆರ್​ಸಿಬಿ ತಂಡಕ್ಕೆ ಎಚ್ಚರಿಕೆಯ ಕರೆಗಂಟೆ. ಇದರಿಂದ ಪಾಠ ಕಲಿತಿದ್ದೇವೆ. ಯಾವ ವಿಚಾರವನ್ನು ಸರಿಪಡಿಸಬೇಕು ಎಂಬುದು ಸರಿಯಾಗಿ ಮನವರಿಕೆ ಆಗಿದೆ” ಎಂದು ಕೊಹ್ಲಿ ಪಂದ್ಯ ಮುಗಿದ ಬಳಿಕ ಹೇಳಿದ್ದಾರೆ.

ಇದೇವೇಳೆ ಆರ್​ಸಿಬಿಯ ಮೂರು ವಿಕೆಟ್ ಕಿತ್ತ ವರುಣ್ ಚಕ್ರವರ್ತಿ ವಿಚಾರವಾಗಿಯೂ ಕೊಹ್ಲಿ ಮಾತನಾಡಿದ್ದು, ಮಂದಿನ ತಿಂಗಳಿನಲ್ಲಿ ಆರಂಭವಾಗುವ ಟಿ-20 ವಿಶ್ವಕಪ್​ಲ್ಲಿ ವರುಣ್ ಚಕ್ರವರ್ತಿ ಭಾರತ ತಂಡದ ಪ್ರಮುಖ ಅಸ್ತ್ರವಾಗಲಿದ್ದಾರೆ. ವರುಣ್ ಆಟ ಉತ್ತಮವಾಗಿತ್ತು. ಭಾರತ ತಂಡದಲ್ಲಿ ಈತ ಪ್ರಮುಖ ಅಸ್ತ್ರವಾಗಲಿದ್ದಾನೆ. ಯುವ ಆಟಗಾರರಲ್ಲಿ ಇಂತಹ ಪ್ರದರ್ಶನವನ್ನು ನಾನು ಕಾಣಲು ಇಚ್ಛಿಸುತ್ತೇನೆ. ಇದರಿಂದ ಭಾರತದ ತಂಡದ ಭವಿಷ್ಯ ಉತ್ತಮವಾಗಿರುತ್ತದೆ ಎಂದು ಹೇಳಿದ್ದಾರೆ.

ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿ 19 ಓವರ್‌ಗಳಲ್ಲಿ 92 ರನ್‌ಗಳಿಗೆ ಸರ್ವಪತನ ಕಂಡಿತು. ತನ್ನ ಅದ್ಭುತ ಪ್ರದರ್ಶನದಿಂದಲೇ ಟಿ-20 ವಿಶ್ವಕಪ್​ಗೂ ಆಯ್ಕೆಯಾಗಿರುವ ವರುಣ್ ಚಕ್ರವರ್ತಿ 4 ಓವರ್​​ಗೆ ಕೇವಲ 13 ರನ್ ನೀಡಿ 3 ವಿಕೆಟ್ ಕಿತ್ತರೆ, ಆಲ್ರೌಂಡರ್ ಆಂಡ್ರೆ ರಸೆಲ್ (9ಕ್ಕೆ 3) ಮಾರಕ ದಾಳಿ ನಡೆಸಿದರು. ಅಲ್ಪ ಮೊತ್ತ ಬೆನ್ನಟ್ಟಿದ ಕೆಕೆಆರ್ 10 ಓವರ್‌ಗಳಲ್ಲಿ 1 ವಿಕೆಟ್‌ಗೆ 94 ರನ್‌ಗಳಿಸಿ ಗೆಲುವಿನ ದಡ ಸೇರಿತು.

Virat Kohli: ಆರ್​​ಸಿಬಿ ಹೀನಾಯ ಸೋಲಿನ ಬಳಿಕ ನಾಯಕ ವಿರಾಟ್ ಕೊಹ್ಲಿ ಅಚ್ಚರಿಯ ಹೇಳಿಕೆ

ಸಖತ್ ವೈರಲ್ ಆಗುತ್ತಿದೆ ಆರ್​ಸಿಬಿ ಥೆರಫಿಸ್ಟ್ ನವನೀತ ಹಾಗೂ ಜೇಮಿಸನ್ ಕಣ್ಣೋಟದ ಫೋಟೋ

(IPL 2021 KKR vs RCB After KKR Beat RCB Venkatesh Iyer was seen talking to RCB captain Virat Kohli)

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು